AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮರೂಪಿ ಬಿಎಂಟಿಸಿಗೆ ಮುಂದುವರಿದ ಬಲಿ: ಮಡಿವಾಳದಲ್ಲಿ ಬಸ್​​ ಡಿಕ್ಕಿಯಾಗಿ ವೃದ್ಧ ಸಾವು

ಬೆಂಗಳೂರಿನ ಮಡಿವಾಳದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ 65 ವರ್ಷದ ವೃದ್ಧ ದುರ್ಮರಣ ಹೊಂದಿದ್ದಾರೆ. ಚಾಲಕರ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಪಾದಚಾರಿಗೆ ಬಸ್​ ಡಿಕ್ಕಿಯಾಗುವ ಮುನ್ನ ಎರಡು ವಾಹನಗಳಿಗೂ ಗುದ್ದಿತ್ತು ಎಂಬುದು ಗೊತ್ತಾಗಿದೆ. ಅತ್ತ ಕೊಪ್ಪಳದಲ್ಲಿ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಯಮರೂಪಿ ಬಿಎಂಟಿಸಿಗೆ ಮುಂದುವರಿದ ಬಲಿ: ಮಡಿವಾಳದಲ್ಲಿ ಬಸ್​​ ಡಿಕ್ಕಿಯಾಗಿ ವೃದ್ಧ ಸಾವು
ಬಿಎಂಟಿಸಿ ಬಸ್​​ ಡಿಕ್ಕಿಯಾಗಿ ವೃದ್ಧ ಸಾವು
Kiran Surya
| Updated By: ಪ್ರಸನ್ನ ಹೆಗಡೆ|

Updated on: Nov 20, 2025 | 12:16 PM

Share

ಬೆಂಗಳೂರು/ ಕೊಪ್ಪಳ, ನವೆಂಬರ್​ 20: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್​​ಗಳ ಅಪಘಾತ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಚಾಲಕರ ಅಜಾಗರೂಕತೆಗೆ ಅಮಾಯರು ಬಲಿಯಾಗುತ್ತಿದ್ದಾರೆ. ಈ ನಡುವೆ ಇಂತಹುದ್ದೇ ಮತ್ತೊಂದು ಘಟನೆ ಮಡಿವಾಳದ ಬಸ್​ ನಿಲ್ದಾಣದ ಬಳಿ ನಡೆದಿದೆ. ಬಿಎಂಟಿಸಿ ಬಸ್​​ ಡಿಕ್ಕಿಯಾದ ಪರಿಣಾಮ ಮಡಿವಾಳ ನಿವಾಸಿ 65 ವರ್ಷದ ವೆಂಕಟರಾಮಪ್ಪ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆಯಲಾಗಿದೆ.

ತರಕಾರಿ ವ್ಯಾಪಾರಿಯಾಗಿದ್ದ ವೆಂಕಟರಾಮಪ್ಪ ಮಡಿವಾಳ ಮಾರ್ಕೆಟ್​​ಗೆ ತರಕಾರಿ ತರಲು ಹೋಗಿದ್ದಾಗ ದುರಂತ ಸಂಭವಿಸಿದೆ. ಸೇಂಟ್​​ಜಾನ್ಸ್ ಆಸ್ಪತ್ರೆ ಶವಾಗಾರದಲ್ಲಿರುವ ಮೃತದೇಹ ಇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಪಘಾತಕ್ಕೆ ಬಿಎಂಟಿಸಿ ಬಸ್​​ ಚಾಲಕನ ನಿರ್ಲಕ್ಷ್ಯ ಕಾರಣ ಎನ್ನಲಾಗಿದ್ದು,ವೆಂಕಟರಾಮಪ್ಪ ಅವರಿಗೆ ಬಸ್​ ಡಿಕ್ಕಿಯಾಗುವ ಮುನ್ನ ಎರಡು ವಾಹ‌ಗಳಿಗೂ ಗುದ್ದಿದೆ ಎಂದು ದಕ್ಷಿಣ ವಿಭಾಗದ ಟ್ರಾಫಿಕ್ ಡಿಸಿಪಿ ಗೋಪಾಲ್ ಬ್ಯಾಕೋಡ್ ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ಮುಂದುವರಿದಿರೋದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದು ಬರ್ತಿದ್ದ ಡ್ರೈವರ್​ಗಳಿಗೆ ಲಂಚ ಪಡೆದು ಡ್ಯೂಟಿ, ಅಧಿಕಾರಿಗಳಿಗೆ ಶಾಕ್​ಕೊಟ್ಟ BMTC

ಸಿಗ್ನಲ್​ ದಾಟುತ್ತಿದ್ದ 9 ವರ್ಷದ ಬಾಲಕಿಯ ಮೇಲೆ ಬಿಎಂಟಿಸಿ ಬಸ್​​ ಚಕ್ರ ಹರಿದ ಪರಿಣಾಮ ಆಕೆ ಮೃತಪಟ್ಟಿದ್ದ ಘಟನೆ ಇತ್ತೀಚೆಗಷ್ಟೇ ರಾಜಾಜಿನಗರದಲ್ಲಿ ನಡೆದಿತ್ತು. ಪಾಂಚ ಜನ್ಯ ವಿದ್ಯಾಪೀಠ ಶಾಲೆಯಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿದ್ದ 9 ವರ್ಷದ ಭುವನ ಘಟನೆಯಲ್ಲಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ಅವಘಡ ನಡೆದಿದೆ.

2 ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ

Koppal Accident

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ

2 ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಜೂರಟಗಿ ಬಳಿ ನಡೆದಿದೆ. ನಾಗರಾಜ್ ಜಾಲಿಹಾಳ(30), ಬಸವರಾಜ(35) ಮೃತ ದುರ್ದೈವಿಗಳಾಗಿದ್ದಾರೆ. ನಾಗರಾಜ್ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವಾರಿದ್ದರೆ, ಬಸವರಾಜ ಕಲಬುರಗಿ ಜಿಲ್ಲೆಯ ಜೇವರ್ಗಿಯವರು ಎಂಬುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಕಾರಟಗಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ