AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು

Death threat to K Gopalaiah: ಮಾಜಿ ಕಾರ್ಪೊರೇಟರ್ ಪದ್ಮರಾಜು ಜೀವ ಬೆದರಿಕೆ ಹಾಕಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ ಎಂದು ಬಿಜೆಪಿ ಶಾಸಕ ಕೆ ಗೋಪಾಲಯ್ಯ ಹೇಳಿದ್ದಾರೆ. ಸದ್ಯ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪದ್ಮರಾಜು ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು
ಕೆ ಗೋಪಾಲಯ್ಯ
TV9 Web
| Edited By: |

Updated on:Feb 14, 2024 | 10:28 AM

Share

ಬೆಂಗಳೂರು, ಫೆಬ್ರವರಿ 14: ಬಿಜೆಪಿ ಶಾಸಕ (BJP MLA) ಕೆ ಗೋಪಾಲಯ್ಯಗೆ (K Gopalaiah) ಜೀವ ಬೆದರಿಕೆ (Death Threat) ಒಡ್ಡಿದ ಆರೋಪದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು.

ಈ ವಿಚಾರವಾಗಿ ಶಾಸಕ ಕೆ ಗೋಪಾಲಯ್ಯ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದು, ಅವನು ಮಾತನಾಡಿರುವ ವಿಚಾರಗಳನ್ನು ಈಗ ಬಹಿರಂಗಪಡಿಸಲು ಆಗದು. ಆತ ಇದಕ್ಕೂ ಮೊದಲು ಬೇರೆ ಶಾಸಕರಿಗೆ ಕೂಡ ಬೆದರಿಕೆ ಹಾಕಿದ್ದ. ಪದ್ಮರಾಜು​​ ಮಗಳಿಗೂ ನಾನೇ ಕೆಲಸ ಕೊಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಪದ್ಮರಾಜು​​ ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ. ಪದ್ಮರಾಜುನನ್ನ ಗಡಿಪಾರು ಮಾಡುವಂತೆ ಆಗ್ರಹಿಸುತ್ತೇನೆ ಎಂದು ಗೋಪಾಲಯ್ಯ ಹೇಳಿದ್ದಾರೆ.

ಈ ಮಧ್ಯೆ, ವಿಧಾನಸಭೆ ಸ್ಪೀಕರ್​ಗೆ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೂ ಶಾಸಕ ಕೆ.ಗೋಪಾಲಯ್ಯ ದೂರು ನೀಡಿದ್ದಾರೆ.

ಪದ್ಮರಾಜ್ ಪೊಲೀಸ್ ವಶಕ್ಕೆ

ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ನನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಪದ್ಮರಾಜ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪದ್ಮರಾಜ್ ಬಳಿಯಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ್ದಕ್ಕೆ ಸೋಮಶೇಖರ್ ಸಮರ್ಥನೆ

ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದ್ದನ್ನು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಕಚೇರಿಗೆ ಅವರು ಬಂದು ಮನವಿ ಮಾಡಿದ್ದರಲ್ಲಿ ತಪ್ಪೇನಿಲ್ಲ. ಬಿಜೆಪಿಯರು ಪಕ್ಷ ವಿರೋಧಿ ಅಂತಾ ಪರಿಗಣಿಸಿದ್ರೆ ಪರಿಗಣಿಸಲಿ ಎಂದು ಅವರು ಹೇಳಿದ್ದಾರೆ.

ಪಕ್ಷಕ್ಕೆ ದ್ರೋಹ ಮಾಡಿದವರನ್ನೇ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ರಾಜ ಮಱದೆ ಕೊಟ್ಟು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ನನ್ನನ್ನು ಪಕ್ಷದಿಂದ ಸಸ್ಪೆಂಡ್ ಮಾಡುವುದಾದರೆ ಮಾಡಲಿ. ನಾನು ಅದಕ್ಕೆಲ್ಲ ತಲೆಕಡೆಸಿಕೊಳ್ಳುವುದಿಲ್ಲ. ಜೆಡಿಎಸ್ ಅಭ್ಯರ್ಥಿ ಪರ ನಾನು ಯಾವ ಕಾರಣಕ್ಕೂ ಮತ ಕೇಳುವುದಿಲ್ಲ ಎಂದು ‘ಟಿವಿ9’ಗೆ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಮೈತ್ರಿ ಪಕ್ಷಗಳಿಗೆ ಶಾಕ್ ಕೊಟ್ಟ ಎಸ್​ಟಿ ಸೋಮಶೇಖರ್, ಸ್ವಪಕ್ಷದ ವಿರುದ್ಧವೇ ಕೆಂಡಾಮಂಡಲ

ವಿಧಾನಸಭಾ ಚುನಾವಣೆಯ ಬಳಿಕ ನಿರಂತರವಾಗಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಸೋಮಶೇಖರ್‌ ಅವರು ಮಂಗಳವಾರ ಪಕ್ಷಕ್ಕೆ ಮತ್ತೊಂದು ಆಘಾತ ನೀಡಿದ್ದರು. ವಿಧಾನ ಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಬಿಟ್ಟು ಕಾಂಗ್ರೆಸ್​ ಅಭ್ಯರ್ಥಿಗೆ ಮತ ನೀಡುವಂತೆ ಅವರು ಕೇಳಿಕೊಂಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Wed, 14 February 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ