AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ದಿನ ಬೆಂಗಳೂರಿಗೆ ಬರುವಾಗ ಖಾಲಿ ಖಾಲಿ, ಆದರೆ ಹೊರಗೆ ಹೋಗುವಾಗ ಹೇಗಿರುತ್ತದೆ ನೋಡಿ?

ಕ್ರಿಸ್‌ಮಸ್ ಹಬ್ಬದಂದು ಬೆಂಗಳೂರಿನಲ್ಲಿ ಸಂಚಾರ ವಿಭಿನ್ನವಾಗಿತ್ತು. ವೈರಲ್ ವಿಡಿಯೋವೊಂದು ನಗರಕ್ಕೆ ಪ್ರವೇಶಿಸುವ ರಸ್ತೆಗಳು ಖಾಲಿಯಾಗಿದ್ದರೆ, ನಗರದಿಂದ ಹೊರ ಹೋಗುವ ಮಾರ್ಗಗಳಲ್ಲಿ ಭಾರಿ ವಾಹನ ದಟ್ಟಣೆ ಇರುವುದನ್ನು ತೋರಿಸಿದೆ. ಹಬ್ಬದ ದಿನಗಳಲ್ಲಿ ಬೆಂಗಳೂರಿನ ರಸ್ತೆಗಳು ಹೇಗೆ ಬದಲಾಗುತ್ತವೆ ಎಂಬುದನ್ನು ಈ ಹಾಸ್ಯಮಯ ವಿಡಿಯೋ ವಿವರಿಸುತ್ತದೆ. ನೆಟ್ಟಿಗರು ಈ ವಿಶಿಷ್ಟ ಸಂಚಾರ ಪರಿಸ್ಥಿತಿಗೆ ಪ್ರತಿಕ್ರಿಯಿಸಿದ್ದಾರೆ.

ಹಬ್ಬದ ದಿನ ಬೆಂಗಳೂರಿಗೆ ಬರುವಾಗ ಖಾಲಿ ಖಾಲಿ, ಆದರೆ ಹೊರಗೆ ಹೋಗುವಾಗ ಹೇಗಿರುತ್ತದೆ ನೋಡಿ?
ವೈರಲ್​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Dec 26, 2025 | 1:17 PM

Share

ಬೆಂಗಳೂರಿನಲ್ಲಿ ಹಬ್ಬ ದಿನಗಳು ಬಂದರೆ ಸಾಕು, ರಸ್ತೆಗಳೆಲ್ಲ ಖಾಲಿ ಖಾಲಿ, ಇದೀಗ ನೆನ್ನೆ (ಡಿ.25) ಕ್ರಿಸ್​​​ಮಸ್ (Bengaluru traffic)​​​ ಇದ್ದ ಕಾರಣ ಬೆಂಗಳೂರಿನ ಹೊರವಲಯದಲ್ಲಿರುವ ಹೆದ್ದಾರಿಯಲ್ಲಿ ವಾಹನ ಸಂಚಾರ ಹೇಗಿತ್ತು ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತೋರಿಸಿದ್ದಾರೆ. ಕಿಸ್​​ಮಸ್​​ ದಿನ ಬೆಂಗಳೂರಿನಿಂದ ಊರಿಗೆ ಹೋಗುತ್ತಿರುವ ಒಂದು ಕಡೆಯಾದರೆ, ಇನ್ನೊಂದು ಕಡೆ ಬೆಂಗಳೂರಿಗೆ ಬರುವವರು. ಹಬ್ಬದ ದಿನ ಹೋಗುವಾಗ ಹಾಗೂ ಬರುವಾಗ ರಸ್ತೆಗಳು ಹೇಗಿರುತ್ತದೆ ಎಂಬುದನ್ನು ಈ ವಿಡಿಯೋದಲ್ಲಿ ತೋರಿಸಿದ್ದಾರೆ. ಈ ವಿಡಿಯೋವನ್ನು ತುಂಬಾ ತಮಾಷೆಯಾಗಿ ಹಂಚಿಕೊಂಡಿದ್ದಾರೆ. ವಿಡಿಯೋವನ್ನು ನೋಡಿ ಹಲವು ನೆಟ್ಟಗರು ತಮ್ಮ ಅಭಿಪ್ರಾಯವನ್ನು ಕಮೆಂಟ್​ ಮಾಡಿದ್ದಾರೆ.

@wanderjoy ಎಂಬ ಇನ್ಸ್ಟಾಗ್ರಾಮ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಬೆಂಗಳೂರಿಗೆ ಬರುವಾಗ ರಸ್ತೆಗಳು ಫುಲ್​​​ ಖಾಲಿ ಖಾಲಿ ಇದೆ. ಆದರೆ ಅದೇ ಹೈವೇ ಮತ್ತೊಂದು ಕಡೆ ಅಂದರೆ ಬೆಂಗಳೂರಿನಿಂದ ಹೊರಗೆ ಹೋಗುವಾಗ ತುಂಬಾ ಟ್ರಾಫಿಕ್​​ ಇರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಬೆಂಗಳೂರಿಗೆ ಪ್ರವೇಶಿಸುವಾಗ ಹಾಗೂ ನಿರ್ಗಮಿಸುವಾಗ ರಸ್ತೆಗಳು ಹೇಗಿರುತ್ತದೆ ನೋಡಿ. ಇದು ಬೆಂಗಳೂರಿನಲ್ಲಿ ಕಂಡು ಬಂದ ವಿಭಿನ್ನ ಸಂಚಾರ ಸ್ಥಿತಿ ಎಂದು ಈ ವಿಡಿಯೋದಲ್ಲಿ ಬರೆದುಕೊಳ್ಳಲಾಗಿದೆ. ಡಿಸೆಂಬರ್ 25 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರನ್ನು ಪ್ರವೇಶ ಮಾಡುವಾಗ ಖಾಲಿ ರಸ್ತೆಗಳು. ಆದರೆ ಮತ್ತೊಂದು ಕಡೆ ಸಿಕ್ಕಪಟ್ಟೆ ವಾಹನ ದಟ್ಟಣೆ ಇದೆ ಎಂದು ಹೇಳಲಾಗಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by WanderJoy (@_wanderjoy_)

ಈ ವಿಡಿಯೋದ ಬಗ್ಗೆ ನೆಟ್ಟಿಗರು ಹೇಳಿದ್ದೇನು?

ರಜಾ ದಿನ ಎಂದರೆ ಬೆಂಗಳೂರಿನ ಅರ್ಧದಷ್ಟು ಜನರು ನಗರದಿಂದ ಹೊರಗೆ ಓಡುತ್ತಾರೆ ಎಂದು ಒಬ್ಬರು ಹೇಳಿದ್ದಾರೆ. ಬೆಂಗಳೂರಿನೊಳಗೆ ಪ್ರಯಾಣ ಮಾಡುವ ಅವಧಿ 90ರ ದಶಕದಂತೆ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ಇನ್ನು ಹೊಸ ವರ್ಷಕ್ಕೆ ಇದಕ್ಕಿಂತ ಡಬಲ್​​ ಇರುತ್ತದೆ ನೋಡಿ ಎಂದು ಇನ್ನೊಬ್ಬರು ಕಮೆಂಟ್​ ಮಾಡಿದ್ದಾರೆ. ಕ್ರಿಸ್​​ಮಸ್​​ ಮತ್ತು ಹೊಸ ವರ್ಷದ ಪ್ರಯುಕ್ತ ರಜೆ ಇರುವ ಕಾರಣ ಎಲ್ಲರೂ ಹೊರೆಗೆ ಹೋಗುತ್ತಾರೆ ಎಂದು ಮತ್ತೊಬ್ಬರು ಕಮೆಂಟ್​​​ ಮಾಡಿದ್ದಾರೆ.

ಇದನ್ನೂ ಓದಿ: ಸತತ 10 ವರ್ಷಗಳಿಂದ ಬಿರಿಯಾನಿಗೆ ಅಗ್ರಸ್ಥಾನ: ಸ್ವಿಗ್ಗಿಯಲ್ಲಿ 93 ಮಿಲಿಯನ್ ಬಿರಿಯಾನಿ ಆರ್ಡರ್

ಬೆಂಗಳೂರು ಸಂಚಾರ:

ಈಗಾಗಲೇ ಬೆಂಗಳೂರು ಟ್ರಾಫಿಕ್​​​​​ಗೆ ಹೆಸರುವಾಸಿ, ಇದು ದೇಶದ ಅತ್ಯಂತ ಜನದಟ್ಟಣೆಯ ನಗರಗಳಲ್ಲಿ ಒಂದಾಗಿದೆ. ಹಬ್ಬ ದಿನ ಈ ನಗರದ ಚಿತ್ರಣವೇ ಬದಲಾಗುತ್ತದೆ. ನಗರದೊಳಗಿನ ರಸ್ತೆಗಳು ಸುಗಮವಾಗಿದ್ದರೆ, ಹೊರ ಹೋಗುವ ಮಾರ್ಗಗಳು ಭಾರೀ ದಟ್ಟಣೆಯಿಂದ ಕೂಡಿರುತ್ತದೆ. ಈ ವರ್ಷದ ಆರಂಭದಲ್ಲಿ, ದೀಪಾವಳಿಯ ಸಮಯದಲ್ಲಿ ಬೆಂಗಳೂರು ರಸ್ತೆಗಳು ತುಂಬಾ ಶಾಂತವಾಗಿರುತ್ತದೆ. ಈ ಮೌನವನ್ನು ನೋಡಿ ಒಬ್ಬರು ಬೆಂಗಳೂರು “ಭೂತ ಪಟ್ಟಣ” ದಂತೆ ಕಾಣುತ್ತಿದೆ ಎಂದು ಟೀಕಿಸಿದ್ದರು.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು