AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟಿ, ಮಡಿಕೇರಿಯಂತಾದ ಬೆಂಗಳೂರು; ಕೂಲ್ ವೆದರ್​ಗೆ ಮನ ಸೋತ ಜನ

ಒಂದು ದಿನದ ಹಿಂದೆ 15 ರಿಂದ 17 ಡಿಗ್ರಿಯಷ್ಟು ಕನಿಷ್ಠ ಉಷ್ಣಾಂಶ ದಾಖಾಲಾಗಿತ್ತು. ಇದೀಗಾ ನಗರದಲ್ಲಿ ಮುಸುಕಿನ ವಾತಾವರಣ ಕಂಡುಬರುತ್ತಿದ್ದು ಬೆಂಗಳೂರು ಈಗ ಊಟಿ, ಕೊಡಗಿನಂತಾಗಿದೆ. ಹೀಗಾಗಿ ಕಬ್ಬನ್ ಪಾರ್ಕ್, ಲಾಲ್ ಬಾಗ್​ಗಳಲ್ಲಿ ಕೂಲ್ ವೆದರನ್ನ ಸಿಲಿಕಾನ್ ಸಿಟಿ ಮಂದಿ ಎಂಜಾಯ್ ಮಾಡುತ್ತಿದ್ದಾರೆ.

ಊಟಿ, ಮಡಿಕೇರಿಯಂತಾದ ಬೆಂಗಳೂರು; ಕೂಲ್ ವೆದರ್​ಗೆ ಮನ ಸೋತ ಜನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 17, 2023 | 7:52 AM

ಬೆಂಗಳೂರು, ಡಿ.17: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಫುಲ್ ಕೂಲ್ ಕೂಲ್ ವೆದರ್ ಇದೆ (Bengaluru Weather). ನಗರದಲ್ಲಿ ಅಧಿಕೃತವಾಗಿ ಚಳಿಗಾಲ ಆರಂಭವಾಗಿದ್ದು ವಾತಾವರಣ ತಂಪಾಗಿದೆ. ಕಳೆದ ಎರಡು ದಿನದಿಂದ ಚಳಿಯ ವಾತಾವರಣ ಹೆಚ್ಚಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆ ಚಳಿಯ ವಾತಾವರಣ ಕಂಡುಬರುತ್ತಿದೆ. ಹಗಲಲ್ಲೂ ಮೋಡ ಕವಿದ ವಾತಾವರಣ ಇದೆ. ಬಿಸಿಲಿನಲ್ಲಿಯೂ ಚಳಿಯ ಅನುಭವವಾಗುತ್ತಿದೆ. ಸಿಲಿಕಾನ್ ಸಿಟಿ ಈಗ ಕೂಲ್ ಸಿಟಿಯಾಗಿದೆ.

ನಗರದಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇದ್ದು ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ, ಬೆಂಗಳೂರಿನಲ್ಲಿಯು ಉಷ್ಣಾಂಶ ಇಳಿಕೆಯಾಗಿದೆ. ಕಳೆದ ಎರಡು ದಿನಗಳಲ್ಲಿ ಬೆಂಗಳೂರು ನಗರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಹೆಚ್​ಎಎಲ್​ನಲ್ಲಿ ಕನಿಷ್ಠ ಉಷ್ಣಾಂಶ ಕಂಡುಬಂದಿದೆ. ಒಂದು ದಿನದ ಹಿಂದೆ 15 ರಿಂದ 17 ಡಿಗ್ರಿಯಷ್ಟು ಕನಿಷ್ಠ ಉಷ್ಣಾಂಶ ದಾಖಾಲಾಗಿತ್ತು. ಇದೀಗಾ ನಗರದಲ್ಲಿ ಮುಸುಕಿನ ವಾತಾವರಣ ಕಂಡುಬರುತ್ತಿದ್ದು ಬೆಂಗಳೂರು ಈಗ ಊಟಿ, ಕೊಡಗಿನಂತಾಗಿದೆ. ಹೀಗಾಗಿ ಕಬ್ಬನ್ ಪಾರ್ಕ್, ಲಾಲ್ ಬಾಗ್​ಗಳಲ್ಲಿ ಕೂಲ್ ವೆದರನ್ನ ಸಿಲಿಕಾನ್ ಸಿಟಿ ಮಂದಿ ಎಂಜಾಯ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಮತ್ತೆ ಕೊರೊನಾ ಹೆಚ್ಚಳ; ರಾಜ್ಯಕ್ಕೆ ಕೋವಿಡ್ ಆತಂಕ, ಆರೋಗ್ಯ ಇಲಾಖೆಯಿಂದ ಸಭೆ

ಇನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಧಾರವಾಡ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಡಿಸೆಂಬರ್ 20ರವರೆಗೂ ಮಳೆಯಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?