AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್​ಗಳಿಗೆ ಸಿಸಿಬಿ ಶಾಕ್

CCB Raids On Rowdy Sheeters: ವಾರೆಂಟ್ ಜಾರಿ ಮಾಡಿದ್ದರೂ ಸಹ ನ್ಯಾಯಾಲಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡು ಓಡಾಡಿಕೊಂಡಿದ್ದ ರೌಡಿ ಶೀಟರ್​ಗಳಿಗೆ ಸಿಸಿಬಿ ಶಾಕ್ ಕೊಟ್ಟಿದೆ.

ಕೋರ್ಟ್​ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್​ಗಳಿಗೆ ಸಿಸಿಬಿ ಶಾಕ್
ಸಿಸಿಬಿ ಕಚೇರಿ
ರಾಚಪ್ಪಾಜಿ ನಾಯ್ಕ್
| Edited By: |

Updated on:Nov 08, 2023 | 12:18 PM

Share

ಬೆಂಗಳೂರು, (ನವೆಂಬರ್ 06): ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ(Bengaluru)  ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್​ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ.  ವಾರೆಂಟ್ ಜಾರಿ ಮಾಡಿದ್ದರೂ ಸಹ ರೌಡಿ ಶೀಟರ್​ಗಳು ನ್ಯಾಯಾಲಯಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡು ಓಡಾಡಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಿಸಿಬಿ ರೌಡಿ ಶೀಟರ್​ಗಳ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿ ಲಾಂಗ್ ,ಮಚ್ಚು,ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ

ರೌಡಿಶೀಟರ್ ರಮೇಶ್ ಅಲಿಯಾಸ್ ,ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ ನಗರದಾದ್ಯಂತ ಇರುವ 20ಕ್ಕೂ ಹೆಚ್ಚು ನಟೋರಿಯಸ್ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರದ ಪೂರ್ವ ,ಪಶ್ಚಿಮ , ಉತ್ತರ ,ದಕ್ಷಿಣ ,ವೈಟ್ ಫೀಲ್ಡ್ ,ಆಗ್ನೇಯ ,ಈಶಾನ್ಯ ವಿಭಾಗದಲ್ಲಿ ಸಿಸಿಬಿ ದಾಳಿ ನಡೆಸಿದೆ.

ಕೆಲ ರೌಡಿ ಗಳ ನಿವಾಸದಲ್ಲಿ ಚೆಕ್, ಸಹಿ ಪಡೆದಿರುವ ಚಾಪಾ ಕಾಗದಗಳು ಪತ್ತೆಯಾಗಿವೆ. ಅಲ್ಲದೇ ರೌಡಿಗಳು ಬಡ್ಡಿ ವ್ಯವಹಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದು ಸಹ ತಿಳಿದುಬಂದಿದ್ದು, ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಚೆಕ್ ಹಾಗೈ ಸ್ಟ್ಯಾಂಪ್ ಪೇಪರ್ ಯಾರಿಗೆ ಸೇರಿದ್ದು? ರೌಡಿ ಬಳಿ ಹೇಗೆ ಬಂದವು? ಬಲವಂತವಾಗಿ ಯಾವುದಾದರೂ ಲ್ಯಾಂಡ್ ಮತ್ತು ಸೈಟ್ ಕಬ್ಜಾ ಮಾಡಿದ್ದಾರೆ? ಬೆದರಿಕೆ ಹಾಕಿ ಸೆಟಲ್ ಮೆಂಟ್ ಮಾಡುತ್ತಿದ್ದಾರಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

Published On - 10:39 am, Wed, 8 November 23

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ