AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣೆಗೆಂದು ಸೊಂಟದಲ್ಲಿಟ್ಟುಕೊಂಡಿದ್ದ ಚಾಕುವೇ ಜೀವಕ್ಕೆ ಮುಳುವಾಯ್ತು

ರಕ್ಷಣೆಗೆಂದು ಸೊಂಟದಲ್ಲಿಟ್ಟುಕೊಂಡಿದ್ದ ಚಾಕುವೇ ಜೀವಕ್ಕೆ ಮುಳುವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಾಳದಲ್ಲಿ ಮಧ್ಯರಾತ್ರಿ ಇಬ್ಬರು ಯುವಕರಿದ್ದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಸೋದರ ಸಂಬಂಧಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಕ್ಷಣೆಗೆಂದು ಸೊಂಟದಲ್ಲಿಟ್ಟುಕೊಂಡಿದ್ದ ಚಾಕುವೇ ಜೀವಕ್ಕೆ ಮುಳುವಾಯ್ತು
ಚಾಕು
ನಯನಾ ರಾಜೀವ್
|

Updated on: Oct 18, 2024 | 10:28 AM

Share

ರಕ್ಷಣೆಗೆಂದು ಸೊಂಟದಲ್ಲಿಟ್ಟುಕೊಂಡಿದ್ದ ಚಾಕುವೇ ಜೀವಕ್ಕೆ ಮುಳುವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಾಳದಲ್ಲಿ ಮಧ್ಯರಾತ್ರಿ ಇಬ್ಬರು ಯುವಕರಿದ್ದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಸೋದರ ಸಂಬಂಧಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೊಮ್ಮಸಂದ್ರದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ನಾಗರಾಜ್, ರಾಜೇಶ್​ ಕುಮಾರ್ ಮೃತರು. ನಾಗರಾಜ್​ ತಲೆಗೆ ಪೆಟ್ಟುಬಿದ್ದು ಮೃತಪಟ್ಟರೆ, ರಾಜೇಶ್​ ಸೊಂಟದಲ್ಲಿರುವ ಚಾಕುವಿನಿಂದ ಆದ ಗಾಯದಿಂದ ಸಾವನ್ನಪ್ಪಿದ್ದಾರೆ. ರಕ್ಷಣೆಗೆಂದು ಪಡೆದ ಆಯುಧವೇ ಜೀವ ತೆಗೆದಿದೆ.

ಚಾಕುವನ್ನು ಏಕೆ ಇಟ್ಟುಕೊಂಡಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾಗರಾಜ್ ಅತಿ ವೇಗದಲ್ಲಿದ್ದರು, ಬೀಳುವ ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದರು. ಅಲ್ಲಿದ್ದವರು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದರು. ಬಳಿಕ ಆಂಬ್ಯುಲೆನ್ಸ್​ ಕರೆಸಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಷ್ಟರಲ್ಲಿ ಇಬ್ಬರೂ ಸಾವನ್ನಪ್ಪಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಕಟ್ಟಡದ ಮೇಲಿಂದ ಆಯತಪ್ಪಿ‌ ಬಿದ್ದು ಕಾರ್ಮಿಕ ಸಾವು ಕೋಲಾರ: ಕಟ್ಟಡದ ಮೇಲಿಂದ ಆಯತಪ್ಪಿ‌ ಬಿದ್ದು ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಬಂಗಾರಪೇಟೆಯ ಕರ್ನಾಟಕ ರಾಜ್ಯದ ಉಗ್ರಾಣ‌ ನಿಗಮದ ಕಟ್ಟಡದಲ್ಲಿ ನಡೆದಿದೆ. ಕೆಜಿಎಫ್​ನ ಮಾದಮಂಗಲ ನಿವಾಸಿ ನಾರಾಯಣಸ್ವಾಮಿ(35) ಮೃತ ವ್ಯಕ್ತಿ.

ಉಗ್ರಾಣದ ಕಟ್ಟಡ ದುರಸ್ತಿ ಕಾರ್ಯ ವೇಳೆ ದುರಂತ ಸಂಭವಿಸಿದೆ. ಶೀಟ್​​ಗಳನ್ನು ಬದಲಾಯಿಸುವ ಕೆಲಸವನ್ನು ನಾರಾಯಣಸ್ವಾಮಿ ಮಾಡುತ್ತಿದ್ದ. ಶೀಟ್ ಮುರಿದು ಕೆಳಗೆ ಬಿದ್ದು ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎನ್ನಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದಾನೆ. ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನ ಇತರೆ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್