AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ! ನಮ್ಮ ಮೆಟ್ರೋ ರೈಲನ್ನೇ ತಡೆದು ನಿಲ್ಲಿಸಿದ ಪ್ರಯಾಣಿಕರು: ಕೇಸ್ ಬುಕ್

ನಮ್ಮ ಮೆಟ್ರೋ ರೈಲನ್ನೇ ಪ್ರಯಾಣಿಕರು ತಡೆದು ನಿಲ್ಲಿಸಿರುವಂತಹ ಘಟನೆ ಬೆಂಗಳೂರಿನ ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೆಟ್ರೋ ಸಂಚಾರ ವಿಳಂಬ ಖಂಡಿಸಿ ರೈಲು ತಡೆದಿದ್ದರು. ಇದೀಗ ಮೆಟ್ರೋ ರೈಲು ತಡೆದಿದ್ದ ಪ್ರಯಾಣಿಕರ ವಿರುದ್ಧ BMRCL​ ಅಧಿಕಾರಿಗಳಿಂದ ಜಯನಗರ ಠಾಣೆಗೆ ದೂರು ನೀಡಲಾಗಿದೆ.

ಅಬ್ಬಾ! ನಮ್ಮ ಮೆಟ್ರೋ ರೈಲನ್ನೇ ತಡೆದು ನಿಲ್ಲಿಸಿದ ಪ್ರಯಾಣಿಕರು: ಕೇಸ್ ಬುಕ್
ಮೆಟ್ರೋ ತಡೆದಿದ್ದ ಪ್ರಯಾಣಿಕರು
ಕಿರಣ್​ ಸೂರ್ಯ
| Edited By: |

Updated on:Nov 17, 2025 | 9:30 PM

Share

ಬೆಂಗಳೂರು, ನವೆಂಬರ್​ 17: ನಮ್ಮ ಮೆಟ್ರೋ (Namma Metro) ಸಂಚಾರ ವಿಳಂಬ ಖಂಡಿಸಿ ರೈಲು ತಡೆದಿದ್ದ ಪ್ರಯಾಣಿಕರ ವಿರುದ್ಧ ಇದೀಗ ಬೆಂಗಳೂರಿನ ಜಯನಗರ ಠಾಣೆಗೆ ದೂರು ನೀಡಲಾಗಿದೆ. ಕೆಲ ಪ್ರಯಾಣಿಕರ ನಡೆಯಿಂದಾಗಿ ಇತರೆ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಅಧಿಕಾರಿಗಳಿಂದ ದೂರು ನೀಡಲಾಗಿದೆ.

ನಡೆದದ್ದೇನು?

ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಬದಲಿಗೆ 6 ಗಂಟೆಗೆ ಮೆಟ್ರೋ ಸಂಚಾರ ಹಿನ್ನೆಲೆ ಮೆಟ್ರೋ ರೈಲಿನ ಡೋರ್ ಕ್ಲೋಸ್ ಆಗಲು ಬಿಡದೆ ತಡೆದಿದ್ದಾರೆ. ಇದರಿಂದಾಗಿ 6 ಗಂಟೆ ಬದಲು 6.30ಕ್ಕೆ ಮೆಟ್ರೋ ಸಂಚಾರ ಆರಂಭವಾಗಿದೆ. ಹೀಗಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್​​ನಿಂದ, ಬೊಮ್ಮಸಂದ್ರ ಕಡೆಗೆ ಶಾರ್ಟ್ ಲೂಪ್ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ಜಯನಗರ ಪೊಲೀಸ್ ಠಾಣೆಗೆ BMRCL ಅಧಿಕಾರಿಗಳು ದೂರು ನೀಡಿದ್ದಾರೆ.

ದೂರಿನಲ್ಲೇನಿದೆ?

ದೂರುದಾರ ಇಂದು ಬೆಳಿಗ್ಗೆ 5.30 ಗಂಟೆಗೆ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣ (ಹಳದಿ ಮಾರ್ಗ)ದಿಂದ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ. ಹಸಿರು ಮಾರ್ಗದಲ್ಲಿ, ಪ್ರಯಾಣಿಸಿ ಬಂದು ಹಳದಿ ಮಾರ್ಗದ ಪಥ ಬದಲಾವಣೆಗಾಗಿ ಕಾಯುತ್ತಿದ್ದ ಪ್ರಯಾಣಿಕರ ಪೈಕಿ ಸುಮಾರು 10 ರಿಂದ 15 ಜನರ ಗುಂಪು ಹಳದಿ ಮಾರ್ಗದಲ್ಲಿ ಇನ್ನು ಏಕೆ ರೈಲು ಬರುತ್ತಿಲ್ಲ ಎಂದು ಏರು ಧ್ವನಿಯಲ್ಲಿ ಕೇಳುತ್ತಿದ್ದರು. ಆಗ ದೂರುದಾರ ಹಳದಿ ಮಾರ್ಗದಲ್ಲಿ ರೈಲು 6 ಗಂಟೆಗೆ ಪ್ರಾರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

ಎಂದಿನಂತೆ ಹಳದಿ ಮಾರ್ಗದಲ್ಲಿ ಸಂಚರಿಸಿರುವ ರೈಲು ಬೆಳಿಗ್ಗೆ 6ಗಂಟೆಗೆ ಪ್ಲಾಟ್‌​ಫಾರಂ 3ರಿಂದ ಹೊರಡಲು ಸುಮಾರು 05.55ಕ್ಕೆ ಬಂದಿರುತ್ತದೆ. ಆದರೆ ಅಪರಿಚಿತ ಆಸಾಮಿಗಳು ಮೆಟ್ರೋ ರೈಲು ಸಂಚರಿಸಲು ಬಿಡದೇ ಬಾಗಿಲಿನಲ್ಲಿ ಕಾಲನ್ನು ಇಟ್ಟು ಆಡಚಣೆ ಉಂಟು ಮಾಡಿ ತಡೆದಿರುತ್ತಾರೆ ಹಾಗೂ ಸಹ ಪ್ರಯಾಣಿಕರನ್ನು ಹುರಿದುಂಬಿಸಿ, ಕಾನೂನು ಬಾಹಿರವಾಗಿ ಒತ್ತಾಯ ಪೂರ್ವಕವಾಗಿ ರೈಲಿನ ಬಾಗಿಲು ಹಾಕಲು ಬಿಡದೆ, ಮೆಟ್ರೋ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುತ್ತಾರೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು – ತುಮಕೂರು ಮೆಟ್ರೋ ಯೋಜನೆ ಡಿಪಿಆರ್​ಗೆ ಬಿಡ್ ಕರೆದ ಬಿಎಂಆರ್ ಸಿಎಲ್

ಮೆಟ್ರೋ ರೈಲು ನಿರ್ವಾಹಕ ಅಜೀತ್ ಜೆ, ಅವರು ಬಂದು ಸಮಯದ ಅಭಾವ ಆಗಿದೆ, ರೈಲು ಹೋಗಲು ಬಿಡುವಂತೆ ಹೇಳಿದರೂ ಮೆಟ್ರೋ ಬಾಗಿಲು ಮುಚ್ಚಲು ಬಿಡದೆ ರೈಲು ನಿಲಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಸುಮಾರು 35 ನಿಮಿಷಗಳ ಕಾಲ ತಡೆಹಿಡಿದು ಇತರೆ ಪ್ರಯಾಣಿಕರಿಗೂ ಸಂಚರಿಸಲು ತೊಂದರೆನ್ನುಂಟು ಮಾಡಿರುತ್ತಾರೆ. ಹೀಗಾಗಿ ಕರ್ತವ್ಯಕ್ಕೆ ಅಡ್ಡಿಪರಿಸಿದ ಪ್ರಯಾಣಿಕರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:04 pm, Mon, 17 November 25

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ