AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ದೆಹಲಿಗಿಂತ ಬೆಂಗಳೂರು ಇಷ್ಟ, ಈ ಕಾರಣಕ್ಕೆ

ದೆಹಲಿಯಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ವ್ಯಕ್ತಿಯೊಬ್ಬರು ಇಲ್ಲಿನ ಸಂಸ್ಕೃತಿ ಮತ್ತು ಜನರನ್ನು ಹಾಡಿ ಹೊಗಳಿದ್ದಾರೆ. ಅನೇಕ ಉತ್ತರ ಭಾರತೀಯರು ಬೆಂಗಳೂರಿನ ಸ್ಥಳೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಇಷ್ಟಪಡುವುದಿಲ್ಲ, ಆದರೆ ಅದನ್ನು ಅಳವಡಿಸಿಕೊಂಡರೆ ಜೀವನ ಸುಲಭ. ಇದೀಗ ಈ ಪೋಸ್ಟ್​ ಬೆಂಗಳೂರು ವರ್ಸಸ್ ದೆಹಲಿ, ಜೀವನ ವೆಚ್ಚ ಮತ್ತು ಭಾಷಾ ಸಮಸ್ಯೆಗಳ ಕುರಿತು ಚರ್ಚೆಗೆ ಕಾರಣವಾಗಿದೆ.

ನನಗೆ ದೆಹಲಿಗಿಂತ ಬೆಂಗಳೂರು ಇಷ್ಟ, ಈ ಕಾರಣಕ್ಕೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 21, 2025 | 3:46 PM

Share

ಬೆಂಗಳೂರು, ಅ.21: ಬೆಂಗಳೂರು ಬಿಡುತ್ತೇವೆ, ಇಲ್ಲಿ ಎಲ್ಲವೂ ದುಬಾರಿ, ಇಲ್ಲಿನ ಟ್ರಾಫಿಕ್ ಯಾರಿಗೆ ಬೇಕು ಎಂದೆಲ್ಲ ಹೇಳುವವರ ಮಧ್ಯೆ, ನನಗೆ ದೆಹಲಿಗಿಂತ ಬೆಂಗಳೂರು ಇಷ್ಟು ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಈ ವ್ಯಕ್ತಿ ವೈರಲ್​ ಆಗಿದ್ದಾರೆ. ಇದೀಗ ಬೆಂಗಳೂರು ವರ್ಸಸ್ ದೆಹಲಿ (Bangalore vs Delhi) ಎಂಬ ಚರ್ಚೆಗೆ ಕಾರಣವಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಶಿಫ್ಟ್​​ ಆಗಿರುವ ಈ ವ್ಯಕ್ತಿಗೆ ಬೆಂಗಳೂರು ಸಕಾರಾತ್ಮಕ ಅನುಭವ ನೀಡಿದೆಯಂತೆ. ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ದೆಹಲಿಯಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ವಾಸಿಸಿದ್ದ ಈ ವ್ಯಕ್ತಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ. ನಗರದ ಸಂಸ್ಕೃತಿ, ಇಲ್ಲಿ ಆಚರಣೆ ಹಾಗು ಇಲ್ಲಿನ ಜನ ಸುಂದರವಾಗಿದ್ದಾರೆ. ಇನ್ನು ಇದೊಂದು ಶ್ರೇಷ್ಠ ಪ್ರದೇಶವಾಗಿದೆ ಎಂದು ಹಾಡಿ ಹೊಗಳಿದ್ದಾರೆ.

ಬೆಂಗಳೂರಿಗೆ ವಲಸೆ ಬರುವ ಅನೇಕ ಉತ್ತರ ಭಾರತೀಯರು ಇಲ್ಲಿನ ವಿಚಾರಗಳಿಗೆ ಹೊಂದಿಕೊಳ್ಳುವುದಿಲ್ಲ. ಹಾಗೂ ಹಲವು ಬಾರಿ ಭಾಷೆ ವಿಚಾರವಾಗಿ ಇಲ್ಲಿ ಸಂಘರ್ಷ ನಡೆದದ್ದು ಇದೆ. ಆದರೆ ಈ ವ್ಯಕ್ತಿ ಇಲ್ಲಿನ ಸಂಪ್ರದಾಯಗಳು ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಇಲ್ಲಿ ಬದಕಲು ತುಂಬಾ ಸುಲಭವಾಗಬಹುದು ಎಂದು ಹೇಳಿದ್ದಾರೆ. ಇದನ್ನು ಎಕ್ಸ್​​​ನಲ್ಲಿ ಅವರು ಹೀಗೆ ಹಂಚಿಕೊಂಡಿದ್ದಾರೆ. ” ನಾನು 10 ವರ್ಷಕ್ಕಿಂತಲ್ಲೂ ದೆಹಲಿಯಲ್ಲಿ ವಾಸವಾಗಿದ್ದೆ ಇತ್ತೀಚೆಗೆ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದೇನೆ. ನನಗೆ ದೆಹಲಿಗಿಂತ ಬೆಂಗಳೂರೇ ಇಷ್ಟ. ಹೆಚ್ಚಿನ ಉತ್ತರ ಭಾರತೀಯರು ಸ್ಥಳೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಇಷ್ಟಪಡುವುದಿಲ್ಲ, ಇದರಿಂದ ಅವರು ಬೆಂಗಳೂರಿನ ವಿಚಾರಗಳಿಗೆ ಹೊಂದಿಕೊಳ್ಳುವುದರಲ್ಲಿ ವಿಫಲವಾಗಿದ್ದಾರೆ. ಬೆಂಗಳೂರು ಮತ್ತು ಅದರ ಸಂಸ್ಕೃತಿ ಸುಂದರವಾಗಿದೆ. ಜನರು ಕೂಡ ಶ್ರೇಷ್ಠರು” ಎಂದು ಹೇಳಿದ್ದಾರೆ. ಈ ಪೋಸ್ಟ್​ನ್ನು @gurudutt_biswal ಎಂಬ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

ಈ ಪೋಸ್ಟ್​​ಗೆ ಹಲವು ಜನ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುವುದು ತುಂಬಾ ಖುಷಿಯೇ, ಇಲ್ಲಿನ ಆಹ್ಲಾದಕರ ಹವಾಮಾನ, ಮಗುವನ್ನು ಉನ್ನತ ಶಾಲೆಗೆ ಸೇರಿಸಿದ್ದಾನೆ. ನಾವು ಇಬ್ಬರೂ ಕೂಡ ಒಳ್ಳೆಯ ಸಂಬಳ ಪಡೆಯುವ ಕೆಲಸದಲ್ಲೂ ಇದ್ದೇವು, ಆದರೆ ಹೊರಗಿನವರು ಎಂಬ ಭಾವನೆಯನ್ನು ನಿರಂತರವಾಗಿ ಇಲ್ಲಿ ಅನುಭವಿಸುತ್ತಿರುವುದರಿಂದ ಮತ್ತೆ ಗುರುಗ್ರಾಮ್‌ ಹಿಂತಿರುಗಬೇಕಾಯಿತು ಎಂದು ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಅನೇಕರು ಕಮೆಂಟ್​ ಮಾಡಿದ್ದಾರೆ. ನಿಮಗೆ ಧನ್ಯವಾದಗಳು, ಬೆಂಗಳೂರಿನ ಬಗ್ಗೆ ಕೆಟ್ಟದಾಗಿ ಮಾತನಾಡುವ ಜನರ ಮಧ್ಯೆ, ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿರುವುದು ತುಂಬಾ ಇಷ್ಟವಾಯಿತು ಎಂದು ಒಬ್ಬ ಬಳಕೆದಾರ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಹೊಸೂರು ಮೆಟ್ರೋ: ಅಂತರರಾಜ್ಯ ಯೋಜನೆ ತಾಂತ್ರಿಕವಾಗಿ ಅಸಾಧ್ಯ ಎಂದ BMRCL

ಕನ್ನಡಿಗರು ಎಲ್ಲರನ್ನೂ ಸ್ವಾಗತಿಸುತ್ತಾರೆ. ಇಲ್ಲಿ ಎಲ್ಲದಕ್ಕೂ ಮುಕ್ತ ಅವಕಾಶ ಇದೆ. ಎಲ್ಲರನ್ನೂ ಬೆಳೆಸುವ ಜಗತ್ತು ಬೆಂಗಳೂರು, ಜತೆಗೆ ಎಲ್ಲವನ್ನು ವೇಗವಾಗಿ ಕಲಿಯಬಹುದು. ಆದರೆ ಇಲ್ಲಿರುವ ಅನೇಕ ಹೊರಗಿನ ಜನರಿಗೆ ಇಲ್ಲಿನ ವಿಚಾರಗಳನ್ನು ತಿಳಿದುಕೊಳ್ಳಲು ಇಷ್ಟವಿಲ್ಲ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ. ಬೆಂಗಳೂರ 10-15 ವರ್ಷಗಳ ಹಿಂದಿನ ನಗರವಲ್ಲ. ಮೊದಲು ಇದು ಮೋಜಿಗೆ ಹೆಸರುವಾಸಿಯಾಗಿತ್ತು, ಆದರೆ ಇಂದು ರಾಜ್ಯ ಸರ್ಕಾರದ ಸೆಸ್ ಮತ್ತು ತೆರಿಗೆಗಳಿಂದಾಗಿ ದೊಡ್ಡ ಸಂಚಾರ ಸಮಸ್ಯೆ ಮತ್ತು ಹೆಚ್ಚಿನ ಜೀವನ ವೆಚ್ಚವನ್ನು ಹಾಕುತ್ತಿದೆ. ಇದರ ಜತೆಗೆ ಭಾಷಾಭಿಮಾನಿಗಳು ಸಹ ಬ್ರಾಂಡ್ ನಗರವನ್ನು ನಾಶಪಡಿಸುತ್ತಿದ್ದಾರೆ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ