AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು

Death threat to K Gopalaiah: ಮಾಜಿ ಕಾರ್ಪೊರೇಟರ್ ಪದ್ಮರಾಜು ಜೀವ ಬೆದರಿಕೆ ಹಾಕಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ ಎಂದು ಬಿಜೆಪಿ ಶಾಸಕ ಕೆ ಗೋಪಾಲಯ್ಯ ಹೇಳಿದ್ದಾರೆ. ಸದ್ಯ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪದ್ಮರಾಜು ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು
ಕೆ ಗೋಪಾಲಯ್ಯ
TV9 Web
| Edited By: |

Updated on:Feb 14, 2024 | 10:28 AM

Share

ಬೆಂಗಳೂರು, ಫೆಬ್ರವರಿ 14: ಬಿಜೆಪಿ ಶಾಸಕ (BJP MLA) ಕೆ ಗೋಪಾಲಯ್ಯಗೆ (K Gopalaiah) ಜೀವ ಬೆದರಿಕೆ (Death Threat) ಒಡ್ಡಿದ ಆರೋಪದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು.

ಈ ವಿಚಾರವಾಗಿ ಶಾಸಕ ಕೆ ಗೋಪಾಲಯ್ಯ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದು, ಅವನು ಮಾತನಾಡಿರುವ ವಿಚಾರಗಳನ್ನು ಈಗ ಬಹಿರಂಗಪಡಿಸಲು ಆಗದು. ಆತ ಇದಕ್ಕೂ ಮೊದಲು ಬೇರೆ ಶಾಸಕರಿಗೆ ಕೂಡ ಬೆದರಿಕೆ ಹಾಕಿದ್ದ. ಪದ್ಮರಾಜು​​ ಮಗಳಿಗೂ ನಾನೇ ಕೆಲಸ ಕೊಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಪದ್ಮರಾಜು​​ ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ. ಪದ್ಮರಾಜುನನ್ನ ಗಡಿಪಾರು ಮಾಡುವಂತೆ ಆಗ್ರಹಿಸುತ್ತೇನೆ ಎಂದು ಗೋಪಾಲಯ್ಯ ಹೇಳಿದ್ದಾರೆ.

ಈ ಮಧ್ಯೆ, ವಿಧಾನಸಭೆ ಸ್ಪೀಕರ್​ಗೆ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೂ ಶಾಸಕ ಕೆ.ಗೋಪಾಲಯ್ಯ ದೂರು ನೀಡಿದ್ದಾರೆ.

ಪದ್ಮರಾಜ್ ಪೊಲೀಸ್ ವಶಕ್ಕೆ

ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ನನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಪದ್ಮರಾಜ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪದ್ಮರಾಜ್ ಬಳಿಯಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ್ದಕ್ಕೆ ಸೋಮಶೇಖರ್ ಸಮರ್ಥನೆ

ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದ್ದನ್ನು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಕಚೇರಿಗೆ ಅವರು ಬಂದು ಮನವಿ ಮಾಡಿದ್ದರಲ್ಲಿ ತಪ್ಪೇನಿಲ್ಲ. ಬಿಜೆಪಿಯರು ಪಕ್ಷ ವಿರೋಧಿ ಅಂತಾ ಪರಿಗಣಿಸಿದ್ರೆ ಪರಿಗಣಿಸಲಿ ಎಂದು ಅವರು ಹೇಳಿದ್ದಾರೆ.

ಪಕ್ಷಕ್ಕೆ ದ್ರೋಹ ಮಾಡಿದವರನ್ನೇ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ರಾಜ ಮಱದೆ ಕೊಟ್ಟು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ನನ್ನನ್ನು ಪಕ್ಷದಿಂದ ಸಸ್ಪೆಂಡ್ ಮಾಡುವುದಾದರೆ ಮಾಡಲಿ. ನಾನು ಅದಕ್ಕೆಲ್ಲ ತಲೆಕಡೆಸಿಕೊಳ್ಳುವುದಿಲ್ಲ. ಜೆಡಿಎಸ್ ಅಭ್ಯರ್ಥಿ ಪರ ನಾನು ಯಾವ ಕಾರಣಕ್ಕೂ ಮತ ಕೇಳುವುದಿಲ್ಲ ಎಂದು ‘ಟಿವಿ9’ಗೆ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಮೈತ್ರಿ ಪಕ್ಷಗಳಿಗೆ ಶಾಕ್ ಕೊಟ್ಟ ಎಸ್​ಟಿ ಸೋಮಶೇಖರ್, ಸ್ವಪಕ್ಷದ ವಿರುದ್ಧವೇ ಕೆಂಡಾಮಂಡಲ

ವಿಧಾನಸಭಾ ಚುನಾವಣೆಯ ಬಳಿಕ ನಿರಂತರವಾಗಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಸೋಮಶೇಖರ್‌ ಅವರು ಮಂಗಳವಾರ ಪಕ್ಷಕ್ಕೆ ಮತ್ತೊಂದು ಆಘಾತ ನೀಡಿದ್ದರು. ವಿಧಾನ ಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಬಿಟ್ಟು ಕಾಂಗ್ರೆಸ್​ ಅಭ್ಯರ್ಥಿಗೆ ಮತ ನೀಡುವಂತೆ ಅವರು ಕೇಳಿಕೊಂಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Wed, 14 February 24

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!