AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಟವಾಡುತ್ತ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದ ಅಣ್ಣ-ತಂಗಿ?

ಕಳೆದ 3-4 ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಸೋಮವಾರ ಸಂಜೆ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಅನುಮಾನ ವ್ಯಕ್ತವಾಗಿದೆ. ಶೋಧಕಾರ್ಯ ನಡೆದಿದೆ.

ಬೆಂಗಳೂರು: ಆಟವಾಡುತ್ತ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದ ಅಣ್ಣ-ತಂಗಿ?
ಜಾನ್ ಸೀನಾ, ಮಹಾಲಕ್ಷ್ಮೀ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Oct 22, 2024 | 9:02 AM

Share

ಬೆಂಗಳೂರು, ಅಕ್ಟೋಬರ್​ 22: ಸೋಮವಾರ ಸಂಜೆ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಕೆಂಗೇರಿ ಕೆರೆ (Kengeri Lake) ಬಳಿ ನಾಪತ್ತೆಯಾಗಿದ್ದಾರೆ. ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರು. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು.

ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆದಿದೆ. ಕೆಂಗೇರಿ ಕೆರೆ ಬಳಿ ನಾಗಮ್ಮರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಮಳೆಗೆ ಬೆಂಗಳೂರಿನ ಕೆರೆಗಳಿಗೆ ಜೀವಕಳೆ: ಮೈದುಂಬಿ ಹರಿಯುತ್ತಿರುವ 40 ಕೆರೆಗಳು

ನಾಗಮ್ಮ ಬಿಬಿಎಂಪಿಯಲ್ಲಿ ಕಸ ವಿಂಗಡಣೆ ಕೆಲಸ ಮಾಡುತ್ತಿದ್ದಾರೆ. ನಾಗಮ್ಮ ತನ್ನ ಇಬ್ಬರು ಮಕ್ಕಳು ಮತ್ತು ಸಹೋದರಿ ಧನಲಕ್ಷ್ಮೀ ಜೊತೆಗೆ ವಾಸವಾಗಿದ್ದಾರೆ.

ರಸ್ತೆಗಳು ಸಂಪೂರ್ಣ ಜಲಾವೃತ

ದೇವನಹಳ್ಳಿ: ಒಡೆದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಗ್ರಾಮದ ಕೆರೆ ಕೋಡಿ ಬಡಾವಣೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನು, ಮಳೆಗೆ ವೆಂಕಟಗಿರಿಕೋಟೆ ಗ್ರಾಮದಲ್ಲಿನ ರಾಗಿ, ಹೂವಿನ ಬೆಳೆ ನಾಶವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಚಿಕ್ಕಬಳ್ಳಾಪುರ ಸುತ್ತಮುತ್ತ ಭಾರಿ ಮಳೆಯಾಗಿದೆ. ಮಳೆಯಿಂದ ಕಳೆದ ರಾತ್ರಿ ಕಾಲುವೆ ತುಂಬಿ ಹರಿದಿದೆ. ರಭಸವಾಗಿ ಹರಿಯುತ್ತಿದ್ದ ಕಾಲುವೆ ನೀರಿನಲ್ಲಿ ಎರಡು ಕಾರುಗಳು ಕೊಚ್ಚಿಕೊಂಡು ದೇವನಹಳ್ಳಿ ತಾಲೂಕಿನ ನಾಗರ್ಜುನಾ ಕಾಲೇಜು ಬಳಿ ಬಂದಿವೆ. ಕಾಲುವೆಯಲ್ಲಿ ಒಂದು ಕಾರು ಸಂಪೂರ್ಣ ಮುಳುಗಡೆಯಾಗಿದೆ. ಮತ್ತೊಂದು ಕಾರು ದಡದಲ್ಲಿ ನಿಂತಿದೆ.

ಹುರಳಗುರ್ಕಿ ಗ್ರಾಮದ ಆರೂ ಜನರು ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಮಳೆ ನೀರಿನ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಕೊಚ್ಚಿಕೊಂಡು ಹೋಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಆರೂ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಧಾರಾಕಾರ ಮಳೆಯಿಂದ ಇನ್ನೂವರೆಗು ರಸ್ತೆ ತುಂಬಾ ಮಳೆ ನೀರು ಹರಿಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Tue, 22 October 24

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ