AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್​ಗಳಿಗೆ ಸಿಸಿಬಿ ಶಾಕ್

CCB Raids On Rowdy Sheeters: ವಾರೆಂಟ್ ಜಾರಿ ಮಾಡಿದ್ದರೂ ಸಹ ನ್ಯಾಯಾಲಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡು ಓಡಾಡಿಕೊಂಡಿದ್ದ ರೌಡಿ ಶೀಟರ್​ಗಳಿಗೆ ಸಿಸಿಬಿ ಶಾಕ್ ಕೊಟ್ಟಿದೆ.

ಕೋರ್ಟ್​ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್​ಗಳಿಗೆ ಸಿಸಿಬಿ ಶಾಕ್
ಸಿಸಿಬಿ ಕಚೇರಿ
ರಾಚಪ್ಪಾಜಿ ನಾಯ್ಕ್
| Edited By: |

Updated on:Nov 08, 2023 | 12:18 PM

Share

ಬೆಂಗಳೂರು, (ನವೆಂಬರ್ 06): ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ(Bengaluru)  ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್​ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ.  ವಾರೆಂಟ್ ಜಾರಿ ಮಾಡಿದ್ದರೂ ಸಹ ರೌಡಿ ಶೀಟರ್​ಗಳು ನ್ಯಾಯಾಲಯಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡು ಓಡಾಡಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಿಸಿಬಿ ರೌಡಿ ಶೀಟರ್​ಗಳ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿ ಲಾಂಗ್ ,ಮಚ್ಚು,ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ

ರೌಡಿಶೀಟರ್ ರಮೇಶ್ ಅಲಿಯಾಸ್ ,ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ ನಗರದಾದ್ಯಂತ ಇರುವ 20ಕ್ಕೂ ಹೆಚ್ಚು ನಟೋರಿಯಸ್ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರದ ಪೂರ್ವ ,ಪಶ್ಚಿಮ , ಉತ್ತರ ,ದಕ್ಷಿಣ ,ವೈಟ್ ಫೀಲ್ಡ್ ,ಆಗ್ನೇಯ ,ಈಶಾನ್ಯ ವಿಭಾಗದಲ್ಲಿ ಸಿಸಿಬಿ ದಾಳಿ ನಡೆಸಿದೆ.

ಕೆಲ ರೌಡಿ ಗಳ ನಿವಾಸದಲ್ಲಿ ಚೆಕ್, ಸಹಿ ಪಡೆದಿರುವ ಚಾಪಾ ಕಾಗದಗಳು ಪತ್ತೆಯಾಗಿವೆ. ಅಲ್ಲದೇ ರೌಡಿಗಳು ಬಡ್ಡಿ ವ್ಯವಹಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದು ಸಹ ತಿಳಿದುಬಂದಿದ್ದು, ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಚೆಕ್ ಹಾಗೈ ಸ್ಟ್ಯಾಂಪ್ ಪೇಪರ್ ಯಾರಿಗೆ ಸೇರಿದ್ದು? ರೌಡಿ ಬಳಿ ಹೇಗೆ ಬಂದವು? ಬಲವಂತವಾಗಿ ಯಾವುದಾದರೂ ಲ್ಯಾಂಡ್ ಮತ್ತು ಸೈಟ್ ಕಬ್ಜಾ ಮಾಡಿದ್ದಾರೆ? ಬೆದರಿಕೆ ಹಾಕಿ ಸೆಟಲ್ ಮೆಂಟ್ ಮಾಡುತ್ತಿದ್ದಾರಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

Published On - 10:39 am, Wed, 8 November 23

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್