AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ

ಮಳೆಗೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳು ಜಲಾವೃತಗೊಂಡಿದ್ದವು. ಸಾಯಿಲೇಔಟ್, ಯಲಹಂಕ, ಕೋರಮಂಗಲ ಸುತ್ತಮುತ್ತ ಇಡೀ ಏರಿಯಾ ನೀರಿನಿಂದ ಆವರಿಸಿಬಿಟ್ಟಿತ್ತು. ಇತ್ತ, ಮುಂಗಾರು ಮಳೆ ಆರಂಭವಾಗುತ್ತಿರುವ ಹೊತ್ತಿನಲ್ಲೇ ಪಾಲಿಕೆ ಸಮಸ್ಯೆಗೆ ಪರಿಹಾರ ಹುಡುಕುತ್ತೆ ಅಂತ ಜನರು ಕಾದುಕುಳಿತಿದ್ದಾರೆ. ಆದರೆ, ಪಾಲಿಕೆ ಮಾತ್ರ ಜನರಿಗೆ ಬೋಟ್ ಭಾಗ್ಯ ನೀಡಲು ತೀರ್ಮಾನಿಸಿದೆ. ಏನಿದು ಬೋಟ್​ ಭಾಗ್ಯ? ಇಲ್ಲಿದೆ ವಿವರ

ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ
ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ
ಶಾಂತಮೂರ್ತಿ
| Edited By: |

Updated on: May 30, 2025 | 10:29 PM

Share

ಬೆಂಗಳೂರು, ಮೇ 30: ಐಟಿಬಿಟಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಉಂಟಾಗುವ ಮಳೆ ಅವಾಂತರಗಳನ್ನು ಸರಿಪಡಿಸಬೇಕಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಮಹಾನಗರದ ಮಂದಿಗೆ ಬೋಟ್ ಭಾಗ್ಯ ನೀಡಲು ಹೊರಟಿದೆ. ಅಗ್ನಿಶಾಮಕ ದಳ ಹಾಗೂ ಎಸ್​ಡಿಆರ್​ಎಫ್​ ತಂಡಗಳು ಬೋಟ್​ಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತವೆ. ಆದರೆ, ಇದೀಗ ಬಿಬಿಎಂಪಿಯೇ ಬೋಟ್ ಖರೀದಿಗೆ ಮುಂದಾಗಿದ್ದು, ಪ್ರತಿ ಜೋನ್​ಗೆ ಒಂದರಂತೆ ಏಳು ಬೋಟ್​ಗಳನ್ನು ಖರೀದಿಸಲು, ಬರೋಬ್ಬರಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಡರ್ ಕರೆದಿದೆ. ಬೋಟ್​ಗಳ ಖರೀದಿ ಜೊತೆಗೆ 50 ಲೈಫ್ ಜಾಕೆಟ್, ಮೋಟಾರ್ ಪಂಪ್​ಗಳನ್ನ ಖರೀದಿಸಲು ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಹಲವೆಡೆ ಮಳೆ ಬಂದಾಗ ನೀರು ನಿಂತು ಸಮಸ್ಯೆ ಎದುರಾಗುತ್ತೆ. ರಾಜಕಾಲುವೆಗಳು, ಕೆರೆಗಳ ಒತ್ತುವರಿ ತೆರವು ಮಾಡದೆ, ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡದೆ ಬೋಟ್ ಖರೀದಿಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶಕ್ಕೆ ಹೊರಹಾಕುತ್ತಿದ್ದಾರೆ. ಅಲ್ಲದೇ, ಬಿಬಿಎಂಪಿಗೆ ಹಿಡಿಶಾಪ ಹಾಕಿದ್ದಾರೆ.

ಇದನ್ನೂ ಓದಿ: ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಗ್ಯಾಂಗ್ ಸಿಕ್ಕಿಬಿತ್ತು, ಮಾಡಿದ್ದೇನು ಗೊತ್ತಾ?

ಇದನ್ನೂ ಓದಿ
Image
ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ಆದೇಶ ರದ್ದುಗೊಳಿಸಿದ ಕೋರ್ಟ್!
Image
ಬೆಂಗಳೂರು: ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಚಾಲಕನ ಬೆರಳು ಕಚ್ಚಿ ವಿಕೃತಿ
Image
ಬಿಎಂಟಿಸಿಯಿಂದ ದಿವ್ಯ ದರ್ಶನ: ಒಂದೇ ದಿನ ಬೆಂಗಳೂರಿನ 8 ದೇಗುಲಗಳಿಗೆ ಪ್ರವಾಸ

ಸದ್ಯ ರಾಜಧಾನಿಯಲ್ಲಿ ಮಳೆ ಬಂದಾಗ ಸೂಕ್ಷ್ಮ ಪ್ರದೇಶ ಅಂತ 200 ಸ್ಥಳಗಳನ್ನು ಗುರುತಿಸಿರುವ ಪಾಲಿಕೆ, ಈಗ ಮಳೆ ಬಿಡುವು ಕೊಟ್ಟರೂ ಕೂಡ ಆ ಸ್ಥಳಗಳಲ್ಲಿ ನಡೆಯಬೇಕಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸದ ಕೈ ಕಟ್ಟಿ ಕುಳಿತಿದೆ. ಇತ್ತ ಮಳೆ ಅವಾಂತರಗಳಿಂದ ಮುಕ್ತಿ ಕೊಡಿ ಅಂತಿರುವ ಜನರಿಗೆ ಬೋಟ್ ಭಾಗ್ಯ ಕೊಡಲು ಹೊರಟಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನಡೆಗೆ ವಿರೋಧ ವ್ಯಕ್ತವಾಗ್ತಿದ್ದು, ಗ್ರೇಟರ್ ಬೆಂಗಳೂರನ್ನು ವಾಟರ್ ಬೆಂಗಳೂರು ಮಾಡಲು ಹೊರಟಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ