AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ

ಬೆಂಗಳೂರು ನಗರ ಪೊಲೀಸ್​ ಮತ್ತು ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಮುಕ್ತ ನಗರವನ್ನಾಗಿಸಲು ಪಣತೊಟ್ಟಿದ್ದಾರೆ. ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು ಪೆಡ್ಲರ್​ಗಳನ್ನು ಬಂಧಿಸಿ, ಡ್ರಗ್ಸ್​ ಅನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಇದೀಗ, ಸಿಸಿಬಿ ಅಧಿಕಾರಿಗಳು ಬೃಹತ್​ ಕಾರ್ಯಾಚರಣೆ ನಡೆಸಿದ್ದು, 9 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ
ವಿದೇಶಿ ಪೆಡ್ಲರ್ಸ್
TV9 Web
| Edited By: |

Updated on: Oct 22, 2024 | 1:09 PM

Share

ಬೆಂಗಳೂರು, ಅಕ್ಟೋಬರ್​ 22: ಕೇಂದ್ರ ಅಪರಾಧ ವಿಭಾಗದ (CCB) ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ (Drugs)​ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್​​ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್​ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ. ಬಂಧಿತರು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್​​ ಅನ್ನು 8 ರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾರೆ. ಬಂಧಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

21 ಕೋಟಿ ಮೌಲ್ಯದ ಡ್ರಗ್ಸ್​ ಪತ್ತೆ

ಸಿಸಿಬಿ ಅಧಿಕಾರಿಗಳು ಶ್ವಾನದಳದ ಸಹಾಯದಿಂದ ಕಳೆದ ವಾರ ಚಾರಾಜಪೇಟೆ ಬಳಿಯ ಅಂಚೆ ಕಚೇರಿಯಲ್ಲಿ ಸುಮಾರು 3500 ಪೋಸ್ಟ್​​ಗಳನ್ನ ಪರಿಶೀಲನೆ ನಡೆಸಿದರು. ಈ ವೇಳೆ ಯುಸ್, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೆದರಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಬಂದಿರುವ 606 ಪೋಸ್ಟ್​ಗಳಲ್ಲಿ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಐಷಾರಾಮಿ ಡ್ರಗ್ಸ್​ಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಚಾಮರಾಜಪೇಟೆ ಅಂಚೆ ಕಚೇರಿ ಮೇಲೆ ಸಿಸಿಬಿ ದಾಳಿ: ಸ್ಪೋಟಕ ವಿಚಾರ ಬಹಿರಂಗ

ಈ ಸಂಬಂಧ ಸಿಸಿಬಿ ಅಧಿಕಾರಿಗಳು ಒಟ್ಟು 12 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ತಂಡ ಕೆಲ ಪೆಡ್ಲರ್​ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೆಡ್ಲರ್​ಗಳ ವಿಚಾರಣೆ ವೇಳೆ ಹಾಂಕಾಂಗ್, ಥೈಲ್ಯಾಂಡ್, ಅಮೆರಿಕಗೆ ಲಿಂಕ್ ಇರುವುದು ಪತ್ತೆಯಾಗಿದೆ. ಸಿಸಿಬಿ ವಿಶೇಷ ತಂಡ ಸದ್ಯ ಅಂತಾರಾಷ್ಟ್ರೀಯ ಡ್ರಗ್ ನೆಟ್​ವರ್ಕ್​ ಬಗ್ಗೆ ತನಿಖೆ ನಡೆಸುತ್ತಿದೆ.

ಬೆಂಗಳೂರಿಗೆ ಕೇವಲ ದೇಶದ ವಿವಿಧ ರಾಜ್ಯಗಳಿಂದ ಮಾತ್ರ ಡ್ರಗ್ಸ್ ಬರುತ್ತಿಲ್ಲ, ಬದಲಿಗೆ ವಿದೇಶಗಳಿಂದಲೂ ಬರುತ್ತಿದೆ ಎಂಬ ಮಾಹಿತಿ ಅಂಚೆ ಕಚೇರಿ ಮೇಲೆ ದಾಳಿ ಮಾಡಿದ ಮೇಲೆ ಗೊತ್ತಾಗಿದೆ. ಅದರಿಂದ ಸಿಸಿಬಿ ಪೊಲೀಸರು ವಿದೇಶಿ ಪಾರ್ಸೆಲ್​ಗಳ ಮೇಲೆ ನಿಗಾ ಇಟ್ಟಿದ್ದು, ಮಾದಕ ವಸ್ತುಗಳ ಜಾಲ ಮಟ್ಟ ಹಾಕಲು ಶತಪ್ರಯತ್ನ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?