AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮರೂಪಿ ಬಿಎಂಟಿಸಿಗೆ ಮುಂದುವರಿದ ಬಲಿ: ಮಡಿವಾಳದಲ್ಲಿ ಬಸ್​​ ಡಿಕ್ಕಿಯಾಗಿ ವೃದ್ಧ ಸಾವು

ಬೆಂಗಳೂರಿನ ಮಡಿವಾಳದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ 65 ವರ್ಷದ ವೃದ್ಧ ದುರ್ಮರಣ ಹೊಂದಿದ್ದಾರೆ. ಚಾಲಕರ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಪಾದಚಾರಿಗೆ ಬಸ್​ ಡಿಕ್ಕಿಯಾಗುವ ಮುನ್ನ ಎರಡು ವಾಹನಗಳಿಗೂ ಗುದ್ದಿತ್ತು ಎಂಬುದು ಗೊತ್ತಾಗಿದೆ. ಅತ್ತ ಕೊಪ್ಪಳದಲ್ಲಿ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಯಮರೂಪಿ ಬಿಎಂಟಿಸಿಗೆ ಮುಂದುವರಿದ ಬಲಿ: ಮಡಿವಾಳದಲ್ಲಿ ಬಸ್​​ ಡಿಕ್ಕಿಯಾಗಿ ವೃದ್ಧ ಸಾವು
ಬಿಎಂಟಿಸಿ ಬಸ್​​ ಡಿಕ್ಕಿಯಾಗಿ ವೃದ್ಧ ಸಾವು
ಕಿರಣ್​ ಸೂರ್ಯ
| Edited By: |

Updated on: Nov 20, 2025 | 12:16 PM

Share

ಬೆಂಗಳೂರು/ ಕೊಪ್ಪಳ, ನವೆಂಬರ್​ 20: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್​​ಗಳ ಅಪಘಾತ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಚಾಲಕರ ಅಜಾಗರೂಕತೆಗೆ ಅಮಾಯರು ಬಲಿಯಾಗುತ್ತಿದ್ದಾರೆ. ಈ ನಡುವೆ ಇಂತಹುದ್ದೇ ಮತ್ತೊಂದು ಘಟನೆ ಮಡಿವಾಳದ ಬಸ್​ ನಿಲ್ದಾಣದ ಬಳಿ ನಡೆದಿದೆ. ಬಿಎಂಟಿಸಿ ಬಸ್​​ ಡಿಕ್ಕಿಯಾದ ಪರಿಣಾಮ ಮಡಿವಾಳ ನಿವಾಸಿ 65 ವರ್ಷದ ವೆಂಕಟರಾಮಪ್ಪ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆಯಲಾಗಿದೆ.

ತರಕಾರಿ ವ್ಯಾಪಾರಿಯಾಗಿದ್ದ ವೆಂಕಟರಾಮಪ್ಪ ಮಡಿವಾಳ ಮಾರ್ಕೆಟ್​​ಗೆ ತರಕಾರಿ ತರಲು ಹೋಗಿದ್ದಾಗ ದುರಂತ ಸಂಭವಿಸಿದೆ. ಸೇಂಟ್​​ಜಾನ್ಸ್ ಆಸ್ಪತ್ರೆ ಶವಾಗಾರದಲ್ಲಿರುವ ಮೃತದೇಹ ಇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಪಘಾತಕ್ಕೆ ಬಿಎಂಟಿಸಿ ಬಸ್​​ ಚಾಲಕನ ನಿರ್ಲಕ್ಷ್ಯ ಕಾರಣ ಎನ್ನಲಾಗಿದ್ದು,ವೆಂಕಟರಾಮಪ್ಪ ಅವರಿಗೆ ಬಸ್​ ಡಿಕ್ಕಿಯಾಗುವ ಮುನ್ನ ಎರಡು ವಾಹ‌ಗಳಿಗೂ ಗುದ್ದಿದೆ ಎಂದು ದಕ್ಷಿಣ ವಿಭಾಗದ ಟ್ರಾಫಿಕ್ ಡಿಸಿಪಿ ಗೋಪಾಲ್ ಬ್ಯಾಕೋಡ್ ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ಮುಂದುವರಿದಿರೋದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದು ಬರ್ತಿದ್ದ ಡ್ರೈವರ್​ಗಳಿಗೆ ಲಂಚ ಪಡೆದು ಡ್ಯೂಟಿ, ಅಧಿಕಾರಿಗಳಿಗೆ ಶಾಕ್​ಕೊಟ್ಟ BMTC

ಸಿಗ್ನಲ್​ ದಾಟುತ್ತಿದ್ದ 9 ವರ್ಷದ ಬಾಲಕಿಯ ಮೇಲೆ ಬಿಎಂಟಿಸಿ ಬಸ್​​ ಚಕ್ರ ಹರಿದ ಪರಿಣಾಮ ಆಕೆ ಮೃತಪಟ್ಟಿದ್ದ ಘಟನೆ ಇತ್ತೀಚೆಗಷ್ಟೇ ರಾಜಾಜಿನಗರದಲ್ಲಿ ನಡೆದಿತ್ತು. ಪಾಂಚ ಜನ್ಯ ವಿದ್ಯಾಪೀಠ ಶಾಲೆಯಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿದ್ದ 9 ವರ್ಷದ ಭುವನ ಘಟನೆಯಲ್ಲಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ಅವಘಡ ನಡೆದಿದೆ.

2 ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ

Koppal Accident

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ

2 ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಜೂರಟಗಿ ಬಳಿ ನಡೆದಿದೆ. ನಾಗರಾಜ್ ಜಾಲಿಹಾಳ(30), ಬಸವರಾಜ(35) ಮೃತ ದುರ್ದೈವಿಗಳಾಗಿದ್ದಾರೆ. ನಾಗರಾಜ್ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವಾರಿದ್ದರೆ, ಬಸವರಾಜ ಕಲಬುರಗಿ ಜಿಲ್ಲೆಯ ಜೇವರ್ಗಿಯವರು ಎಂಬುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಕಾರಟಗಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ