AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ

ಬೆಂಗಳೂರು ನಗರ ಪೊಲೀಸ್​ ಮತ್ತು ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಮುಕ್ತ ನಗರವನ್ನಾಗಿಸಲು ಪಣತೊಟ್ಟಿದ್ದಾರೆ. ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು ಪೆಡ್ಲರ್​ಗಳನ್ನು ಬಂಧಿಸಿ, ಡ್ರಗ್ಸ್​ ಅನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಇದೀಗ, ಸಿಸಿಬಿ ಅಧಿಕಾರಿಗಳು ಬೃಹತ್​ ಕಾರ್ಯಾಚರಣೆ ನಡೆಸಿದ್ದು, 9 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ
ವಿದೇಶಿ ಪೆಡ್ಲರ್ಸ್
TV9 Web
| Edited By: |

Updated on: Oct 22, 2024 | 1:09 PM

Share

ಬೆಂಗಳೂರು, ಅಕ್ಟೋಬರ್​ 22: ಕೇಂದ್ರ ಅಪರಾಧ ವಿಭಾಗದ (CCB) ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ (Drugs)​ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್​​ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್​ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ. ಬಂಧಿತರು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್​​ ಅನ್ನು 8 ರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾರೆ. ಬಂಧಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

21 ಕೋಟಿ ಮೌಲ್ಯದ ಡ್ರಗ್ಸ್​ ಪತ್ತೆ

ಸಿಸಿಬಿ ಅಧಿಕಾರಿಗಳು ಶ್ವಾನದಳದ ಸಹಾಯದಿಂದ ಕಳೆದ ವಾರ ಚಾರಾಜಪೇಟೆ ಬಳಿಯ ಅಂಚೆ ಕಚೇರಿಯಲ್ಲಿ ಸುಮಾರು 3500 ಪೋಸ್ಟ್​​ಗಳನ್ನ ಪರಿಶೀಲನೆ ನಡೆಸಿದರು. ಈ ವೇಳೆ ಯುಸ್, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೆದರಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಬಂದಿರುವ 606 ಪೋಸ್ಟ್​ಗಳಲ್ಲಿ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಐಷಾರಾಮಿ ಡ್ರಗ್ಸ್​ಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಚಾಮರಾಜಪೇಟೆ ಅಂಚೆ ಕಚೇರಿ ಮೇಲೆ ಸಿಸಿಬಿ ದಾಳಿ: ಸ್ಪೋಟಕ ವಿಚಾರ ಬಹಿರಂಗ

ಈ ಸಂಬಂಧ ಸಿಸಿಬಿ ಅಧಿಕಾರಿಗಳು ಒಟ್ಟು 12 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ತಂಡ ಕೆಲ ಪೆಡ್ಲರ್​ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೆಡ್ಲರ್​ಗಳ ವಿಚಾರಣೆ ವೇಳೆ ಹಾಂಕಾಂಗ್, ಥೈಲ್ಯಾಂಡ್, ಅಮೆರಿಕಗೆ ಲಿಂಕ್ ಇರುವುದು ಪತ್ತೆಯಾಗಿದೆ. ಸಿಸಿಬಿ ವಿಶೇಷ ತಂಡ ಸದ್ಯ ಅಂತಾರಾಷ್ಟ್ರೀಯ ಡ್ರಗ್ ನೆಟ್​ವರ್ಕ್​ ಬಗ್ಗೆ ತನಿಖೆ ನಡೆಸುತ್ತಿದೆ.

ಬೆಂಗಳೂರಿಗೆ ಕೇವಲ ದೇಶದ ವಿವಿಧ ರಾಜ್ಯಗಳಿಂದ ಮಾತ್ರ ಡ್ರಗ್ಸ್ ಬರುತ್ತಿಲ್ಲ, ಬದಲಿಗೆ ವಿದೇಶಗಳಿಂದಲೂ ಬರುತ್ತಿದೆ ಎಂಬ ಮಾಹಿತಿ ಅಂಚೆ ಕಚೇರಿ ಮೇಲೆ ದಾಳಿ ಮಾಡಿದ ಮೇಲೆ ಗೊತ್ತಾಗಿದೆ. ಅದರಿಂದ ಸಿಸಿಬಿ ಪೊಲೀಸರು ವಿದೇಶಿ ಪಾರ್ಸೆಲ್​ಗಳ ಮೇಲೆ ನಿಗಾ ಇಟ್ಟಿದ್ದು, ಮಾದಕ ವಸ್ತುಗಳ ಜಾಲ ಮಟ್ಟ ಹಾಕಲು ಶತಪ್ರಯತ್ನ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು