AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಚೆನ್ನೈ ರೈಲು ವೇಗ ಹೆಚ್ಚಳ: ಪ್ರಯಾಣದ ಸಮಯ ಕಡಿತ

ದಕ್ಷಿಣ ಪಶ್ಚಿಮ ರೈಲ್ವೇ ಬೆಂಗಳೂರು-ಚೆನ್ನೈ ನಡುವಿನ ರೈಲುಗಳ ವೇಗವನ್ನು ಗಂಟೆಗೆ 130 ಕಿಮೀಗೆ ಹೆಚ್ಚಿಸುವ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬೆಂಗಳೂರು-ಜೋಲಾರಪಟ್ಟಿ ಮಾರ್ಗದಲ್ಲಿ ಈ ಪರೀಕ್ಷೆ ನಡೆಸಲಾಗಿದ್ದು, ವಂದೇ ಭಾರತ್ ಮತ್ತು ಶತಾಬ್ದಿ ರೈಲುಗಳ ಪ್ರಯಾಣದ ಸಮಯವನ್ನು 20-25 ನಿಮಿಷಗಳಷ್ಟು ಕಡಿಮೆ ಮಾಡುವ ನಿರೀಕ್ಷೆಯಿದೆ. ಇದು ಬೆಂಗಳೂರು ಮತ್ತು ಚೆನ್ನೈ ನಗರಗಳ ನಡುವಿನ ಸಂಪರ್ಕವನ್ನು ಸುಧಾರಿಸಲಿದೆ.

ಬೆಂಗಳೂರು-ಚೆನ್ನೈ ರೈಲು ವೇಗ ಹೆಚ್ಚಳ: ಪ್ರಯಾಣದ ಸಮಯ ಕಡಿತ
ವಂದೇ ಭಾರತ ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Dec 06, 2024 | 3:01 PM

Share

ಬೆಂಗಳೂರು, ಡಿಸೆಂಬರ್​ 06: ಬೆಂಗಳೂರು-ಚೆನ್ನೈ (Bengaluru-Chennai) ನಡುವಿನ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಗುರುವಾರ (South Westran Railway) ರೈಲುಗಳನ್ನು ಗಂಟೆಗೆ 110 ರಿಂದ 130 ಕಿಮೀ ವೇಗದಲ್ಲಿ ಓಡಿಸುವ ಪರೀಕ್ಷೆ ಕೈಗೊಂಡಿತು. ಬೆಂಗಳೂರು-ಜೋಲಾರಪಟ್ಟಿ ಮಾರ್ಗದಲ್ಲಿ ರೈಲು ಗಂಟೆಗೆ 130 ಕಿಮೀ ವೇಗದಲ್ಲಿ ಸಂಚರಿಸುವ ಮೂಲಕ ಪ್ರಾಯೋಗಿ ಸಂಚಾರ ಯಶಸ್ವಿಯಾಯಿತು.

ರೈಲು ಕೆಎಸ್​ಆರ್​ ಬೆಂಗಳೂರಿನಿಂದ ಬೆಳಗ್ಗೆ 8:05 ರಿಂದ ಹೊರಟು ಜೋಲಾರಪಟ್ಟಿಯನ್ನು ಅದೇ ದಿನ ಬೆಳಗ್ಗೆ 9:28ಕ್ಕೆ ತಲುಪಿತು. ನಂತರ ಜೋಲಾರಪಟ್ಟಿಯಿಂದ ರೈಲು ಮಧ್ಯಾಹ್ನ 2:30ಕ್ಕೆ ಹೊರಟು ಕೆಎಸ್​ಆರ್​ ಬೆಂಗಳೂರನ್ನು ಅದೇ ದಿನ ಸಂಜೆ 4:03 ನಿಮಿಷಕ್ಕೆ ತಲುಪಿತು ಎಂದು ಬೆಂಗಳೂರು ರೈಲ್ವೆ ವಿಭಾಗ ತಿಳಿಸಿದೆ.

ಕಳೆದ ವರ್ಷ ಜೋಲಾರ್​ಪಟ್ಟಿ-ಚೆನ್ನೈ ನಡುವಿನ ಮಾರ್ಗದಲ್ಲಿ ರೈಲನ್ನು ಗಂಟಗೆ 130 ಕಿಮೀ ವೇಗದಲ್ಲಿ ಓಡಿಸುವ ಕಾಮಗಾರಿ ಪೂರ್ಣಗೊಂಡಿತ್ತು. ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ಸಿಕ್ಕಿತ್ತು. ಈಗ ಬೆಂಗಳೂರು-ಜೋಲಾರ್​​ಪಟ್ಟಿ ರೈಲುಗಳ ವೇಗ ಹೆಚ್ಚಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಯೋಗಿಕ ಪರೀಕ್ಷೆ ನಡೆಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಬೆಳ್ಳಂದೂರು ರೈಲು ನಿಲ್ದಾಣಕ್ಕೆ ಪಣತ್ತೂರಿನ ಹೆಸರು ಇಡುವಂತೆ ಪತಿಭಟನೆ: ಮೋದಿಗೆ ಪತ್ರ

ಕೆಎಸ್​ಆರ್​ ಬೆಂಗಳೂರು-ಚೆನ್ನೈ ಸೆಂಟ್ರಲ್ 359 ಕಿಮೀ ಮಾರ್ಗದಲ್ಲಿ ಎರಡು ವಂದೇ ಭಾರತ್​ ಮತ್ತು ಎರಡು ಶತಾಬ್ದಿ ರೈಲುಗಳು ಸಂಚರಿಸುತ್ತವೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಡುವ ವಂದೇ ಭಾರತ್ (ರೈಲು ಸಂಖ್ಯೆ 20608) ಚೆನ್ನೈ ತಲುಪಲು 4 ಗಂಟೆ 25 ನಿಮಿಷ ಸಮಯ ತೆಗೆದುಕೊಳ್ಳುತ್ತದೆ. ಬೆಳಗ್ಗೆ ಬೆಂಗಳೂರಿನಿಂದ ಹೊರಡುವ ರೈಲು (20663) 4 ಗಂಟೆ 35 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಆದರೆ, ಈ ಪ್ರಾಯೋಗಿಕ ಸಂಚಾರ ಯಶಸ್ವಿಯಿಂದ ಬೆಂಗಳೂರು-ಚೆನ್ನೈ ನಡುವಿನ ವಂದೇ ಭಾರತ್​ ರೈಲುಗಳ ಸಂಚಾರ ಅವಧಿ 25 ನಿಮಿಷ ಕಡಿಮೆಯಾಗಿ, 4 ಗಂಟೆ ಆಗಲಿದೆ.

ಬೆಳಗ್ಗೆ ಬೆಂಗಳೂರಿನಿಂದ ಹೊರಡುವ ಶತಾಬ್ದಿ ರೈಲು (12028) ಚೆನ್ನೈ ತಲುಪಲು ಐದು ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಸಂಜೆ ವಾಪಸ್​​ ಬರುವಾಗ 5 ಗಂಟೆ 10 ನಿಮಿಷ ಸಮಯ ತೆಗೆದುಕೊಳ್ಳುತ್ತದೆ. ಈ ಪ್ರಾಯೋಗಿಕ ಸಂಚಾರ ಯಶಸ್ವಿಯಿಂದ ಈ ಮಾರ್ಗದ ಶತಾಬ್ದಿ ಸಂಚಾರದ ಅವಧಿ ಸುಮಾರು 20 ನಿಮಿಷ ಕಡಿಮೆಯಾಗಿ, 5 ಗಂಟೆಗಳಿಗೆ ಬರಲಿದೆ. ಪ್ರಯಾಣದ ಅವಧಿ ಕಡಿಮೆ ಮಾಡುವುದರಿಂದ ಎರಡೂ ನಗರಗಳಿಗೆ ಅನುಕೂಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:53 pm, Fri, 6 December 24

Follow Us
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?