AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಾಲ್​ಗಳಾಗಲಿವೆ ಬಿಡಿಎ ಕಾಂಪ್ಲೆಕ್ಸ್​​ಗಳು! ಹರಿದು ಬರಲಿದೆ ಭರ್ಜರಿ ಆದಾಯ

BDA Complex; ಬಿಡಿಎ ಕಾಂಪ್ಲೆಕ್ಸ್​ಗಳನ್ನು ಮಾಲ್​ಗಳನ್ನಾಗಿ ಪರಿವರ್ತಿಸುವ ಬಗ್ಗೆ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ನಂತರ ಬಿಜೆಪಿ ಆಡಳಿತದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರ ಹಳೆಯ ಪ್ರಸ್ತಾವನೆಯನ್ನು ಮುಂದುವರಿಸಲು ಮುಮದಾಗಿದ್ದು, ಬಾಡಿಗೆದಾರರಿಂದ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು: ಮಾಲ್​ಗಳಾಗಲಿವೆ ಬಿಡಿಎ ಕಾಂಪ್ಲೆಕ್ಸ್​​ಗಳು! ಹರಿದು ಬರಲಿದೆ ಭರ್ಜರಿ ಆದಾಯ
ಮಾಲ್​ಗಳಾಗಲಿವೆ ಬಿಡಿಎ ಕಾಂಪ್ಲೆಕ್ಸ್​​ಗಳು
Shivaraj
| Edited By: |

Updated on: May 08, 2024 | 12:50 PM

Share

ಬೆಂಗಳೂರು, ಮೇ 8: ಬಿಡಿಎ ಕಾಂಪ್ಲೆಕ್ಸ್​​​ಗಳು (BDA Complex) ಇನ್ನು ಮುಂದೆ ಮಾಲ್​​ಗಳಾಗಿ (Malls) ಪರಿವರ್ತನೆಯಾಗಲಿವೆ. ಬೆಂಗಳೂರಿನ 7 ಕಾಂಪ್ಲೆಕ್ಸ್​​​ಗಳನ್ನು ಮಾಲ್​ಗಳನ್ನಾಗಿ ಪರಿವರ್ತನೆ ಮಾಡಲು ಬಿಡಿಎ ಮುಂದಾಗಿದೆ. ಹೀಗಾಗಿ ಕಾಂಪ್ಲೆಕ್ಸ್​​​​ಗಳಲ್ಲಿರುವ ಬಾಡಿಗೆದಾರರನ್ನು ಈಗಾಗಲೇ ಬಿಡಿಎ ಅಧಿಕಾರಿಗಳು (BDA Officials) ಖಾಲಿ ಮಾಡಿಸುತ್ತಿದ್ದಾರೆ. 2023 ಸೆಪ್ಟೆಂಬರ್‌ನಲ್ಲಿ ಈ ಯೋಜನೆಯ ಒಪ್ಪಂದಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿತ್ತು. ಇದೀಗ ಯೋಜನೆಯ ಅನುಷ್ಠಾನಕ್ಕೆ ಬಿಡಿಎ ಕಾರ್ಯಪ್ರವೃತ್ತವಾಗಿದೆ.

ಯಾವೆಲ್ಲ ಕಾಂಪ್ಲೆಕ್ಸ್​ಗಳು?

ಅರ್​​ಟಿ ನಗರ, ಇಂದಿರಾ ನಗರ, ಸದಾಶಿವನಗರ, ಎಚ್ಎಸ್ಆರ್ ಲೇಔಟ್, ವಿಜಯನಗರ, ಕೋರಮಂಗಲ ಹಾಗೂ ಆಸ್ಕಿನ್ ಟೌನ್ ಕಾಂಪ್ಲೆಕ್ಸ್​​ಗಳನ್ನ ಮಾಲ್ ಮಾಡಲು ಗುತ್ತಿಗೆ ನೀಡಲು ಬಿಡಿಎ ಮುಂದಾಗಿದೆ. ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿ) 60 ವರ್ಷಗಳಿಗೆ ಗುತ್ತಿಗೆ ನೀಡಲಾಗುತ್ತದೆ.

ವಾರ್ಷಿಕ 40 ಕೋಟಿ ರೂ. ಆದಾಯ

ಕಾಂಪ್ಲೆಕ್ಸ್​​​​ಗಳನ್ನು ಮಾಲ್​ಗಳನ್ನಾಗಿ ಪರಿವರ್ತನೆ ಮಾಡುವ ಯೋಜನೆಯಿಂದ ಬಿಡಿಎಗೆ ವಾರ್ಷಿಕ 40 ಕೋಟಿ ರೂ. ಆದಾಯ ದೊರೆಯಬಹುದೆಂಬ ನಿರೀಕ್ಷೆ ಇದೆ. ಕೋರಮಂಗಲ, ಎಚ್‌ಎಸ್ಆರ್‌ ಲೇಔಟ್‌, ಆರ್‌ಟಿ ನಗರ, ಸದಾಶಿವನಗರಗಳಲ್ಲಿರುವ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಎಂಎಫ್‌ಎಆರ್‌ ಡೆವಲಪರ್ಸ್​​​ಗೆ ಗುತ್ತಿಗೆ ನೀಡಲಾಗುತ್ತದೆ. ಇಂದಿರಾನಗರದಲ್ಲಿರುವ ಕಾಂಪ್ಲೆಕ್ಸ್​​​​ ಅನ್ನು ಎಂಬೆಸ್ಸಿ ಗ್ರೂಪ್​​ನ ಮೇವರಿಕ್​​ಗೆ ಗುತ್ತಿಗೆ ನೀಡಲಾಗಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.

2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಈ ಪ್ರಸ್ತಾವನೆ ಬಂದಿತ್ತು. ಆದರೆ ನಂತರ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದರು. ಇದೀಗ ಹಳೆ ಟೆಂಡರನ್ನು ಫೈನಲ್ ಮಾಡಿ ಆದೇಶ ಹೊರಡಿಸಲಾಗಿದೆ.

ಬಾಡಿಗೆದಾರರಿಂದ ವಿರೋಧ

ಬಿಡಿಎ ನಿರ್ಧಾರಕ್ಕೆ ಈಗಾಗಲೇ ಕಾಂಪ್ಲೆಕ್ಸ್​​​ಗಳಲ್ಲಿ ಇರುವ ಬಾಡಿಗೆದಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಖಾಸಗೀಕರಣ ಮಾಡುವುದು ಬೇಡ. ಅದರ ಬದಲು ಬಿಡಿಎಯೇ ನಿರ್ಮಾಣ ಮಾಡುವುದು ಸೂಕ್ತ ಎಂದು ಬಾಡಿಗೆದಾರರು ಹೇಳಿದ್ದಾರೆ.

ಇದನ್ನೂ ಓದಿ: ಬಿಸಿಲಿನ ಜೊತೆಗೆ ತರಕಾರಿ ಬೆಲೆಯೂ ಏರಿಕೆ: ಗ್ರಾಹಕರಿಗೆ ಹುಳಿಯಾದ ನಿಂಬೆಹಣ್ಣು ದರ

ಈ ಮಧ್ಯೆ, ಬಿಡಿಎ ಅಭಿಯಂತರ ಸದಸ್ಯ ಶಾಂತ ರಾಜಣ್ಣ ಪ್ರತಿಕ್ರಿಯಿಸಿದ್ದು, ಈ ಯೋಜನೆಯಿಂದ ಬಿಡಿಎಗೆ ಲಾಭವಿದೆ. ಹೀಗಾಗಿ ಆದಷ್ಟು ಬೇಗ ಮಾಲ್​​​ಗಳನ್ನಾಗಿ ನಿರ್ಮಾಣ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್