AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ BMTC; ಆಕ್ಷೇಪ ವ್ಯಕ್ತಪಡಿಸುತ್ತಿರುವ KSRTC

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ಇದೆ. ಆದರೆ ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ ಹಿನ್ನಲೆ ಕೆಎಸ್​ಆರ್​ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

​​ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ BMTC; ಆಕ್ಷೇಪ ವ್ಯಕ್ತಪಡಿಸುತ್ತಿರುವ KSRTC
ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ
TV9 Web
| Edited By: |

Updated on:Jan 07, 2023 | 10:12 AM

Share

ಬೆಂಗಳೂರು: ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ (BMTC) ಬಸ್​​ ಸೇವೆ ಚಿಕ್ಕಬಳ್ಳಾಪುರಕ್ಕೂ ವ್ಯಾಪಿಸಿದೆ. ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಹೊಸವರ್ಸದಂದು ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿತ್ತು. ಬಿಎಂಟಿಸಿ ಬಸ್ ಸೇವೆ ಚಿಕ್ಕಬಳ್ಳಾಪುರ (Chikkaballapur)ಕ್ಕೆ ವಿಸ್ತರಿಸಿದ್ದೇ ತಡ, ಎಚ್ಚೆತ್ತ ಕೆಎಸ್​ಆರ್​ಟಿಸಿ (KSRTC) ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್​​ಆರ್​ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ಇದೆ. ಆದರೆ ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ ಹಿನ್ನಲೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕೆಎಸ್​ಆರ್​ಟಿಸಿ ಅಧಿಕಾರಿಗಳು BMTC ನಡೆ ಖಂಡಿಸಿ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಎಂಟಿಸಿ ಸಂಚಾರ ಮಾಡಿದರೆ KSRTCಗೆ ಆದಾಯಕ್ಕೆ ಹೊಡೆತ ಬೀಳುವ ಭೀತಿ ಹಿನ್ನಲೆ ಪತ್ರ ಬರೆಯಲು ಮುಂದಾಗಿದ್ದಾರೆ.

ಇದನ್ನೂ ಓದಿ: ಸಾವರ್ಕರ್ V/S ಟಿಪ್ಪು ಸುಲ್ತಾನ್ ದಂಗಲ್; ಸಾವರ್ಕರ್ ಫೋಟೋ ಶಾಲೆಗಳಲ್ಲಿ ಅಳವಡಿಸಿದರೆ ಕಿತ್ತು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ ಮುಸ್ಲಿಂ ನಾಯಕ

ನಿಯಮದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಸ್ ಓಡಿಸುವುದಕ್ಕೆ ಅನುಮತಿ ಪಡೆದಿರುವ ಬಿಎಂಟಿಸಿಗೆ ಬಿಬಿಎಂಪಿ ವ್ಯಾಪ್ತಿಯಿಂದ 25 ಕಿಮೀ ಮೀಟರ್ ಮಾತ್ರ ಬಸ್ ಓಡಿಸಲು ಅವಕಾಶ ಇದೆ. ಆದರೀಗ ಬೆಂಗಳೂರು ಹೊರವಲಯದ ಚಿಕ್ಕಬಳ್ಳಾಪುರಕ್ಕೂ ವಿಸ್ತರಣೆ ಮಾಡಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿಮೀ ಮೀಟರ್ ಅಂತರವಿದೆ. ನಿಯಮದ ಪ್ರಕಾರ ಬಸ್ ಸಂಚಾರ ವಿಸ್ತರಣೆ ಮಾಡಲು ಅವಕಾಶ ಇಲ್ಲ ಎಂದು ಕೆಎಸ್ಆರ್​ಟಿಸಿ ಅಧಿಕಾರಿಗಳು ಹೇಳುತ್ತಿದ್ದಾರೆ.

ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಜನವರಿ 4ರಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Sat, 7 January 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?