Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ

ಬೆಂಗಳೂರು ನಗರ ಪೊಲೀಸ್​ ಮತ್ತು ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಮುಕ್ತ ನಗರವನ್ನಾಗಿಸಲು ಪಣತೊಟ್ಟಿದ್ದಾರೆ. ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು ಪೆಡ್ಲರ್​ಗಳನ್ನು ಬಂಧಿಸಿ, ಡ್ರಗ್ಸ್​ ಅನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಇದೀಗ, ಸಿಸಿಬಿ ಅಧಿಕಾರಿಗಳು ಬೃಹತ್​ ಕಾರ್ಯಾಚರಣೆ ನಡೆಸಿದ್ದು, 9 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ
ವಿದೇಶಿ ಪೆಡ್ಲರ್ಸ್
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 22, 2024 | 1:09 PM

ಬೆಂಗಳೂರು, ಅಕ್ಟೋಬರ್​ 22: ಕೇಂದ್ರ ಅಪರಾಧ ವಿಭಾಗದ (CCB) ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ (Drugs)​ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್​​ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್​ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ. ಬಂಧಿತರು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್​​ ಅನ್ನು 8 ರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾರೆ. ಬಂಧಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

21 ಕೋಟಿ ಮೌಲ್ಯದ ಡ್ರಗ್ಸ್​ ಪತ್ತೆ

ಸಿಸಿಬಿ ಅಧಿಕಾರಿಗಳು ಶ್ವಾನದಳದ ಸಹಾಯದಿಂದ ಕಳೆದ ವಾರ ಚಾರಾಜಪೇಟೆ ಬಳಿಯ ಅಂಚೆ ಕಚೇರಿಯಲ್ಲಿ ಸುಮಾರು 3500 ಪೋಸ್ಟ್​​ಗಳನ್ನ ಪರಿಶೀಲನೆ ನಡೆಸಿದರು. ಈ ವೇಳೆ ಯುಸ್, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೆದರಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಬಂದಿರುವ 606 ಪೋಸ್ಟ್​ಗಳಲ್ಲಿ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಐಷಾರಾಮಿ ಡ್ರಗ್ಸ್​ಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಚಾಮರಾಜಪೇಟೆ ಅಂಚೆ ಕಚೇರಿ ಮೇಲೆ ಸಿಸಿಬಿ ದಾಳಿ: ಸ್ಪೋಟಕ ವಿಚಾರ ಬಹಿರಂಗ

ಈ ಸಂಬಂಧ ಸಿಸಿಬಿ ಅಧಿಕಾರಿಗಳು ಒಟ್ಟು 12 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ತಂಡ ಕೆಲ ಪೆಡ್ಲರ್​ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೆಡ್ಲರ್​ಗಳ ವಿಚಾರಣೆ ವೇಳೆ ಹಾಂಕಾಂಗ್, ಥೈಲ್ಯಾಂಡ್, ಅಮೆರಿಕಗೆ ಲಿಂಕ್ ಇರುವುದು ಪತ್ತೆಯಾಗಿದೆ. ಸಿಸಿಬಿ ವಿಶೇಷ ತಂಡ ಸದ್ಯ ಅಂತಾರಾಷ್ಟ್ರೀಯ ಡ್ರಗ್ ನೆಟ್​ವರ್ಕ್​ ಬಗ್ಗೆ ತನಿಖೆ ನಡೆಸುತ್ತಿದೆ.

ಬೆಂಗಳೂರಿಗೆ ಕೇವಲ ದೇಶದ ವಿವಿಧ ರಾಜ್ಯಗಳಿಂದ ಮಾತ್ರ ಡ್ರಗ್ಸ್ ಬರುತ್ತಿಲ್ಲ, ಬದಲಿಗೆ ವಿದೇಶಗಳಿಂದಲೂ ಬರುತ್ತಿದೆ ಎಂಬ ಮಾಹಿತಿ ಅಂಚೆ ಕಚೇರಿ ಮೇಲೆ ದಾಳಿ ಮಾಡಿದ ಮೇಲೆ ಗೊತ್ತಾಗಿದೆ. ಅದರಿಂದ ಸಿಸಿಬಿ ಪೊಲೀಸರು ವಿದೇಶಿ ಪಾರ್ಸೆಲ್​ಗಳ ಮೇಲೆ ನಿಗಾ ಇಟ್ಟಿದ್ದು, ಮಾದಕ ವಸ್ತುಗಳ ಜಾಲ ಮಟ್ಟ ಹಾಕಲು ಶತಪ್ರಯತ್ನ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ