AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್ ವೇ ಕರ್ನಾಟಕ ಭಾಗದಲ್ಲಿ ಟೋಲ್ ಸಂಗ್ರಹ ಶುರು: ಎಷ್ಟಿದೆ ಟೋಲ್ ದರ?

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯ ಹೊಸಕೋಟೆ ಮತ್ತು ಕೋಲಾರ ನಡುವಿನ ಭಾಗದಲ್ಲಿ ಟೋಲ್ ಸಂಗ್ರಹ ಆರಂಭವಾಗಿದೆ. ಈ ಹೆದ್ದಾರಿಯ ಕಾಮಗಾರಿ ಕರ್ನಾಟಕ ಭಾಗದಲ್ಲಿ ಪೂರ್ಣಗೊಂಡು ಮಾರ್ಚ್​​ನಲ್ಲಿ ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಟೋಲ್ ಸಂಗ್ರಹ ಆರಂಭವಾಗಿದ್ದು, ಯಾವ ವಾಹನಕ್ಕೆ ಎಷ್ಟು ದರ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್ ವೇ ಕರ್ನಾಟಕ ಭಾಗದಲ್ಲಿ ಟೋಲ್ ಸಂಗ್ರಹ ಶುರು: ಎಷ್ಟಿದೆ ಟೋಲ್ ದರ?
ಸಾಂದರ್ಭಿಕ ಚಿತ್ರ
Ganapathi Sharma
|

Updated on: Sep 08, 2025 | 2:57 PM

Share

ಬೆಂಗಳೂರು, ಸೆಪ್ಟೆಂಬರ್ 8: ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ವೇಯ (Bengaluru–Chennai Expressway) ಹೊಸಕೋಟೆ ಮತ್ತು ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ನಡುವಿನ 71 ಕಿಮೀ ಮಾರ್ಗವನ್ನು ಬಳಸಲು ಈಗ ಟೋಲ್ (Toll Collection) ಪಾವತಿಸಬೇಕಿದೆ. ಈ ಹೆದ್ದಾರಿಯಲ್ಲಿ ಟೋಲ್ ಸಂಗ್ರಹವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆರಂಭಿಸಿದೆ. ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಕರ್ನಾಟಕ ಭಾಗದಲ್ಲಿ ಮಾರ್ಚ್‌ನಲ್ಲಿ ಲೋಕಾರ್ಪನೆಗೊಂಡಿದೆ. ಒಟ್ಟು 15,188 ಕೋಟಿ ರೂ. ವೆಚ್ಚದ 262 ಕಿ.ಮೀ ಉದ್ದದ ಈ ಈ ಎಕ್ಸ್​ಪ್ರೆಸ್​ ವೇಯ ಕರ್ನಾಟಕ ಭಾಗದಲ್ಲಿ ವಾಹನ ಸಂಚಾರ ಮಾರ್ಚ್​​ನಿಂದಲೇ ಆಎಂಭವಾಗಿದೆ.

ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ವೇ ಟೋಲ್ ದರ ಎಷ್ಟು?

ಹೆಡಿಗೆನಬೆಲೆ (ಹೊಸಕೋಟೆ ಬಳಿ), ಸುಂದರಪಾಳ್ಯ (ಕೆಜಿಎಫ್ ಬಳಿ) ಏಕಮುಖ ಪ್ರಯಾಣಕ್ಕೆ 185 ರೂ. ಮತ್ತು ರೌಂಡ್ ಟ್ರಿಪ್​ಗೆ 275 ರೂ. ನಿಗದಿಯಾಗಿದೆ. ಸುಂದರಪಾಳ್ಯದಿಂದ ಹೆಡಿಗೆನಬೆಲೆಗೆ ಏಕಮುಖ ಪ್ರಯಾಣಕ್ಕೆ 190 ರೂ. ಮತ್ತು ರೌಂಡ್ ಟ್ರಿಪ್​ಗೆ 280 ರೂ. ಇದೆ.

ಲಘು ಸರಕು ವಾಹನಗಳು, ಮಿನಿ ಬಸ್‌ಗಳು, ಬಸ್‌ಗಳು ಮತ್ತು ಟ್ರಕ್‌ಗಳಂತಹ ಇತರ ವಾಹನಗಳು ಮಾರ್ಗ ಮತ್ತು ಟ್ರಿಪ್ ಸಂಖ್ಯೆಯನ್ನು ಅವಲಂಬಿಸಿ 295 ರಿಂದ 955 ರವರೆಗೆ ಹೆಚ್ಚಿನ ದರಗಳನ್ನು ಪಾವತಿಸಬೇಕಾಗುತ್ತದೆ .

ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ವೇಯ ಕರ್ನಾಟಕ ವಿಭಾಗದಲ್ಲಿ ನಾಲ್ಕು ಟೋಲ್ ಪ್ಲಾಜಾಗಳಿವೆ. ಹೆಡಿಗೆನಬೆಲೆ, ಅಗ್ರಹಾರ, ಕೃಷ್ಣರಾಜಪುರ, ಸುಂದರಪಾಳ್ಯಗಳಲ್ಲಿ ಟೋಲ್ ಪ್ಲಾಜಾಗಳಿವೆ.

ವಾರ್ಷಿಕ ಫಾಸ್ಟ್‌ಟ್ಯಾಗ್ ಪಾಸ್ (3,000 ರೂ.) ಖರೀದಿಸಿದವರು ಪ್ರತಿ ಟ್ರಿಪ್‌ಗೆ ಪಾವತಿ ಮಾಡದೆ ಈ ಮಾರ್ಗವನ್ನು ಬಳಸಬಹುದು ಎಂದು ಹೆದ್ದಾರಿ ಪ್ರಾಧಿಕಾರ ದೃಢಪಡಿಸಿದೆ. ಆಗಾಗ್ಗೆ ಪ್ರಯಾಣಿಸುವವರಿಗೆ, ಕಾರುಗಳಿಗೆ ಮಾಸಿಕ ಪಾಸ್‌ಗಳ ಬೆಲೆ 6,105 ರೂ. (50 ಏಕಮುಖ ಪ್ರವಾಸಗಳು) ಅಥವಾ ರೌಂಡ್ ಟ್ರಿಪ್‌ಗಳಿಗೆ 6,260 ರೂ. ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್ ವೇ ಲೋಕಾರ್ಪಣೆ ಯಾವಾಗ? ಗಡ್ಕರಿ ಕೊಟ್ಟರು ಮಹತ್ವದ ಮಾಹಿತಿ

ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಎರಡು ನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಆರು ಗಂಟೆಗಳಿಂದ 3 ಗಂಟೆಗಳಿಗೆ ಇಳಿಕೆ ಮಾಡಲಿದೆ. ಇದರಿಂದಾಗಿ ಎನ್​ಎಚ್-44 ಮತ್ತು ಎನ್​ಎಚ್-48 ರ ದಟ್ಟಣೆ ಕಡಿಮೆಯಾಗಲಿದೆ. ಸರಕು ಸಾಗಣೆ ವೆಚ್ಚ ಕಡಿಮೆಯಾಗುವುದರಿಂದ ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಕಾಮಗಾರಿ ಮುಂದುವರೆದಿದ್ದು, ಪೂರ್ಣ ಕಾರಿಡಾರ್ 2026 ರ ಜುಲೈ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ