ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಫೈರಿಂಗ್​: ಕೂದಲೆಳೆ ಅಂತರದಲ್ಲಿ ಬಚಾವ್​!

ಬೆಂಗಳೂರಿನ ಬಸವನಗುಡಿಯ ಕೃಷ್ಣರಾವ್ ಪಾರ್ಕ್​ನಲ್ಲಿ ಗುರುವಾರ ರಾತ್ರಿ ಉದ್ಯಮಿ ಮೇಲೆ ಏರ್ ಗನ್​ನಿಂದ ದುಷ್ಕರ್ಮಿಗಳು ಫೈರಿಂಗ್​ ಮಾಡಿರುವಂತಹ ಘಟನೆ ನಡೆದಿದೆ. ಸ್ನೇಹಿತರ ಭೇಟಿಗೆ ಬಂದಿದ್ದ ವೇಳೆ ದುರಂತ ನಡೆದಿದೆ. ಸದ್ಯ ಬಸವನಗುಡಿ ಹಾಗೂ ಸಿಸಿಬಿ ತಂಡದಿಂದ ಪ್ರಕರಣದ ತನಿಖೆ ನಡೆದಿದ್ದು, ಎಫ್​​ಐಆರ್​​ ದಾಖಲಾಗಿದೆ.​

ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಫೈರಿಂಗ್​: ಕೂದಲೆಳೆ ಅಂತರದಲ್ಲಿ ಬಚಾವ್​!
ಉದ್ಯಮಿ ಮೇಲೆ ಫೈರಿಂಗ್
Edited By:

Updated on: Dec 12, 2025 | 4:28 PM

ಬೆಂಗಳೂರು, ಡಿಸೆಂಬರ್​ 12: ಉದ್ಯಮಿ (businessman) ಮೇಲೆ ಏರ್​ ಗನ್​ನಿಂದ ದುಷ್ಕರ್ಮಿಗಳು ಫೈರಿಂಗ್​ (Firing) ಮಾಡಿರುವಂತಹ ಘಟನೆ ನಗರದ ಬಸವನಗುಡಿಯ ಕೃಷ್ಣರಾವ್ ಪಾರ್ಕ್​ನಲ್ಲಿ ಗುರುವಾರ ರಾತ್ರಿ ನಡೆದಿದೆ. ನರ್ತಕಿ ಹಾಗೂ ಕಾರ್ಗಿಲ್ ಬಾರ್ ಮಾಲೀಕ, ಉದ್ಯಮಿ ರಾಜಗೋಪಾಲ್​ ಮೇಲೆ ಫೈರಿಂಗ್ ಮಾಡಲಾಗಿದ್ದು, ಕತ್ತಿನ ಭಾಗಕ್ಕೆ ಗಾಯವಾಗಿದೆ. ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಪಿಗಾಗಿ ಬಸವನಗುಡಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದೂರುದಾರರ ಮಾಹಿತಿ ಆಧರಿಸಿ ಎಫ್ಐಆರ್​​ ದಾಖಲಿಸಲಾಗಿದೆ.

ನಡೆದಿದ್ದೇನು?

ಬಸವನಗುಡಿಯ ಕೃಷ್ಣರಾವ್ ಪಾರ್ಕ್​​ಗೆ ರಾಜಗೋಪಾಲ್,​​ ಸ್ನೇಹಿತರ ಭೇಟಿಗೆ ಬಂದಿದ್ದರು. ರಸ್ತೆಗೆ ಅಂಟಿಕೊಂಡಂತೆ ಪಾರ್ಕ್ ಇದೆ. ಇತ್ತ ಉದ್ಯಮಿ ಪಾರ್ಕ್​​ನಲ್ಲಿ ವಾಕ್ ಮಾಡುತ್ತಿರುವಾಗ ಗನ್ ಫೈರ್ ಆಗಿದೆ.  ಹೀಗಾಗಿ ರಸ್ತೆಯಲ್ಲಿ ನಿಂತು ಏರ್​ ಗನ್​ನಿಂದ ಫೈರ್​​ ಮಾಡಿರಬಹುದು ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಇದನ್ನೂ ಓದಿ: ಭಾರಿ ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು! ಮೈ ಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ

ಸದ್ಯ ಬಸವನಗುಡಿ ಹಾಗೂ ಸಿಸಿಬಿ ತಂಡದಿಂದ ಪ್ರಕರಣದ ತನಿಖೆ ನಡೆದಿದೆ. ಯಾವುದೇ ವ್ಯಕ್ತಿಗಳ ಮೇಲೆ ಅನುಮಾನವಿಲ್ಲ. ಈತನಕ ಕೂಡ ಯಾವ ಬೆದರಿಕೆ ಕರೆಯೂ ಬಂದಿಲ್ಲ. ಏಕೆ ಫೈರಿಂಗ್ ಆಯ್ತು? ಯಾವ ಕಾರಣಕ್ಕೆ ಫೈರಿಂಗ್ ಮಾಡಿದರು ಗೊತ್ತಿಲ್ಲ. ಆದರೆ ಏರ್​ ಗನ್​ನಿಂದ ಫೈರಿಂಗ್​​​ ಆಗಿದೆ ಎಂದು ಉದ್ಯಮಿ ರಾಜಗೋಪಾಲ್​​ ಹೇಳಿದ್ದಾರೆ. ಹೀಗಾಗಿ ಅದು ಏರ್​ ಗನ್​ ಹೌದೋ ಅಲ್ಲವೋ ಎನ್ನುವ ಬಗ್ಗೆ ತನಿಖೆ ನಡೆದಿದೆ.

ಇನ್ನು ಘಟನಾ ಸ್ಥಳಕ್ಕೆ ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಉದ್ಯಮಿ ರಾಜ್ ಗೋಪಾಲ್ ದಾಖಲಾಗಿರುವ ಬೆಂಗಳೂರು ಆಸ್ಪತ್ರೆಗೆ ಬಸವನಗುಡಿ ಹಾಗೂ ಸಿಸಿಬಿ ಇನ್ಸ್​ಪೆಕ್ಟರ್​ಗಳ ತಂಡ ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ಕಾಲಿಗೆ ಗುಂಡೇಟು

ಯಾರಾದರೂ ಹತ್ಯೆಗೆ ಸಂಚು ರೂಪಿಸಿದ್ದರಾ ಎಂಬ ಬಗ್ಗೆ ತನಿಖೆ ನಡೆದಿದ್ದು, ಮೇಲ್ನೋಟಕ್ಕೆ ಟಾರ್ಗೆಟ್ ಮಾಡಿ ಹೊಡೆದಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಉದ್ಯಮಿ ರಾಜಗೋಪಾಲ್​​ ಕೋಟ್ಯಂತರ ರೂ. ವ್ಯವಹಾರ ಹೊಂದಿದ್ದಾರೆ. ನರ್ತಕಿ ಬಾರ್, ಮೆಜೆಸ್ಟಿಕ್ ಸುತ್ತಮುತ್ತದ ಅಂಗಡಿಗಳಿಂದ ಬಾಡಿಗೆ ಬರುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us