AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಂದಲೇ ಅತಿ ಹೆಚ್ಚು ಅಪಘಾತ: ವಾರದಲ್ಲಿ ನಾಲ್ವರ ಸಾವು

ಬೆಂಗಳೂರಿನಲ್ಲಿ ಒಂದಿಲ್ಲೊಂದು ನಿರ್ಲಕ್ಷ್ಯದಿಂದಾಗಿ ಬಿಎಂಟಿಸಿ ಬಸ್​ಗಳಿಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ನಾಲ್ಕು ಜನರು ಮೃತಪಟ್ಟರೆ, ಎಲೆಕ್ಟ್ರಿಕ್ ಬಸ್​​ಗಳಿಂದ 15 ತಿಂಗಳಲ್ಲಿ 18 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದಕ್ಕೆ ಚಾಲಕರ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಕಾರಣವೆಂಬ ಆರೋಪಗಳು ಕೇಳಿಬಂದಿವೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಂದಲೇ ಅತಿ ಹೆಚ್ಚು ಅಪಘಾತ: ವಾರದಲ್ಲಿ ನಾಲ್ವರ ಸಾವು
ಬಿಎಂಟಿಸಿ ಬಸ್​​
ಗಂಗಾಧರ​ ಬ. ಸಾಬೋಜಿ
|

Updated on: Aug 22, 2025 | 11:16 AM

Share

ಬೆಂಗಳೂರು, ಆಗಸ್ಟ್​ 22: ಸಿಲಿಕಾನ್ ಸಿಟಿಯ ಜನರು ಸಂಚಾರಕ್ಕಾಗಿ ಹೆಚ್ಚಾಗಿ ಬಿಎಂಟಿಸಿ ಬಸ್​ಗಳನ್ನು (BMTC Bus) ಅವಲಂಬಿಸಿದ್ದಾರೆ. ಆದರೆ ಇದೇ ಬಸ್​​ಗಳಿಗೆ ಬಲಿಯಾಗುವವರ (death) ಸಂಖ್ಯೆ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ‌ ಒಂದು ನಿರ್ಲಕ್ಷ್ಯದಿಂದಾಗಿ ಅಮಾಯಕರ ಸಾವಿಗೆ ಕಾರಣವಾಗುತ್ತಿದೆ. ಕಳೆದ ಒಂದು ವಾರದಲ್ಲಿ ನಾಲ್ಕು ಜನರು ಬಿಎಂಟಿಸ್​ ಬಸ್​​ನಿಂದ ಮೃತಪಟ್ಟಿದ್ದಾರೆ. ಎಲೆಕ್ಟ್ರಿಕ್ ಬಸ್​ಗಳಿಂದಲೇ ಅತಿ ಹೆಚ್ಚು ಅಪಘಾತಗಳು ಸಂಭವಿಸಿದ್ದು, 15 ತಿಂಗಳಲ್ಲಿ 18 ಜನರು ಬಲಿಯಾಗಿದ್ದಾರೆ.

ಬಿಎಂಟಿಸಿ ಬಸ್​ಗಳಿಗೆ ಸಾರ್ವಜನಿಕರು ಸೇರಿದಂತೆ ಬೈಕ್ ಸವಾರರು ಬಲಿಯಾಗುತ್ತಿದ್ದಾರೆ. ಮೊನ್ನೆ ಜಯನಗರದಲ್ಲಿ ಎಲೆಕ್ಟ್ರಿಕ್​​ ಬಸ್​ನಿಂದ ಬಿದ್ದು ವೃದ್ಧ ಸಾವನ್ನಪ್ಪಿದ್ದರು. ಜುಲೈ 30ರಂದು ಮಡಿವಾಳದಲ್ಲಿ ಎಲೆಕ್ಟ್ರಿಕ್ ಬಸ್​ಗೆ ಸಿಲುಕಿ ವೃದ್ದೆ ಸಾವನ್ನಪ್ಪಿದ್ದರು. ಹೀಗೆ 15 ತಿಂಗಳಲ್ಲಿ ಒಟ್ಟು 18 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಖಾಸಗಿ ಬಸ್​​ಗಳಲ್ಲಿ ಕನ್ನಡ ಮಾಯ! ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ, ಕ್ರಮಕ್ಕೆ ಆಗ್ರಹ

ಇನ್ನು ಎಲೆಕ್ಟ್ರಿಕ್ ಬಸ್​ಗಳ ಡ್ರೈವರ್​ಗಳು ಖಾಸಗಿ ಚಾಲಕರಾಗಿದ್ದಾರೆ. ಈ ಚಾಲಕರ ಮೇಲೆ ಅತಿವೇಗ, ನಿರ್ಲಕ್ಷ್ಯದಿಂದ ಬಸ್ ಚಲಾವಣೆ ಆರೋಪಗಳಿವೆ. ಬಿಎಂಟಿಸಿ ಬಸ್ ಚಾಲಕರಿಗೆ ಚಾಲನೆ ವೇಳೆ ಪಾಲಿಸಬೇಕಾದ ಕ್ರಮಗಳ ಬಗ್ಗೆ ಈಗಾಗಲೇ ಸಂಚಾರಿ ಪೊಲೀಸರಿಂದ ನಿರಂತರ ತರಬೇತಿ ನೀಡಲಾಗಿದೆ. ಆದರೂ ಪ್ರಾಣಹಾನಿ ಸಂಭವಿಸುತ್ತಿವೆ.

ಶಾಲೆಗೆ ಹೋಗುತ್ತಿದ್ದ ಬಾಲಕಿ ಬಿಎಂಟಿಸಿ ಬಸ್​ಗೆ ಬಲಿ

ಶಾಲೆಗೆ ಹೋಗುವಾಗ ನಡೆದ ಅಪಘಾತದಲ್ಲಿ 10 ವರ್ಷದ ಬಾಲಕಿಯ ಸಾವಾಗಿದೆ. ಬಿಎಂಟಿಸಿ ಬಸ್​ಗೆ ಸಿಲುಕಿ ಸ್ಥಳದಲ್ಲಿ ಬಾಲಕಿ ಜೀವ ಬಿಟ್ಟಿದ್ದಾಳೆ. ಕೋಗಿಲು ಕ್ರಾಸ್​ನಿಂದ ಮಾರುತಿನಗರಕ್ಕೆ ಹೋಗುವ ರಸ್ತೆಯಲ್ಲಿ ನಿನ್ನೆ ಅಪಘಾತ ಸಂಭವಿಸಿತ್ತು. ಈ ದುರಂತದ ದೃಶ್ಯ ಡ್ಯಾಶ್ ಕ್ಯಾಮೆರಾ, ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಅಮ್ಮನ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಬಿಎಂಟಿಸಿ ಬಸ್ ಹರಿದು ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ವಯಸ್ಕ ಮಹಿಳೆ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಬೆಳಗ್ಗೆ ಸುಮಾರು 8 ಗಂಟೆ ಮಾರುತಿ ನಗರ ನಿವಾಸಿ ಹರ್ಷಿತಾ ತನ್ನ ಇಬ್ಬರು ಮಕ್ಕಳನ್ನ ಶಾಲೆಗೆ ಬಿಡಲು ಸ್ಕೂಟಿಯಲ್ಲಿ ಹೋಗುತ್ತಿದ್ದರು. ಆದರೆ ಮಾರುತಿನಗರದ ಮುಖ್ಯರಸ್ತೆಯಲ್ಲಿ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಮತ್ತು ಬೈಕ್​ಗೆ ಟಚ್ ಆಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಹರ್ಷಿತಾ ಬೈಕ್ ಸಮೇತ ಕೆಳಗೆ ಬಿದ್ದಿದ್ದಾರೆ. ಇದರಿಂದ ಬಸ್​ನ ಹಿಂಬದಿ ಕೆಳಗೆ ಬಿದ್ದ 10 ವರ್ಷದ ತನ್ವಿ ಕೃಷ್ಣ ಮೇಲೆ ಹರಿದು ಆಕೆ ಸ್ಥಳದಲ್ಲೇ ಅಸುನೀಗೀದ್ದಾಳೆ. ಹಾಗೆ ಬೈಕ್​ನಲ್ಲಿದ್ದ ತನ್ವಿ ತಾಯಿ, ಸಹೋದರಿಗೆ ಸಣ್ಣಪುಟ್ಟ ಗಾಯಾಗಳಾಗಿವೆ.

ವರದಿ: ಪ್ರದೀಪ್​ ಚಿಕ್ಕಾಟೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?