AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಚೆನ್ನೈ ರೈಲು ವೇಗ ಹೆಚ್ಚಳ: ಪ್ರಯಾಣದ ಸಮಯ ಕಡಿತ

ದಕ್ಷಿಣ ಪಶ್ಚಿಮ ರೈಲ್ವೇ ಬೆಂಗಳೂರು-ಚೆನ್ನೈ ನಡುವಿನ ರೈಲುಗಳ ವೇಗವನ್ನು ಗಂಟೆಗೆ 130 ಕಿಮೀಗೆ ಹೆಚ್ಚಿಸುವ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬೆಂಗಳೂರು-ಜೋಲಾರಪಟ್ಟಿ ಮಾರ್ಗದಲ್ಲಿ ಈ ಪರೀಕ್ಷೆ ನಡೆಸಲಾಗಿದ್ದು, ವಂದೇ ಭಾರತ್ ಮತ್ತು ಶತಾಬ್ದಿ ರೈಲುಗಳ ಪ್ರಯಾಣದ ಸಮಯವನ್ನು 20-25 ನಿಮಿಷಗಳಷ್ಟು ಕಡಿಮೆ ಮಾಡುವ ನಿರೀಕ್ಷೆಯಿದೆ. ಇದು ಬೆಂಗಳೂರು ಮತ್ತು ಚೆನ್ನೈ ನಗರಗಳ ನಡುವಿನ ಸಂಪರ್ಕವನ್ನು ಸುಧಾರಿಸಲಿದೆ.

ಬೆಂಗಳೂರು-ಚೆನ್ನೈ ರೈಲು ವೇಗ ಹೆಚ್ಚಳ: ಪ್ರಯಾಣದ ಸಮಯ ಕಡಿತ
ವಂದೇ ಭಾರತ ರೈಲು
ವಿವೇಕ ಬಿರಾದಾರ
|

Updated on:Dec 06, 2024 | 3:01 PM

Share

ಬೆಂಗಳೂರು, ಡಿಸೆಂಬರ್​ 06: ಬೆಂಗಳೂರು-ಚೆನ್ನೈ (Bengaluru-Chennai) ನಡುವಿನ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಗುರುವಾರ (South Westran Railway) ರೈಲುಗಳನ್ನು ಗಂಟೆಗೆ 110 ರಿಂದ 130 ಕಿಮೀ ವೇಗದಲ್ಲಿ ಓಡಿಸುವ ಪರೀಕ್ಷೆ ಕೈಗೊಂಡಿತು. ಬೆಂಗಳೂರು-ಜೋಲಾರಪಟ್ಟಿ ಮಾರ್ಗದಲ್ಲಿ ರೈಲು ಗಂಟೆಗೆ 130 ಕಿಮೀ ವೇಗದಲ್ಲಿ ಸಂಚರಿಸುವ ಮೂಲಕ ಪ್ರಾಯೋಗಿ ಸಂಚಾರ ಯಶಸ್ವಿಯಾಯಿತು.

ರೈಲು ಕೆಎಸ್​ಆರ್​ ಬೆಂಗಳೂರಿನಿಂದ ಬೆಳಗ್ಗೆ 8:05 ರಿಂದ ಹೊರಟು ಜೋಲಾರಪಟ್ಟಿಯನ್ನು ಅದೇ ದಿನ ಬೆಳಗ್ಗೆ 9:28ಕ್ಕೆ ತಲುಪಿತು. ನಂತರ ಜೋಲಾರಪಟ್ಟಿಯಿಂದ ರೈಲು ಮಧ್ಯಾಹ್ನ 2:30ಕ್ಕೆ ಹೊರಟು ಕೆಎಸ್​ಆರ್​ ಬೆಂಗಳೂರನ್ನು ಅದೇ ದಿನ ಸಂಜೆ 4:03 ನಿಮಿಷಕ್ಕೆ ತಲುಪಿತು ಎಂದು ಬೆಂಗಳೂರು ರೈಲ್ವೆ ವಿಭಾಗ ತಿಳಿಸಿದೆ.

ಕಳೆದ ವರ್ಷ ಜೋಲಾರ್​ಪಟ್ಟಿ-ಚೆನ್ನೈ ನಡುವಿನ ಮಾರ್ಗದಲ್ಲಿ ರೈಲನ್ನು ಗಂಟಗೆ 130 ಕಿಮೀ ವೇಗದಲ್ಲಿ ಓಡಿಸುವ ಕಾಮಗಾರಿ ಪೂರ್ಣಗೊಂಡಿತ್ತು. ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ಸಿಕ್ಕಿತ್ತು. ಈಗ ಬೆಂಗಳೂರು-ಜೋಲಾರ್​​ಪಟ್ಟಿ ರೈಲುಗಳ ವೇಗ ಹೆಚ್ಚಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಯೋಗಿಕ ಪರೀಕ್ಷೆ ನಡೆಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಬೆಳ್ಳಂದೂರು ರೈಲು ನಿಲ್ದಾಣಕ್ಕೆ ಪಣತ್ತೂರಿನ ಹೆಸರು ಇಡುವಂತೆ ಪತಿಭಟನೆ: ಮೋದಿಗೆ ಪತ್ರ

ಕೆಎಸ್​ಆರ್​ ಬೆಂಗಳೂರು-ಚೆನ್ನೈ ಸೆಂಟ್ರಲ್ 359 ಕಿಮೀ ಮಾರ್ಗದಲ್ಲಿ ಎರಡು ವಂದೇ ಭಾರತ್​ ಮತ್ತು ಎರಡು ಶತಾಬ್ದಿ ರೈಲುಗಳು ಸಂಚರಿಸುತ್ತವೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಡುವ ವಂದೇ ಭಾರತ್ (ರೈಲು ಸಂಖ್ಯೆ 20608) ಚೆನ್ನೈ ತಲುಪಲು 4 ಗಂಟೆ 25 ನಿಮಿಷ ಸಮಯ ತೆಗೆದುಕೊಳ್ಳುತ್ತದೆ. ಬೆಳಗ್ಗೆ ಬೆಂಗಳೂರಿನಿಂದ ಹೊರಡುವ ರೈಲು (20663) 4 ಗಂಟೆ 35 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಆದರೆ, ಈ ಪ್ರಾಯೋಗಿಕ ಸಂಚಾರ ಯಶಸ್ವಿಯಿಂದ ಬೆಂಗಳೂರು-ಚೆನ್ನೈ ನಡುವಿನ ವಂದೇ ಭಾರತ್​ ರೈಲುಗಳ ಸಂಚಾರ ಅವಧಿ 25 ನಿಮಿಷ ಕಡಿಮೆಯಾಗಿ, 4 ಗಂಟೆ ಆಗಲಿದೆ.

ಬೆಳಗ್ಗೆ ಬೆಂಗಳೂರಿನಿಂದ ಹೊರಡುವ ಶತಾಬ್ದಿ ರೈಲು (12028) ಚೆನ್ನೈ ತಲುಪಲು ಐದು ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಸಂಜೆ ವಾಪಸ್​​ ಬರುವಾಗ 5 ಗಂಟೆ 10 ನಿಮಿಷ ಸಮಯ ತೆಗೆದುಕೊಳ್ಳುತ್ತದೆ. ಈ ಪ್ರಾಯೋಗಿಕ ಸಂಚಾರ ಯಶಸ್ವಿಯಿಂದ ಈ ಮಾರ್ಗದ ಶತಾಬ್ದಿ ಸಂಚಾರದ ಅವಧಿ ಸುಮಾರು 20 ನಿಮಿಷ ಕಡಿಮೆಯಾಗಿ, 5 ಗಂಟೆಗಳಿಗೆ ಬರಲಿದೆ. ಪ್ರಯಾಣದ ಅವಧಿ ಕಡಿಮೆ ಮಾಡುವುದರಿಂದ ಎರಡೂ ನಗರಗಳಿಗೆ ಅನುಕೂಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:53 pm, Fri, 6 December 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ