AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಂತೆಗೆ ಬೆಂಗಳೂರು ಸಜ್ಜು: ವಿಶೇಷ ಮೆಟ್ರೋ ಫೀಡರ್​​ ಸೇವೆ, ಮಾರ್ಗ ಬದಲಾವಣೆ ಕುರಿತಾದ ಮಾಹಿತಿ ಇಲ್ಲಿದೆ

ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ ನಡೆಯಲಿದೆ. ಈ ಚಿತ್ರಸಂತೆಯನ್ನು ಚಿತ್ರಕಲಾ ಪರಿಷತ್ ಆಯೋಜಿಸಿದೆ. ಚಿತ್ರಸಂತೆಯನ್ನು ವೀಕ್ಷಿಸಲು ಸಾವಿರಾರು ಜನರು ಆಗಮಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಎಂಟಿಸಿಯು ಮೆಟ್ರೋ ಫೀಡರ್‌ ಬಸ್​ ವ್ಯವಸ್ಥೆ ಮಾಡಿದೆ.

ಚಿತ್ರಸಂತೆಗೆ ಬೆಂಗಳೂರು ಸಜ್ಜು: ವಿಶೇಷ ಮೆಟ್ರೋ ಫೀಡರ್​​ ಸೇವೆ, ಮಾರ್ಗ ಬದಲಾವಣೆ ಕುರಿತಾದ ಮಾಹಿತಿ ಇಲ್ಲಿದೆ
ಚಿತ್ರಸಂತೆ
Follow us
Kiran Surya
| Updated By: ವಿವೇಕ ಬಿರಾದಾರ

Updated on:Jan 07, 2024 | 10:47 AM

ಬೆಂಗಳೂರು, ಜನವರಿ 07: ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ (Chitra Santhe 2024) ನಡೆಯಲಿದೆ. ಈ ಚಿತ್ರಸಂತೆಯನ್ನು ಚಿತ್ರಕಲಾ ಪರಿಷತ್ (Chitrakala Parishatha) ಆಯೋಜಿಸಿದೆ. ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಇನ್ನು  ಕಲಾಪ್ರದರ್ಶನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ವೀಕ್ಷಿಸಲು ಸಾವಿರಾರು ಜನರು ಆಗಮಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಎಂಟಿಸಿಯು (BMTC) ಮೆಟ್ರೋ ಫೀಡರ್‌ ಬಸ್​ ವ್ಯವಸ್ಥೆ ಮಾಡಿದೆ. ಈ ಬಸ್​ಗಳು ಬೆಳಗ್ಗೆ 8 ರಿಂದ ರಾತ್ರಿ 8ರ ವರೆಗೆ ಸಂಚರಿಸಲಿವೆ. ಈ ಮೆಟ್ರೋ ಫೀಡರ್ ಬಸ್​ನಲ್ಲಿ ಪ್ರಯಾಣಕ್ಕೆ 15 ರೂ. ನಿಗದಿ ಮಾಡಲಾಗಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಆನಂದರಾವ್‌ ಸರ್ಕಲ್‌, ಶಿವಾನಂದ ಸ್ಟೋರ್ಸ್‌ ಮಾರ್ಗವಾಗಿ ವಿಧಾನಸೌಧ ಮೆಟ್ರೊ ನಿಲ್ದಾಣಕ್ಕೆ ಪ್ರತಿ 10 ನಿಮಿಷಕ್ಕೊಂದರಂತೆ 4 ಬಸ್‌ ಹಾಗೂ ಮಂತ್ರಿ ಮಾಲ್‌ ಮೆಟ್ರೊ ನಿಲ್ದಾಣದಿಂದ ಸೆಂಟ್ರಲ್‌ ಟಾಕೀಸ್‌, ಲಿಂಕ್‌ ರಸ್ತೆ, ಶಿವಾನಂದ ಸ್ಟೋರ್ಸ್‌ ಮುಖೇನ ವಿಧಾನಸೌಧಕ್ಕೆ 4 ಬಸ್‌ಗಳು ಸಂಚರಿಸಲಿವೆ.

ಮಾರ್ಗ ಬದಲಾವಣೆ

ಬೆಳಗ್ಗೆ 6ರಿಂದ ರಾತ್ರಿ 9 ಗಂಟೆವರೆಗೆ ಕುಮಾರಕೃಪಾ ರಸ್ತೆ ಹಾಗೂ ಹರೇ ಕೃಷ್ಣ ರಸ್ತೆಯ ಉಕ್ಕಿನ ಕೆಳ ಸೇತುವೆ ಭಾಗದ ಶಿವಾನಂದ ವೃತ್ತದಿಂದ ಗುರುರಾಜ ಜಂಕ್ಷನ್‌ ಬಳಿಯ ನವ ಕರ್ನಾಟಕ ಪಬ್ಲಿಕೇಷನ್‌ ಕಟ್ಟಡದವರೆಗಿನ ಉತ್ತರ ಭಾಗದ ರಸ್ತೆಯಲ್ಲಿಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸವಾರರು ಈ ರಸ್ತೆ ಬಳಸದೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕು.

ಇದನ್ನೂ ಓದಿ: Basavaraj Bommai: ಪ್ರದರ್ಶನಕ್ಕೆ ಇಡಲಾಗಿದ್ದ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟ ಸಿಎಂ ಬೊಮ್ಮಾಯಿ‌

ಈ ಬಾರಿಯ ಚಿತ್ರಸಂತೆ ‘ಬಾಹ್ಯಕಾಶ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಭಾರತೀಯ ವಿಜ್ಞಾನಿಗಳಿಗೆ ಸಮರ್ಪಿಸಲಾಗಿದೆ. ಚಿತ್ರಸಂತೆಯಲ್ಲಿ ಎಲ್ಲಾ ವಿಜ್ಞಾನಿಗಳ ಮಾಹಿತಿ ಇರಲಿದೆ.  ಚಿತ್ರಸಂತೆಗೆ ಈ ಬಾರಿ 22 ರಾಜ್ಯಗಳಿಂದ ಕಲಾವಿದರು ಬಂದಿದ್ದಾರೆ. ದೇಶದ 1500 ಕಲಾವಿದರ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಈ ಬಾರಿ ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಲಕ್ಷಂತರ‌ ಜನರು ಚಿತ್ರಸಂತೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಕಲಾವಿದರಿಂದ ನೇರವಾಗಿ ಮಾರಾಟ

ಚಿತ್ರಸಂತೆಯಲ್ಲಿ 100 ರೂ.ದಿಂದ  ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ. ಮೈಸೂರು ಶೈಲಿಯ ಕಲೆ, ತಂಜಾವೂರಿನ ಶೈಲಿ, ರಾಜಾಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ‌ ಮತ್ತು ಜಲವರ್ಣಗಳಲ್ಲಿ ಚಿತ್ರಗಳನ್ನು ಬಿಡಸಲಾಗುತ್ತದೆ. ಅಲ್ಲದೇ ಆಕ್ರಿಕಲ್ , ಕೊಲಾಜ್, ಲಿಯೋಗ್ರಾಫ್, ಡೂಡಲ್ ಎಂಬೋಸಿಂಗ್ , ವಿಡಿಯೋ ಕಲೆ, ಗ್ರಾಫಿಕ್ ಕಲೆ , ಶಿಲ್ಪ ಕಲೆ, ಇನ್ ಸ್ಟಲೇಶನ್, ಫಾರ್ಮಾಮೆನ್ಸ್ ಸೇರಿದಂತೆ ಹಲವು ಪ್ರತಿಷ್ಠಾಪನ ಕಲೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.

 ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Sun, 7 January 24

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ