AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ

ಬೆಂಗಳೂರು ನಗರ ಪೊಲೀಸ್​ ಮತ್ತು ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಮುಕ್ತ ನಗರವನ್ನಾಗಿಸಲು ಪಣತೊಟ್ಟಿದ್ದಾರೆ. ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು ಪೆಡ್ಲರ್​ಗಳನ್ನು ಬಂಧಿಸಿ, ಡ್ರಗ್ಸ್​ ಅನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಇದೀಗ, ಸಿಸಿಬಿ ಅಧಿಕಾರಿಗಳು ಬೃಹತ್​ ಕಾರ್ಯಾಚರಣೆ ನಡೆಸಿದ್ದು, 9 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ
ವಿದೇಶಿ ಪೆಡ್ಲರ್ಸ್
TV9 Web
| Edited By: |

Updated on: Oct 22, 2024 | 1:09 PM

Share

ಬೆಂಗಳೂರು, ಅಕ್ಟೋಬರ್​ 22: ಕೇಂದ್ರ ಅಪರಾಧ ವಿಭಾಗದ (CCB) ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ (Drugs)​ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್​​ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್​ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ. ಬಂಧಿತರು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್​​ ಅನ್ನು 8 ರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾರೆ. ಬಂಧಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

21 ಕೋಟಿ ಮೌಲ್ಯದ ಡ್ರಗ್ಸ್​ ಪತ್ತೆ

ಸಿಸಿಬಿ ಅಧಿಕಾರಿಗಳು ಶ್ವಾನದಳದ ಸಹಾಯದಿಂದ ಕಳೆದ ವಾರ ಚಾರಾಜಪೇಟೆ ಬಳಿಯ ಅಂಚೆ ಕಚೇರಿಯಲ್ಲಿ ಸುಮಾರು 3500 ಪೋಸ್ಟ್​​ಗಳನ್ನ ಪರಿಶೀಲನೆ ನಡೆಸಿದರು. ಈ ವೇಳೆ ಯುಸ್, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೆದರಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಬಂದಿರುವ 606 ಪೋಸ್ಟ್​ಗಳಲ್ಲಿ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಐಷಾರಾಮಿ ಡ್ರಗ್ಸ್​ಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಚಾಮರಾಜಪೇಟೆ ಅಂಚೆ ಕಚೇರಿ ಮೇಲೆ ಸಿಸಿಬಿ ದಾಳಿ: ಸ್ಪೋಟಕ ವಿಚಾರ ಬಹಿರಂಗ

ಈ ಸಂಬಂಧ ಸಿಸಿಬಿ ಅಧಿಕಾರಿಗಳು ಒಟ್ಟು 12 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ತಂಡ ಕೆಲ ಪೆಡ್ಲರ್​ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೆಡ್ಲರ್​ಗಳ ವಿಚಾರಣೆ ವೇಳೆ ಹಾಂಕಾಂಗ್, ಥೈಲ್ಯಾಂಡ್, ಅಮೆರಿಕಗೆ ಲಿಂಕ್ ಇರುವುದು ಪತ್ತೆಯಾಗಿದೆ. ಸಿಸಿಬಿ ವಿಶೇಷ ತಂಡ ಸದ್ಯ ಅಂತಾರಾಷ್ಟ್ರೀಯ ಡ್ರಗ್ ನೆಟ್​ವರ್ಕ್​ ಬಗ್ಗೆ ತನಿಖೆ ನಡೆಸುತ್ತಿದೆ.

ಬೆಂಗಳೂರಿಗೆ ಕೇವಲ ದೇಶದ ವಿವಿಧ ರಾಜ್ಯಗಳಿಂದ ಮಾತ್ರ ಡ್ರಗ್ಸ್ ಬರುತ್ತಿಲ್ಲ, ಬದಲಿಗೆ ವಿದೇಶಗಳಿಂದಲೂ ಬರುತ್ತಿದೆ ಎಂಬ ಮಾಹಿತಿ ಅಂಚೆ ಕಚೇರಿ ಮೇಲೆ ದಾಳಿ ಮಾಡಿದ ಮೇಲೆ ಗೊತ್ತಾಗಿದೆ. ಅದರಿಂದ ಸಿಸಿಬಿ ಪೊಲೀಸರು ವಿದೇಶಿ ಪಾರ್ಸೆಲ್​ಗಳ ಮೇಲೆ ನಿಗಾ ಇಟ್ಟಿದ್ದು, ಮಾದಕ ವಸ್ತುಗಳ ಜಾಲ ಮಟ್ಟ ಹಾಕಲು ಶತಪ್ರಯತ್ನ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?