AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಬೆಂಗಳೂರಿನಲ್ಲಿ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಓರ್ವ ವ್ಯಕ್ತಿ ವಿರುದ್ಧ ಬಿಜೆಪಿ ನಾಯಕರು ಬೆಂಗಳೂರಿನ ಯಶವಂತಪುರದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಬೆಂಗಳೂರಿನಲ್ಲಿ ವ್ಯಕ್ತಿ ವಿರುದ್ಧ ಬಿಜೆಪಿ ದೂರು
ಬಿಜೆಪಿ
ಕಿರಣ್​ ಹನಿಯಡ್ಕ
| Edited By: |

Updated on:Jun 16, 2025 | 2:52 PM

Share

ಬೆಂಗಳೂರು, ಜೂನ್​ 16: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್​​ ಮಾಡಿದ್ದ ಟಿ.ಎಫ್​.ಹಾದಿಮನಿ ವಿರುದ್ಧ ನಗರದ ಯಶವಂತಪುರದ ಸೈಬರ್ ಕ್ರೈಂ ಠಾಣೆಗೆ ಬಿಜೆಪಿ (bjp) ದೂರು ನೀಡಿದೆ. ಪರಿಷತ್ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್ ನೇತೃತ್ವದಲ್ಲಿ ಸೋಮವಾರ ದೂರು ನೀಡಲಾಗಿದೆ. ಈ ವೇಳೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ ಕುಮಾರ್ ಉಪಸ್ಥಿತರಿದ್ದರು.

ದೂರಿನಲ್ಲೇನಿದೆ?

ಜೂನ್​ 16ರ ಬೆಳಗ್ಗೆ 9 ಗಂಟೆಗೆ ನಾನು (ದೂರುದಾರ) ನನ್ನ ಪಕ್ಷದ ಕಛೇರಿಯಲ್ಲಿ, ಪಕ್ಷದ ಕೆಲಸದ ನಿಮಿತ್ತ ಫೇಸ್‌ಬುಕ್ ಅನ್ನು ನೋಡುತ್ತಿದ್ದಾಗ ಟಿ.ಎಫ್​.ಹಾದಿಮನಿ ಎಂಬ ವ್ಯಕ್ತಿಯ ಫೇಸ್ ಬುಕ್ ಪುಟದಲ್ಲಿ ನಮ್ಮ ದೇಶದ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರನ್ನು ಕುರಿತು ತೇಜೋವಧೆ ಮತ್ತು ಈ ದೇಶದ ಜನತೆಯ ಭಾವನೆಗಳಿಗೆ ಧಕ್ಕೆ ತರುವ ರೀತಿ ಹಾಗೂ ಸಮಾಜದ ಸಮುದಾಯದ ನಡುವೆ ಬಿರುಕು ಮೂಡಿಸುವ ರೀತಿಯಲ್ಲಿ ಅವಮಾನ ಮಾಡಿ ಈ ಕೆಳಕಂಡಂತೆ ಪೋಸ್ಟ‌ನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಹಾಸನದಲ್ಲಿ ಮಳೆ ಆರ್ಭಟ: ಶಿರಾಡಿ ಘಾಟ್​​ನಲ್ಲಿ ಸಂಚಾರಕ್ಕೆ ಸಂಕಷ್ಟ, ಕೊಂಚ ಎಡವಟ್ಟಾದ್ರೆ ಪ್ರಾಣಕ್ಕೆ ಕುತ್ತು ಭೀತಿ

ಇದನ್ನೂ ಓದಿ
Image
ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನ ಸವಾರರು ಆತಂಕದಲ್ಲಿ
Image
ಶಿರಾಡಿ ಘಾಟ್​​ನಲ್ಲಿ ಸಂಚಾರಕ್ಕೆ ಸಂಕಷ್ಟ: ಎಡವಟ್ಟಾದ್ರೆ ಪ್ರಾಣಕ್ಕೆ ಕುತ್ತು
Image
ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಆತಂಕ: ತಜ್ಞರ ತಂಡ ಹೇಳಿದ್ದೇನು?
Image
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
  • ನರೇಂದ್ರ ಮೋದಿಯವರು ಒಂದು ಮಹಿಳೆಯನ್ನು ಎತ್ತಿಕೊಂಡಿರುವ ರೀತಿ ಒಂದು ಪೋಸ್ಟ್‌ರನ್ನು ಹಂಚಿಕೊಂಡಿದ್ದು, ಸದರಿ ಪೋಸ್ಟ್‌ರ್‌ಗೆ “ಸ್ವಂತ ಹೆಂಡತಿಯನ್ನೇ ಬಿಟ್ಟ ನಮ್ಮ ಪ್ರಧಾನಿಗಳು… ಏನಿದು.” ಎಂಬ ಟ್ಯಾಗ್‌ ಲೈನ್ನು ಕೊಟ್ಟಿರುತ್ತಾರೆ.
  • ಇನ್ನೊಂದು ಪೋಸ್ಟರ್‌ನಲ್ಲಿ “ನಮ್ಮ ದೇಶ ಕಂಡ ಅತ್ಯದ್ಭುತ ನಟ, ನಾಟಕಕಾರರ ಇಂದಿನ ಹತ್ತು ಸಾವಿರದ ಒಂಬತ್ತನೇ ಹೊಸ ವೇಷ”ನಿನ್ನ ಯ್ಯಾಸಕ್ ನನ್ನ ದ್ವಾಸೆ ಉಯ್ಯ”
  • ನರೇಂದ್ರ ಮೋದಿಯವರು ಕ್ಯಾಮೆರ ಹಿಡಿದುಕೊಂಡು ಫೋಟೋ ತೆಗೆಯುವಂತೆ ಹಾಗೂ ಮೂರು ಜನ ಫೋಟೋಗ್ರಾಫರ್‌ಗಳು ನರೇಂದ್ರ ಮೋದಿಜೀಯವರ ಫೋಟೋವನ್ನು ಸೆರೆಹಿಡಿಯುತ್ತಿರುವಂತೆ ಪೋಸ್ಟ್‌ನ್ನು ಹಂಚಿಕೊಂಡು “ಒಬ್ಬ Ameture” ಎಂದು ಅವಹೇಳನಕಾರಿಯಾಗಿ ಹಂಚಿಕೊಂಡಿರುತ್ತಾನೆ ಎಂದು ಉಲ್ಲೇಖಿಸಲಾಗಿದೆ.

ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಇದಷ್ಟೇ ಅಲ್ಲದೆ ಅವರ ಇಡೀ ಫೇಸ್‌ಬುಕ್ ಪುಟದಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳನ್ನು ಹಾಗೂ ರಾಜ್ಯದ ಪ್ರಮುಖರನ್ನು ಅವಹೇಳನಕಾರಿಯಾಗಿ ನಿಂದಿಸುವ, ತೇಜೋವಧೆ ಮತ್ತು ಸಮಾಜದಲ್ಲಿ ಸಮುದಾಯಗಳ ಮಧ್ಯದಲ್ಲಿ ಶಾಂತಿ ಕೆದಡುವಂತಹ ಅನೇಕ ಪೋಸ್ಟರ್‌ಗಳನ್ನು ಹಂಚಿಕೊಳ್ಳಲಾಗಿದೆ. ಆದ್ದರಿಂದ ಟಿ.ಎಫ್​.ಹಾದಿಮನಿ ಮೇಲೆ 124, 146, 144(2), 268, 352, 353, 353(2)(3), 499, 502. 177. 203, 153, 153ಎ. ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್​​ಐಆರ್​​ ದಾಖಲಿಸಿ, ಅಪರಾಧಿಯನ್ನು ಬಂಧಿಸುವಂತೆ ಕೋರಲಾಗಿದ್ದು, ಜೊತೆಗೆ ಅವರ ಫೇಸ್ ಬುಕ್ ಖಾತೆಯಲ್ಲಿಯರುವ ಎಲ್ಲಾ ಮಾಹಿತಿಗಳನ್ನು ಕ್ರೂಢಿಕರಿಸಿ, ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಿಷ್ಟು 

ಈ ಕುರಿತಾಗಿ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಪ್ರತಿಕ್ರಿಯಿಸಿದ್ದು, ನಮ್ಮ ಹೆಮ್ಮೆಯ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ. ಮೋದಿಯವರ ಮೇಲೆ ಅಭಿಮಾನ ಇಟ್ಟುಕೊಂಡಿರುವವರ ಮನಸ್ಸಿಗೆ ಇದರಿಂದ ಘಾಸಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್

ಹಾದಿಮನಿ ಎನ್ನುವವರು ಮಹಿಳೆ ಜೊತೆ ಮೋದಿ ಇರುವಂತೆ ಎಡಿಟ್ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ಆ ಮೂಲಕ ಚಾರಿತ್ರ್ಯವಧೆ ಆಗಿದೆ. ಅವರ ಗೌರವಕ್ಕೆ ಚ್ಯುತಿ ತಂದಿದ್ದಾರೆ. ಕೂಡಲೇ ಹಾದಿಮನಿಯನ್ನು ಪೊಲೀಸರು ಬಂಧಿಸಬೇಕು. ಅವರ ವಿರುದ್ಧ ಎಫ್​ಐಆರ್ ದಾಖಲಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Mon, 16 June 25

Follow Us
Kiran Haniyadka
Kiran Haniyadka
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್