AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಕಟ್ಟಡ ಮಾಲೀಕನ ವಿರುದ್ಧ ಎಫ್​ಐಆರ್ ದಾಖಲು

Bengaluru: ದು ಸುಮಾರು 70 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಟ್ಟಿಗೆ ಮತ್ತು ಮಣ್ಣಿನಿಂದ ನಿರ್ಮಾಣ ಮಾಡಿದ್ದ ಕಟ್ಟಡ ಇದಾಗಿದೆ. ಇಟ್ಟಿಗೆಗಳು ಹಾಳಾಗಿದ್ದು, ಮಣ್ಣಿನಿಂದ ನಿರ್ಮಿಸಿದ್ದ ಕಟ್ಟಡ ಕುಸಿತವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಕಟ್ಟಡ ಮಾಲೀಕನ ವಿರುದ್ಧ ಎಫ್​ಐಆರ್ ದಾಖಲು
ಕಟ್ಟಡದ ಮೊದಲ ಸ್ವರೂಪ (ಎಡ), ಕಟ್ಟಡ ಕುಸಿತ ಘಟನೆಯ ಬಳಿಕ (ಬಲ)
TV9 Web
| Edited By: |

Updated on:Sep 27, 2021 | 3:40 PM

Share

ಬೆಂಗಳೂರು: ನಗರದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಕಟ್ಟಡ ಕುಸಿತ ವೇಳೆ ಪಕ್ಕದ ಮನೆಯಲ್ಲಿ ತಾಯಿ- ಮಕ್ಕಳು ಇದ್ದರು. ಹಳೇ ಕಟ್ಟಡ ಕುಸಿತದಿಂದ ಪಕ್ಕದ ಮನೆಯ ಗೋಡೆಗೆ ಹಾನಿ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಕ್ಕಸಂದ್ರದ 7ನೇ ಮುಖ್ಯರಸ್ತೆ, 14ನೇ ಕ್ರಾಸ್​ನಲ್ಲಿನ ಮನೆ ಕುಸಿತಗೊಂಡಿದೆ. ಸುರೇಶ್ ಎಂಬುವವರಿಗೆ ಸೇರಿದ ಹಳೇ ಮನೆ ಕುಸಿತವಾಗಿದೆ. ಈ ಬಗ್ಗೆ ಮೊದಲೇ ಅನುಮಾನ ಇದ್ದ ಕಾರಣ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಕಟ್ಟಡ ಕುಸಿತ ಸ್ಥಳಕ್ಕೆ ಎನ್​ಡಿಆರ್​ಎಫ್​ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಆದರೆ, ಕೊನೆಯ ವೇಳೆಯವರೆಗೂ ಕಟ್ಟಡದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿವಿ9ಗೆ ಬಿಬಿಎಂಪಿ ಜಂಟಿ ಆಯುಕ್ತ ವೀರಭದ್ರಸ್ವಾಮಿ ಹೇಳಿಕೆ ನೀಡಿದ್ದಾರೆ. ಮನೆಯಲ್ಲಿ ವಾಸಿಸುವುದಕ್ಕೆ ಯೋಗ್ಯವಾಗಿ ಇರಲಿಲ್ಲ. ಆದರೂ ಮನೆ ಬಾಡಿಗೆಗೆ ನೀಡಿದ್ದ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ವೀರಭದ್ರಸ್ವಾಮಿ ಹೇಳಿದ್ದಾರೆ.

ಕಟ್ಟಡ ಕುಸಿಯುವ ಮಾಹಿತಿ ಮೊದಲೇ ಗೊತ್ತಾದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದರು. ಕಟ್ಟಡ ಕುಸಿತ ಆಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಕುಸಿದು ಬಿದ್ದ ಕಟ್ಟಡದ ಸುತ್ತಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಗ್ನಿಶಾಮಕದ ದಳದ ಸಿಬ್ಬಂದಿ ಬೆಸ್ಕಾಂ ಲೈನ್ ಬಂದ್ ಮಾಡಿಸಿದ್ದರು. ಇದು ಸುಮಾರು 70 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಟ್ಟಿಗೆ ಮತ್ತು ಮಣ್ಣಿನಿಂದ ನಿರ್ಮಾಣ ಮಾಡಿದ್ದ ಕಟ್ಟಡ ಇದಾಗಿದೆ. ಇಟ್ಟಿಗೆಗಳು ಹಾಳಾಗಿದ್ದು, ಮಣ್ಣಿನಿಂದ ನಿರ್ಮಿಸಿದ್ದ ಕಟ್ಟಡ ಕುಸಿತವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ಕಟ್ಟಡ ಮಾಲೀಕನ ವಿರುದ್ಧ ಎಫ್​ಐಆರ್ ದಾಖಲು ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಕಟ್ಟಡದ ಮಾಲೀಕ ಸುರೇಶ್ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ಘಟನೆ ಬಳಿಕ ಸುರೇಶ್ ಸ್ಥಳಕ್ಕೆ ಬರದೆ ನಾಪತ್ತೆಯಾಗಿದ್ದಾರೆ. ಆಡುಗೋಡಿ ಠಾಣೆಯಲ್ಲಿ ಸುರೇಶ್ ವಿರುದ್ದ ಕೇಸ್ ದಾಖಲು ಮಾಡಲಾಗಿದೆ. ಆಡುಗೋಡಿ ಪೊಲೀಸರಿಂದ ಸುರೇಶ್​ಗಾಗಿ ಶೋಧಕಾರ್ಯ ನಡೆದಿದೆ. ಸುಮೋಟೋ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು, ಐಪಿಎಸ್ 336 ರ ಅಡಿಯಲ್ಲಿ ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಸ್ಥಳೀಯರು ಮನೆಯ ಬಗ್ಗೆ ಮಾತನಾಡಿದ್ದಾರೆ ಇಂದು ಬೆಳಗ್ಗೆ 10- 10.30ರ ಸುಮಾರಿಗೆ ಘಟನೆ ನಡೆದಿದೆ. ಈ ಕಟ್ಟಡ ರಾತ್ರಿ ಸಮಯದಲ್ಲಿ ಬಿದ್ದಿದ್ರೆ 40-50 ಜನ ಸಾಯುತ್ತಿದ್ರು. ಮನೆ ಮಾಲೀಕರಿಗೆ ಹೇಳಿದ್ವಿ. ಮನೆಯನ್ನ ತೆರವು ಮಾಡುವಂತೆ ಹೇಳಿದ್ರೂ ಕೇಳಿರಲಿಲ್ಲ. ಅವಾಗವಾಗ ಮನೆಯ ಗೋಡೆಯಿಂದ ಶಬ್ದ ಬರುತ್ತಿತ್ತು. ಇಂದು ಬೆಳಗ್ಗೆ ಗೋಡೆಯಿಂದ ಮಣ್ಣು ಬೀಳುತ್ತಿತ್ತು. ಮನೆಯನ್ನ ತೆರವು ಮಾಡುವಂತೆ ಬಿಬಿಎಂಪಿಗೂ ಹೇಳಿದ್ವಿ. ಮನೆ ಬೀಳುವಾಗ ನಾವು ಕೂಡ ನಮ್ಮ ಮನೆಯಲ್ಲಿ ಇದ್ವಿ. ನಮ್ಮ ಮನೆಯಲ್ಲೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಇದ್ವಿ. ಆದರೆ ನಾವು ಪ್ರಣಾಪಾಯದಿಂದ ಪಾರಾಗಿದ್ದೀವಿ. ನಂಜಪ್ಪ ಎನ್ನುವವರು 1974ರಲ್ಲಿ ಈ ಮನೆಯನ್ನ ಕಟ್ಟಿಸಿದ್ರು. ಇತ್ತೀಚೆಗೆ ಅವರು ಈ ಮನೆಯಲ್ಲಿ ಬಾಡಿಗೆಗೆ ಕೊಟ್ಟಿದ್ರು ಎಂದು ಲಕ್ಕಸಂದ್ರದ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ನಗರದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ರಾತ್ರಿ ವೇಳೆ ಕಟ್ಟಡ ಬಿದ್ದಿದ್ದರೆ ಹೆಚ್ಚು ಜನ ಸಾಯುತ್ತಿದ್ದರು. 40ಕ್ಕೂ ಹೆಚ್ಚು ಜನ ಸಾಯುತ್ತಿದ್ದರೆಂದು ಸ್ಥಳೀಯರ ಮಾಹಿತಿ ನೀಡಿದ್ದಾರೆ. ಕಟ್ಟಡ ಮೊದಲೇ ವಾಲಿತ್ತು, ತೆರವಿಗೆ ಮನವಿ ಮಾಡಿದ್ದೆವು. ಮನವಿ ಮಾಡಿದ್ರೂ ಯಾರೂ ಈ ಕಟ್ಟಡ ತೆರವುಗೊಳಿಸಿರಲಿಲ್ಲ. ಇಲ್ಲಿನ ಜನರನ್ನು ತೆರವುಗೊಳಿಸಿದ್ರಿಂದ ದೊಡ್ಡ ದುರಂತ ತಪ್ಪಿದೆ. ತುಂಬಾ ಹಳೇ ಕಟ್ಟಡ, ಜನರು ವಾಸಿಸಲು ಯೋಗ್ಯವಾಗಿರಲಿಲ್ಲ ಎಂದು ಸ್ಥಳೀಯರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರಾಸಾಯನಿಕ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ; ಗಾಳಿಯೆಲ್ಲಾ ವಾಸನೆ

ಇದನ್ನೂ ಓದಿ: ಬೆಂಗಳೂರು: ಪಟಾಕಿ ಸ್ಫೋಟದಿಂದ ಇಷ್ಟು ಪ್ರಮಾಣದ ಅವಘಡ ಆಗಲ್ಲ- ಎಫ್​​ಎಸ್​​ಎಲ್​​​​ ತಜ್ಞರ ಹೇಳಿಕೆ

Published On - 2:49 pm, Mon, 27 September 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ