AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Chennai Expressway: ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್​​ ವೇ ರಸ್ತೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್​​

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ​​ವೇ ಸುಮಾರು 262 ಕಿಮೀ ​ಉದ್ದದ ಬೆಂಗಳೂರು ಕೈಗಾರಿಕಾ ಕಾರಿಡಾರ್​ನ ಭಾಗವಾಗಿದೆ. ಎಕ್ಸ್​ಪ್ರೆಸ್​ ವೇಯಿಂದ ಪ್ರಯಾಣದ ಅವಧಿ ಎರಡು ಗಂಟೆ ಕಡಿಮೆಯಾಗಲಿದೆ. ಸದ್ಯ ಉಭಯ ನಗರಗಳ ನಡುವಣ ಸಂಚಾರಕ್ಕೆ ಸಾಮಾನ್ಯವಾಗಿ 5-6 ಗಂಟೆ ಬೇಕಾಗುತ್ತಿದೆ.

Bengaluru Chennai Expressway: ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್​​ ವೇ ರಸ್ತೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್​​
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Sep 08, 2023 | 10:53 AM

Share

ಬೆಂಗಳೂರು ಸೆ.08: ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್​​​ ವೇ (Bengaluru Chennai Expressway) ಡಿಸೆಂಬರ್ ಅಥವಾ ಜನವರಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ. ಸುಮಾರು 262 ಕಿಮೀ ​ಉದ್ದದ ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್​​ವೇ ಬೆಂಗಳೂರು ಕೈಗಾರಿಕಾ ಕಾರಿಡಾರ್​ನ ಭಾಗವಾಗಿದೆ. ಎಕ್ಸ್​ಪ್ರೆಸ್​ ವೇಯಿಂದ ಪ್ರಯಾಣದ ಅವಧಿ ಎರಡು ಗಂಟೆ ಕಡಿಮೆಯಾಗಲಿದೆ. ಸದ್ಯ ಉಭಯ ನಗರಗಳ ನಡುವಣ ಸಂಚಾರಕ್ಕೆ ಸಾಮಾನ್ಯವಾಗಿ 5-6 ಗಂಟೆ ಬೇಕಾಗುತ್ತಿದೆ ಎಂದು ತಿಳಿಸಿದರು.

ಅಶೋಕ್ ಲೇಲ್ಯಾಂಡ್‌ನ 75ನೇ ವಾರ್ಷಿಕೋತ್ಸವದ ಆಚರಣೆಯಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್​​ ವೇ ಈ ವರ್ಷಾಂತ್ಯ ಅಥವಾ ಜನವರಿ 2024 ರ ವೇಳೆಗೆ ಪ್ರಾರಂಭವಾಗಲಿದೆ. ಆದ್ದರಿಂದ, ನೀವು ರಸ್ತೆಯಲ್ಲಿ ನಿಮ್ಮ ಐಷಾರಾಮಿ ಬಸ್‌ಗಳು ಮತ್ತು ಸ್ಲೀಪರ್ ಕೋಚ್‌ಗಳನ್ನು ಪ್ರಾರಂಭಿಸಬಹುದು. ದೇಶಾದ್ಯಂತ ಮೂಲಸೌಕರ್ಯಗಳನ್ನು ನಿರ್ಮಿಸಲಾಗುತ್ತಿದ್ದು, ಭಾರತ ಮಾಲಾ ಯೋಜನೆ ಅಡಿ ಚೆನ್ನೈ ಶೀಘ್ರದಲ್ಲೇ ದೆಹಲಿಗೆ ರಸ್ತೆ ಸಂಪರ್ಕ ಸಾಧಿಸಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಶೀಘ್ರ ಸಿದ್ಧವಾಗಲಿದೆ ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್​​ವೇ; ದೂರ, ಸಮಯ, ಇತರ ಮಾಹಿತಿ ಇಲ್ಲಿದೆ

ದೆಹಲಿಯಿಂದ ಸೂರತ್, ನಾಸಿಕ್, ಅಹ್ಮದ್‌ನಗರ, ಕರ್ನೂಲ್, ಚೆನ್ನೈ, ಕನ್ಯಾಕುಮಾರಿ, ತಿರುವನಂತಪುರಂ, ಕೊಚ್ಚಿ, ಬೆಂಗಳೂರು ಮತ್ತು ಹೈದರಾಬಾದ್‌ಗೆ ರಸ್ತೆ ಸಂಪರ್ಕ ಕಲ್ಪಿಸುತ್ತಿದ್ದೇವೆ. ಮತ್ತು ದೆಹಲಿ ಮತ್ತು ಜೈಪುರ ನಡುವಿನ ಹೆದ್ದಾರಿಯಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿ ಪ್ರಕ್ರಿಯೆಯಲ್ಲಿದೆ ಎಂದು ಮಾಹಿತಿ ನೀಡಿದರು.

ಅಶೋಕ್ ಲೇಲ್ಯಾಂಡ್‌ ಮತ್ತು ಇತರ ವಾಹನ ತಯಾರಿಕಾ ಕಂಪನಿಗಳು ಮೆಥನಾಲ್​ ಆಧಾರಿತ ಅಥವಾ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚು ತಯಾರಿಸಬೇಕೆಂದು ಕರೆಕೊಟ್ಟರು. ಬೆಂಗಳೂರಿನಲ್ಲಿ ನಾನು ಅಶೋಕ್ ಲೇಲ್ಯಾಂಡ್‌ ಕಂಪನಿಯ ಮೆಥನಾಲ್ ಮಿಶ್ರಿತ ಇಂಧನದಿಂದ ಚಲಿಸಬಲ್ಲ ವಾಹನವನ್ನು ಅನಾವರಣಗೊಳಿಸಿದ್ದೆ. ಭಾರತದ ರಸ್ತೆಗಳಲ್ಲಿ ಮೆಥೆನಾಲ್ ಟ್ರಕ್‌ಗಳನ್ನು ಸಂಚರಿಸುವಂತೆ ಮಾಡುವುದು ನನ್ನ ಕನಸು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?