AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್​ಗಳಿಗೆ ಸಿಸಿಬಿ ಶಾಕ್

CCB Raids On Rowdy Sheeters: ವಾರೆಂಟ್ ಜಾರಿ ಮಾಡಿದ್ದರೂ ಸಹ ನ್ಯಾಯಾಲಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡು ಓಡಾಡಿಕೊಂಡಿದ್ದ ರೌಡಿ ಶೀಟರ್​ಗಳಿಗೆ ಸಿಸಿಬಿ ಶಾಕ್ ಕೊಟ್ಟಿದೆ.

ಕೋರ್ಟ್​ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್​ಗಳಿಗೆ ಸಿಸಿಬಿ ಶಾಕ್
ಸಿಸಿಬಿ ಕಚೇರಿ
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ|

Updated on:Nov 08, 2023 | 12:18 PM

Share

ಬೆಂಗಳೂರು, (ನವೆಂಬರ್ 06): ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ(Bengaluru)  ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್​ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ.  ವಾರೆಂಟ್ ಜಾರಿ ಮಾಡಿದ್ದರೂ ಸಹ ರೌಡಿ ಶೀಟರ್​ಗಳು ನ್ಯಾಯಾಲಯಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡು ಓಡಾಡಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಿಸಿಬಿ ರೌಡಿ ಶೀಟರ್​ಗಳ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿ ಲಾಂಗ್ ,ಮಚ್ಚು,ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ

ರೌಡಿಶೀಟರ್ ರಮೇಶ್ ಅಲಿಯಾಸ್ ,ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ ನಗರದಾದ್ಯಂತ ಇರುವ 20ಕ್ಕೂ ಹೆಚ್ಚು ನಟೋರಿಯಸ್ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರದ ಪೂರ್ವ ,ಪಶ್ಚಿಮ , ಉತ್ತರ ,ದಕ್ಷಿಣ ,ವೈಟ್ ಫೀಲ್ಡ್ ,ಆಗ್ನೇಯ ,ಈಶಾನ್ಯ ವಿಭಾಗದಲ್ಲಿ ಸಿಸಿಬಿ ದಾಳಿ ನಡೆಸಿದೆ.

ಕೆಲ ರೌಡಿ ಗಳ ನಿವಾಸದಲ್ಲಿ ಚೆಕ್, ಸಹಿ ಪಡೆದಿರುವ ಚಾಪಾ ಕಾಗದಗಳು ಪತ್ತೆಯಾಗಿವೆ. ಅಲ್ಲದೇ ರೌಡಿಗಳು ಬಡ್ಡಿ ವ್ಯವಹಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದು ಸಹ ತಿಳಿದುಬಂದಿದ್ದು, ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಚೆಕ್ ಹಾಗೈ ಸ್ಟ್ಯಾಂಪ್ ಪೇಪರ್ ಯಾರಿಗೆ ಸೇರಿದ್ದು? ರೌಡಿ ಬಳಿ ಹೇಗೆ ಬಂದವು? ಬಲವಂತವಾಗಿ ಯಾವುದಾದರೂ ಲ್ಯಾಂಡ್ ಮತ್ತು ಸೈಟ್ ಕಬ್ಜಾ ಮಾಡಿದ್ದಾರೆ? ಬೆದರಿಕೆ ಹಾಕಿ ಸೆಟಲ್ ಮೆಂಟ್ ಮಾಡುತ್ತಿದ್ದಾರಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

Published On - 10:39 am, Wed, 8 November 23

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​