AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹುಟ್ಟುಹಬ್ಬದಂದೇ ಪ್ರಾಣ ಬಿಟ್ಟ ಬಾಲಕ, ಪೋಷಕರ ಆಕ್ರಂದನ

ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ದುರಂತ ರಸ್ತೆ ಅಪಘಾತದಲ್ಲಿ 12 ವರ್ಷದ ಭಾನು ತೇಜ ಎಂಬ ಬಾಲಕ ಮೃತಪಟ್ಟಿದ್ದಾನೆ. ಅವನ ಹುಟ್ಟುಹಬ್ಬದ ದಿನವೇ ಈ ಅವಘಡ ಸಂಭವಿಸಿದೆ. ಐಷರ್ ಟ್ರಕ್ ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅನಾಹುತ ಸಂಭವಿಸಿದೆ. ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಹುಟ್ಟುಹಬ್ಬದಂದೇ ಪ್ರಾಣ ಬಿಟ್ಟ ಬಾಲಕ, ಪೋಷಕರ ಆಕ್ರಂದನ
ಬಾಲಕ ಭಾನು ತೇಜ
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 12, 2025 | 1:17 PM

Share

ಬೆಂಗಳೂರು, ಜನವರಿ 12: ಬೆಂಗಳೂರಿನ (Bengaluru) ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟಿದ್ದು, ಹುಟ್ಟು ಹಬ್ಬದಂದೇ ಮಸಣ ಸೇರಿದ್ದಾನೆ. ಭಾನು ತೇಜ (12) ಮೃತ ಬಾಲಕ.

ಆಂಧ್ರ ಪ್ರದೇಶದ ಚಿತ್ತೂರು ಮೂಲದವರಾದ ರವಿ ಹಾಗೂ ಸುಮಾ ದಂಪತಿ ಪುತ್ರ ಭಾನು ತೇಜ ಆರ್.ಟಿ.ನಗರ ಸತ್ಯಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವೇದ ಕಲಿಯಲು ಗುರುಗಳ ಜೊತೆಗೆ ವಾಸವಾಗಿದ್ದನು. ಶನಿವಾರ ಭಾನು ತೇಜನ ಹುಟ್ಟುಹಬ್ಬವಿತ್ತು. ಹುಟ್ಟು ಹಬ್ಬ ಆಚರಣೆಗಾಗಿ ಹೊರಮಾವುನಲ್ಲಿರುವ ತನ್ನ ಅಕ್ಕನ ಮನೆಗೆ ಹೊಗಿದ್ದನು. ಹುಟ್ಟು ಹಬ್ಬ ಆಚರಣೆ ಬಳಿಕ ರಾತ್ರಿ 11.20ರ ಸುಮಾರಿಗೆ ಅಣ್ಣ ಚಕ್ರಧರಣ್ ಜೊತೆಗೆ ಬೈಕ್​ನಲ್ಲಿ ವಾಪಸ್​ ಆರ್​ಟಿ ನಗರದತ್ತ ತೆರಳುತ್ತಿದ್ದನು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಟನಲ್ ರಸ್ತೆಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚೆಂದ ತಜ್ಞರು

ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಐಷರ್ ಟ್ರಕ್​ವೊಂದು ಹಿಂಬದಿಯಿಂದ ಭಾನು ತೇಜ್​ ಇದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಾನು ತೇಜ್​ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಾಲಕ ತಲೆಯ ಮೇಲೆ ಟ್ರಕ್​ನ ಎರಡು ಚಕ್ರಗಳು ಹಿರಿದಿವೆ.​ ಭಾನು ತೇಜ್​ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಕ್ರಧರಣ್​ಗೆ ಸಣ್ಣ-ಪುಟ್ಟ ಗಾಯಗಳಾವಿವೆ. ಟ್ರಕ್ ಚಾಲಕ ಪರಾರಿಯಾಗಿದ್ದು, ಹೆಣ್ಣೂರು ಟ್ರಾಫಿಕ್ ಠಾಣೆ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಭಾನು ತೇಜಾ ಮಾವ ಆನಂದ್ ಮಾತನಾಡಿ, ಭಾನು ತೇಜಾ ತಂದೆಗೆ ಮಗು ವೇದ ಕಲಿಯಬೇಕೆಂಬ ಆಸೆ ಇತ್ತು. ಒಂದು ತಿಂಗಳ ಹಿಂದೆ ವೇದ ಕಲಿಯಲು ಮಗುವನ್ನ ಬಿಟ್ಟಿದ್ದರು. ಶನಿವಾರ ಮಗುವಿನ ಹುಟ್ಟುಹಬ್ಬವಿತ್ತು. ಅವನು ಅಕ್ಕನ ಮನೆಗೆ ಬಂದು ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದನು. ಊಟ ಮಾಡಿ ಸಂಜೆ ಹೊರಡಬೇಕಾದರೆ ಅವಘಡ ನಡೆದಿದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Sun, 12 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್