Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಆಟೋ ಚಾಲಕರಿಗೆ ಕೌಂಟರ್ ಕೊಟ್ಟ ಬೈಕ್ ಟ್ಯಾಕ್ಸಿ ಚಾಲಕರು

ನಮಗೆ ಬೈಕ್ ಟ್ಯಾಕ್ಸಿ ಒಂದು ಹೊತ್ತಿನ ಅನ್ನ ನೀಡುತ್ತಿದೆ. ಆಟೋ‌ ಚಾಲಕರು ನಮ್ಮನ್ನು ಹಿಡಿದು ಹೊಡಿತಾರೆ. ಬೆಲೆ ಬಾಳುವ ಮೊಬೈಲ್ ಒಡೆದು ಹಾಕುತ್ತಾರೆ. ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಗುತ್ತಿರುವ ದಬ್ಬಾಳಿಕೆ ತಡೆಗಟ್ಟಬೇಕು ಎಂದು ಬೈಕ್ ಟ್ಯಾಕ್ಸಿ ಚಾಲಕರು ಒತ್ತಾಯಿಸುವ ಮೂಲಕ ಆಟೋ ಚಾಲಕರಿಗೆ ಕೌಂಟರ್ ಕೊಟ್ಟಿದ್ದಾರೆ.

Bengaluru: ಆಟೋ ಚಾಲಕರಿಗೆ ಕೌಂಟರ್ ಕೊಟ್ಟ ಬೈಕ್ ಟ್ಯಾಕ್ಸಿ ಚಾಲಕರು
ಸಾಂದರ್ಭಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
| Updated By: ರಮೇಶ್ ಬಿ. ಜವಳಗೇರಾ

Updated on:Mar 19, 2023 | 12:21 PM

ಬೆಂಗಳೂರು: ಆಟೋ ಚಾಲಕರಿಗೆ( (Auto Drivers)  ಬೈಕ್ ಟ್ಯಾಕ್ಸಿ ಚಾಲಕರು ಕೌಂಟರ್ ಕೊಟ್ಟಿದ್ದಾರೆ. ಹೌದು ರ್ಯಾಪಿಡೋ ಬೈಕ್​ ಟ್ಯಾಕ್ಸಿ (Rapido bike taxi)ಯನ್ನು ನಿಷೇಧಿಸಿ ಎಂದು ಸರ್ಕಾರಕ್ಕೆ(Karnataka Government) ಆಟೋ ಚಾಲಕರು ಒತ್ತಾಯ ಮಾಡಿದ್ದು, ನಾಳೆ(ಮಾ.20) ರಂದು ಬೆಂಗಳೂರಿನಲ್ಲಿ ಆಟೋ ಬಂದ್​ ಮಾಡಲು ತೀರ್ಮಾನಿಸಿದ್ದಾರೆ.ಇದೀಗ ಇದಕ್ಕೆ ಕೌಂಟರ್​ ಕೊಟ್ಟಿರುವ ಬೈಕ್ ಟ್ಯಾಕ್ಸಿ ಚಾಲಕರು, ಬೇಕೆ ಬೇಕು ಬೈಕ್ ಟ್ಯಾಕ್ಸಿ ಬೇಕೆಂದು ಪ್ರತಿಭಟನೆ ನಡೆಸಿದ್ದಾರೆ. ಯುವಕರು ನಿರೋದ್ಯೋಗಿಗಳಾಗಿದ್ದಾರೆ. ಸರ್ಕಾರ ಜಾಬ್ ಕೊಡುತ್ತಾಯಿದೆಯಾ ಎಂದು ಪ್ರಶ್ನಿಸಿದ್ದಾರೆ. ಟ್ರಾಫಿಕ್ ಜಾಮ್​ನಲ್ಲಿ ಜನ ಸಿಲುಕಿದ್ದಾಗ ನಾವು ಬೈಕ್ ಟ್ಯಾಕ್ಸಿ ಮೂಲಕ ಸಲ್ಯೂಷನ್ ನೀಡಿದ್ದೇವೆ ಎಂದಿದ್ದಾರೆ.

ಯುವಕರು ಕೆಲಸ ಇಲ್ಲವೆಂದು ಸುಸೈಡ್ ಮಾಡಿಕೊಳ್ಳುತ್ತಿದ್ದಾರೆ. ನಮಗೆ ಬೈಕ್ ಟ್ಯಾಕ್ಸಿ ಒಂದು ಹೊತ್ತಿನ ಅನ್ನ ನೀಡುತ್ತಿದೆ. ಆಟೋ‌ ಚಾಲಕರು ನಮ್ಮನ್ನು ಹಿಡಿದು ಹೊಡಿತಾರೆ. ಬೆಲೆ ಬಾಳುವ ಮೊಬೈಲ್ ಒಡೆದು ಹಾಕುತ್ತಾರೆ. ನಾವು ಹೆಲ್ಮೆಟ್ ಹಾಕುತ್ತೇವೆ ಜೊತೆಗೆ 5 ಲಕ್ಷದ ವಿಮೆ ಮಾಡುವ ಮೂಲಕ ಸೇಫ್ಟಿ ಕಾಪಾಡುತ್ತೇವೆ. ಆಟೋ ಖರೀದಿ ಮಾಡುವಷ್ಟು ದುಡ್ಡು ನಮ್ಮ ಹತ್ತಿರ ಇಲ್ಲ. ನಮಗೆ ನ್ಯಾಯಬೇಕು, ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಗುತ್ತಿರುವ ದಬ್ಬಾಳಿಕೆ ತಡೆಗಟ್ಟಬೇಕು ಎಂದು ಬೈಕ್ ಟ್ಯಾಕ್ಸಿ ಚಾಲಕರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ್​ ವಾಪಸ್​: ಒಕ್ಕೂಟದಲ್ಲೇ ಭಿನ್ನಮತ ಸ್ಫೋಟ

ರ್ಯಾಪಿಡೋ ಬೈಕ್​ ಟ್ಯಾಕ್ಸಿಯನ್ನು ನಿಷೇಧಿಸಿ ಎಂದು ಸರ್ಕಾರಕ್ಕೆ ಆಟೋ ಚಾಲಕರ ಒತ್ತಾಯ

ರಾಜಧಾನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೋ ಬೈಕ್​ ಟ್ಯಾಕ್ಸಿಯನ್ನು ನಿಷೇಧಿಸಿ ಎಂದು ಆಟೋ ಚಾಲಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಈಗ ಮತ್ತೆ ರ್ಯಾಪಿಡೋ ಬೈಕ್​ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ‌ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ  ಒತ್ತಾಯ ಮಾಡಿವೆ. ಈ ಹಿನ್ನಲೆ ನಾಳೆ(ಮಾ.20) ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಆಟೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:55 am, Sun, 19 March 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ