AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ

ಮಳೆಗೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳು ಜಲಾವೃತಗೊಂಡಿದ್ದವು. ಸಾಯಿಲೇಔಟ್, ಯಲಹಂಕ, ಕೋರಮಂಗಲ ಸುತ್ತಮುತ್ತ ಇಡೀ ಏರಿಯಾ ನೀರಿನಿಂದ ಆವರಿಸಿಬಿಟ್ಟಿತ್ತು. ಇತ್ತ, ಮುಂಗಾರು ಮಳೆ ಆರಂಭವಾಗುತ್ತಿರುವ ಹೊತ್ತಿನಲ್ಲೇ ಪಾಲಿಕೆ ಸಮಸ್ಯೆಗೆ ಪರಿಹಾರ ಹುಡುಕುತ್ತೆ ಅಂತ ಜನರು ಕಾದುಕುಳಿತಿದ್ದಾರೆ. ಆದರೆ, ಪಾಲಿಕೆ ಮಾತ್ರ ಜನರಿಗೆ ಬೋಟ್ ಭಾಗ್ಯ ನೀಡಲು ತೀರ್ಮಾನಿಸಿದೆ. ಏನಿದು ಬೋಟ್​ ಭಾಗ್ಯ? ಇಲ್ಲಿದೆ ವಿವರ

ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ
ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ
ಶಾಂತಮೂರ್ತಿ
| Edited By: |

Updated on: May 30, 2025 | 10:29 PM

Share

ಬೆಂಗಳೂರು, ಮೇ 30: ಐಟಿಬಿಟಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಉಂಟಾಗುವ ಮಳೆ ಅವಾಂತರಗಳನ್ನು ಸರಿಪಡಿಸಬೇಕಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಮಹಾನಗರದ ಮಂದಿಗೆ ಬೋಟ್ ಭಾಗ್ಯ ನೀಡಲು ಹೊರಟಿದೆ. ಅಗ್ನಿಶಾಮಕ ದಳ ಹಾಗೂ ಎಸ್​ಡಿಆರ್​ಎಫ್​ ತಂಡಗಳು ಬೋಟ್​ಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತವೆ. ಆದರೆ, ಇದೀಗ ಬಿಬಿಎಂಪಿಯೇ ಬೋಟ್ ಖರೀದಿಗೆ ಮುಂದಾಗಿದ್ದು, ಪ್ರತಿ ಜೋನ್​ಗೆ ಒಂದರಂತೆ ಏಳು ಬೋಟ್​ಗಳನ್ನು ಖರೀದಿಸಲು, ಬರೋಬ್ಬರಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಡರ್ ಕರೆದಿದೆ. ಬೋಟ್​ಗಳ ಖರೀದಿ ಜೊತೆಗೆ 50 ಲೈಫ್ ಜಾಕೆಟ್, ಮೋಟಾರ್ ಪಂಪ್​ಗಳನ್ನ ಖರೀದಿಸಲು ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಹಲವೆಡೆ ಮಳೆ ಬಂದಾಗ ನೀರು ನಿಂತು ಸಮಸ್ಯೆ ಎದುರಾಗುತ್ತೆ. ರಾಜಕಾಲುವೆಗಳು, ಕೆರೆಗಳ ಒತ್ತುವರಿ ತೆರವು ಮಾಡದೆ, ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡದೆ ಬೋಟ್ ಖರೀದಿಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶಕ್ಕೆ ಹೊರಹಾಕುತ್ತಿದ್ದಾರೆ. ಅಲ್ಲದೇ, ಬಿಬಿಎಂಪಿಗೆ ಹಿಡಿಶಾಪ ಹಾಕಿದ್ದಾರೆ.

ಇದನ್ನೂ ಓದಿ: ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಗ್ಯಾಂಗ್ ಸಿಕ್ಕಿಬಿತ್ತು, ಮಾಡಿದ್ದೇನು ಗೊತ್ತಾ?

ಇದನ್ನೂ ಓದಿ
Image
ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ಆದೇಶ ರದ್ದುಗೊಳಿಸಿದ ಕೋರ್ಟ್!
Image
ಬೆಂಗಳೂರು: ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಚಾಲಕನ ಬೆರಳು ಕಚ್ಚಿ ವಿಕೃತಿ
Image
ಬಿಎಂಟಿಸಿಯಿಂದ ದಿವ್ಯ ದರ್ಶನ: ಒಂದೇ ದಿನ ಬೆಂಗಳೂರಿನ 8 ದೇಗುಲಗಳಿಗೆ ಪ್ರವಾಸ

ಸದ್ಯ ರಾಜಧಾನಿಯಲ್ಲಿ ಮಳೆ ಬಂದಾಗ ಸೂಕ್ಷ್ಮ ಪ್ರದೇಶ ಅಂತ 200 ಸ್ಥಳಗಳನ್ನು ಗುರುತಿಸಿರುವ ಪಾಲಿಕೆ, ಈಗ ಮಳೆ ಬಿಡುವು ಕೊಟ್ಟರೂ ಕೂಡ ಆ ಸ್ಥಳಗಳಲ್ಲಿ ನಡೆಯಬೇಕಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸದ ಕೈ ಕಟ್ಟಿ ಕುಳಿತಿದೆ. ಇತ್ತ ಮಳೆ ಅವಾಂತರಗಳಿಂದ ಮುಕ್ತಿ ಕೊಡಿ ಅಂತಿರುವ ಜನರಿಗೆ ಬೋಟ್ ಭಾಗ್ಯ ಕೊಡಲು ಹೊರಟಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನಡೆಗೆ ವಿರೋಧ ವ್ಯಕ್ತವಾಗ್ತಿದ್ದು, ಗ್ರೇಟರ್ ಬೆಂಗಳೂರನ್ನು ವಾಟರ್ ಬೆಂಗಳೂರು ಮಾಡಲು ಹೊರಟಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್