AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಟವಾಡುತ್ತ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದ ಅಣ್ಣ-ತಂಗಿ?

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಸೋಮವಾರ ಸಂಜೆ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಅನುಮಾನ ವ್ಯಕ್ತವಾಗಿದೆ. ಶೋಧಕಾರ್ಯ ನಡೆದಿದೆ.

ಬೆಂಗಳೂರು: ಆಟವಾಡುತ್ತ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದ ಅಣ್ಣ-ತಂಗಿ?
ಜಾನ್ ಸೀನಾ, ಮಹಾಲಕ್ಷ್ಮೀ
Kiran Surya
| Edited By: |

Updated on:Oct 22, 2024 | 9:02 AM

Share

ಬೆಂಗಳೂರು, ಅಕ್ಟೋಬರ್​ 22: ಸೋಮವಾರ ಸಂಜೆ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಕೆಂಗೇರಿ ಕೆರೆ (Kengeri Lake) ಬಳಿ ನಾಪತ್ತೆಯಾಗಿದ್ದಾರೆ. ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರು. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು.

ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆದಿದೆ. ಕೆಂಗೇರಿ ಕೆರೆ ಬಳಿ ನಾಗಮ್ಮರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಮಳೆಗೆ ಬೆಂಗಳೂರಿನ ಕೆರೆಗಳಿಗೆ ಜೀವಕಳೆ: ಮೈದುಂಬಿ ಹರಿಯುತ್ತಿರುವ 40 ಕೆರೆಗಳು

ನಾಗಮ್ಮ ಬಿಬಿಎಂಪಿಯಲ್ಲಿ ಕಸ ವಿಂಗಡಣೆ ಕೆಲಸ ಮಾಡುತ್ತಿದ್ದಾರೆ. ನಾಗಮ್ಮ ತನ್ನ ಇಬ್ಬರು ಮಕ್ಕಳು ಮತ್ತು ಸಹೋದರಿ ಧನಲಕ್ಷ್ಮೀ ಜೊತೆಗೆ ವಾಸವಾಗಿದ್ದಾರೆ.

ರಸ್ತೆಗಳು ಸಂಪೂರ್ಣ ಜಲಾವೃತ

ದೇವನಹಳ್ಳಿ: ಒಡೆದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಗ್ರಾಮದ ಕೆರೆ ಕೋಡಿ ಬಡಾವಣೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನು, ಮಳೆಗೆ ವೆಂಕಟಗಿರಿಕೋಟೆ ಗ್ರಾಮದಲ್ಲಿನ ರಾಗಿ, ಹೂವಿನ ಬೆಳೆ ನಾಶವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಚಿಕ್ಕಬಳ್ಳಾಪುರ ಸುತ್ತಮುತ್ತ ಭಾರಿ ಮಳೆಯಾಗಿದೆ. ಮಳೆಯಿಂದ ಕಳೆದ ರಾತ್ರಿ ಕಾಲುವೆ ತುಂಬಿ ಹರಿದಿದೆ. ರಭಸವಾಗಿ ಹರಿಯುತ್ತಿದ್ದ ಕಾಲುವೆ ನೀರಿನಲ್ಲಿ ಎರಡು ಕಾರುಗಳು ಕೊಚ್ಚಿಕೊಂಡು ದೇವನಹಳ್ಳಿ ತಾಲೂಕಿನ ನಾಗರ್ಜುನಾ ಕಾಲೇಜು ಬಳಿ ಬಂದಿವೆ. ಕಾಲುವೆಯಲ್ಲಿ ಒಂದು ಕಾರು ಸಂಪೂರ್ಣ ಮುಳುಗಡೆಯಾಗಿದೆ. ಮತ್ತೊಂದು ಕಾರು ದಡದಲ್ಲಿ ನಿಂತಿದೆ.

ಹುರಳಗುರ್ಕಿ ಗ್ರಾಮದ ಆರೂ ಜನರು ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಮಳೆ ನೀರಿನ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಕೊಚ್ಚಿಕೊಂಡು ಹೋಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಆರೂ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಧಾರಾಕಾರ ಮಳೆಯಿಂದ ಇನ್ನೂವರೆಗು ರಸ್ತೆ ತುಂಬಾ ಮಳೆ ನೀರು ಹರಿಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Tue, 22 October 24

Follow Us
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ