AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ!

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಐಪಿಎಸ್ ಲೇಔಟ್ ಸರ್ವಿಸ್ ವಿಲ್ಲಾದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಮಿಗೋಸ್ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿ ಮದ್ಯ ಹಾಗೂ ಹುಕ್ಕಾ ಪಾರ್ಟಿ ಆಯೋಜಿಸಿದ್ದ ದೀಕ್ಷಿತ್ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ!
ಆರೋಪಿಗಳು
ಭಾವನಾ ಹೆಗಡೆ
|

Updated on:Jul 29, 2026 | 11:22 AM

Share

ಮುಖ್ಯಾಂಶಗಳು

  • ಎಚ್‌ಎಸ್‌ಆರ್ ಲೇಔಟ್ ವಿಲ್ಲಾದಲ್ಲಿ ಸಿಸಿಬಿ ಅಧಿಕಾರಿಗಳಿಂದ ದಿಢೀರ್ ದಾಳಿ.
  • ಅಮಿಗೋಸ್ ಆ್ಯಪ್ ಮೂಲಕ ಪ್ರವೇಶ ಶುಲ್ಕ ವಸೂಲಿ ಮಾಡಿ ಪಾರ್ಟಿ.
  • ಮೂವರು ಆಯೋಜಕರ ಬಂಧನ, ಮದ್ಯ ಹಾಗೂ ಹುಕ್ಕಾ ಸೀಜ್.

ಬೆಂಗಳೂರು, ಜುಲೈ 29: ನಗರದ ಎಚ್‌ಎಸ್‌ಆರ್ ಲೇಔಟ್‌ನ 6ನೇ ಸೆಕ್ಟರ್‌ನಲ್ಲಿರುವ ಪ್ರತಿಷ್ಠಿತ ಐಪಿಎಸ್ ಲೇಔಟ್‌ನ ‘ಸಿ-9’ ಸರ್ವಿಸ್ ವಿಲ್ಲಾದಲ್ಲಿ ಇಡೀ ರಾತ್ರಿ ನಡೆಯುತ್ತಿದ್ದ ಭರ್ಜರಿ ರೇವ್ ಪಾರ್ಟಿ (Rave Party) ಮೇಲೆ ಸಿಸಿಬಿಯ ಮಹಿಳಾ ಘಟಕದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದ್ದಾರೆ.

ಆ್ಯಪ್ ಮೂಲಕ ಯುವಕ-ಯುವತಿಯರಿಗೆ ಆಹ್ವಾನ

ಪೊಲೀಸರ ರೇಡ್ ಬೆದರಿಕೆಯಿಂದ ಪಾರಾಗಲು ಐಪಿಎಸ್ ಲೇಔಟ್ ಸುರಕ್ಷಿತ ಎಂದು ಭಾವಿಸಿದ್ದ ಆಯೋಜಕರು, ‘ಅಮಿಗೋಸ್’ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿದ್ದರು. ಪಾರ್ಟಿಗೆ ಪ್ರವೇಶಿಸಲು ಯುವಕರಿಂದ 1,099 ರೂ. ಹಾಗೂ ಯುವತಿಯರಿಂದ 499 ರೂ. ಪ್ರವೇಶ ಶುಲ್ಕವನ್ನು ವಸೂಲಿ ಮಾಡಲಾಗಿತ್ತು. ದಿನಕ್ಕೆ 20,000 ರೂ. ಬಾಡಿಗೆಗೆ ‘ರೆವ್ ಕೀ ಹಾಸ್ಪಿಟಾಲಿಟಿ’ ವಿಲ್ಲಾ ಬುಕ್ ಮಾಡಿ, ಇಡೀ ರಾತ್ರಿ ಮದ್ಯ, ನಿಷೇಧಿತ ಹುಕ್ಕಾ ಹಾಗೂ ಇ-ಸಿಗರೇಟ್‌ಗಳೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಪೊಲೀಸರ ದಾಳಿ

ಖಚಿತ ಸುಳಿವು ಲಭಿಸುತ್ತಿದ್ದಂತೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ರೇವ್ ಪಾರ್ಟಿಯಲ್ಲಿದ್ದ ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸ್ಥಳದಲ್ಲಿದ್ದ ನಿಷೇಧಿತ ಹುಕ್ಕಾ, ಇ-ಸಿಗರೇಟ್ ಹಾಗೂ ಅಪಾರ ಪ್ರಮಾಣದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪಾರ್ಟಿ ಆಯೋಜಿಸಿದ್ದ ದೀಕ್ಷಿತ್, ವೇದಾಂತ್ ಪಂಡಿತ್ ಮತ್ತು ಶಂಕರ್ ಎಂಬ ಮೂವರು ಆರೋಪಿಗಳನ್ನು ಸಿಸಿಬಿ ಅರೆಸ್ಟ್ ಮಾಡಿದೆ. ಜೊತೆಗೆ ನಿಯಮ ಉಲ್ಲಂಘಿಸಿ ವಿಲ್ಲಾ ನೀಡಿದ್ದ ಮನೆ ಮಾಲೀಕರ ವಿರುದ್ಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Wed, 29 July 26

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್