AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್ ವೇ ಕರ್ನಾಟಕ ಭಾಗದಲ್ಲಿ ಟೋಲ್ ಸಂಗ್ರಹ ಶುರು: ಎಷ್ಟಿದೆ ಟೋಲ್ ದರ?

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯ ಹೊಸಕೋಟೆ ಮತ್ತು ಕೋಲಾರ ನಡುವಿನ ಭಾಗದಲ್ಲಿ ಟೋಲ್ ಸಂಗ್ರಹ ಆರಂಭವಾಗಿದೆ. ಈ ಹೆದ್ದಾರಿಯ ಕಾಮಗಾರಿ ಕರ್ನಾಟಕ ಭಾಗದಲ್ಲಿ ಪೂರ್ಣಗೊಂಡು ಮಾರ್ಚ್​​ನಲ್ಲಿ ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಟೋಲ್ ಸಂಗ್ರಹ ಆರಂಭವಾಗಿದ್ದು, ಯಾವ ವಾಹನಕ್ಕೆ ಎಷ್ಟು ದರ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್ ವೇ ಕರ್ನಾಟಕ ಭಾಗದಲ್ಲಿ ಟೋಲ್ ಸಂಗ್ರಹ ಶುರು: ಎಷ್ಟಿದೆ ಟೋಲ್ ದರ?
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Sep 08, 2025 | 2:57 PM

Share

ಬೆಂಗಳೂರು, ಸೆಪ್ಟೆಂಬರ್ 8: ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ವೇಯ (Bengaluru–Chennai Expressway) ಹೊಸಕೋಟೆ ಮತ್ತು ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ನಡುವಿನ 71 ಕಿಮೀ ಮಾರ್ಗವನ್ನು ಬಳಸಲು ಈಗ ಟೋಲ್ (Toll Collection) ಪಾವತಿಸಬೇಕಿದೆ. ಈ ಹೆದ್ದಾರಿಯಲ್ಲಿ ಟೋಲ್ ಸಂಗ್ರಹವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆರಂಭಿಸಿದೆ. ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಕರ್ನಾಟಕ ಭಾಗದಲ್ಲಿ ಮಾರ್ಚ್‌ನಲ್ಲಿ ಲೋಕಾರ್ಪನೆಗೊಂಡಿದೆ. ಒಟ್ಟು 15,188 ಕೋಟಿ ರೂ. ವೆಚ್ಚದ 262 ಕಿ.ಮೀ ಉದ್ದದ ಈ ಈ ಎಕ್ಸ್​ಪ್ರೆಸ್​ ವೇಯ ಕರ್ನಾಟಕ ಭಾಗದಲ್ಲಿ ವಾಹನ ಸಂಚಾರ ಮಾರ್ಚ್​​ನಿಂದಲೇ ಆಎಂಭವಾಗಿದೆ.

ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ವೇ ಟೋಲ್ ದರ ಎಷ್ಟು?

ಹೆಡಿಗೆನಬೆಲೆ (ಹೊಸಕೋಟೆ ಬಳಿ), ಸುಂದರಪಾಳ್ಯ (ಕೆಜಿಎಫ್ ಬಳಿ) ಏಕಮುಖ ಪ್ರಯಾಣಕ್ಕೆ 185 ರೂ. ಮತ್ತು ರೌಂಡ್ ಟ್ರಿಪ್​ಗೆ 275 ರೂ. ನಿಗದಿಯಾಗಿದೆ. ಸುಂದರಪಾಳ್ಯದಿಂದ ಹೆಡಿಗೆನಬೆಲೆಗೆ ಏಕಮುಖ ಪ್ರಯಾಣಕ್ಕೆ 190 ರೂ. ಮತ್ತು ರೌಂಡ್ ಟ್ರಿಪ್​ಗೆ 280 ರೂ. ಇದೆ.

ಲಘು ಸರಕು ವಾಹನಗಳು, ಮಿನಿ ಬಸ್‌ಗಳು, ಬಸ್‌ಗಳು ಮತ್ತು ಟ್ರಕ್‌ಗಳಂತಹ ಇತರ ವಾಹನಗಳು ಮಾರ್ಗ ಮತ್ತು ಟ್ರಿಪ್ ಸಂಖ್ಯೆಯನ್ನು ಅವಲಂಬಿಸಿ 295 ರಿಂದ 955 ರವರೆಗೆ ಹೆಚ್ಚಿನ ದರಗಳನ್ನು ಪಾವತಿಸಬೇಕಾಗುತ್ತದೆ .

ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ವೇಯ ಕರ್ನಾಟಕ ವಿಭಾಗದಲ್ಲಿ ನಾಲ್ಕು ಟೋಲ್ ಪ್ಲಾಜಾಗಳಿವೆ. ಹೆಡಿಗೆನಬೆಲೆ, ಅಗ್ರಹಾರ, ಕೃಷ್ಣರಾಜಪುರ, ಸುಂದರಪಾಳ್ಯಗಳಲ್ಲಿ ಟೋಲ್ ಪ್ಲಾಜಾಗಳಿವೆ.

ವಾರ್ಷಿಕ ಫಾಸ್ಟ್‌ಟ್ಯಾಗ್ ಪಾಸ್ (3,000 ರೂ.) ಖರೀದಿಸಿದವರು ಪ್ರತಿ ಟ್ರಿಪ್‌ಗೆ ಪಾವತಿ ಮಾಡದೆ ಈ ಮಾರ್ಗವನ್ನು ಬಳಸಬಹುದು ಎಂದು ಹೆದ್ದಾರಿ ಪ್ರಾಧಿಕಾರ ದೃಢಪಡಿಸಿದೆ. ಆಗಾಗ್ಗೆ ಪ್ರಯಾಣಿಸುವವರಿಗೆ, ಕಾರುಗಳಿಗೆ ಮಾಸಿಕ ಪಾಸ್‌ಗಳ ಬೆಲೆ 6,105 ರೂ. (50 ಏಕಮುಖ ಪ್ರವಾಸಗಳು) ಅಥವಾ ರೌಂಡ್ ಟ್ರಿಪ್‌ಗಳಿಗೆ 6,260 ರೂ. ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್ ವೇ ಲೋಕಾರ್ಪಣೆ ಯಾವಾಗ? ಗಡ್ಕರಿ ಕೊಟ್ಟರು ಮಹತ್ವದ ಮಾಹಿತಿ

ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಎರಡು ನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಆರು ಗಂಟೆಗಳಿಂದ 3 ಗಂಟೆಗಳಿಗೆ ಇಳಿಕೆ ಮಾಡಲಿದೆ. ಇದರಿಂದಾಗಿ ಎನ್​ಎಚ್-44 ಮತ್ತು ಎನ್​ಎಚ್-48 ರ ದಟ್ಟಣೆ ಕಡಿಮೆಯಾಗಲಿದೆ. ಸರಕು ಸಾಗಣೆ ವೆಚ್ಚ ಕಡಿಮೆಯಾಗುವುದರಿಂದ ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಕಾಮಗಾರಿ ಮುಂದುವರೆದಿದ್ದು, ಪೂರ್ಣ ಕಾರಿಡಾರ್ 2026 ರ ಜುಲೈ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?