AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡೆದ ಹಾಲಿನ ಬಗ್ಗೆ ಬೆಂಗಳೂರಿಗರಿಂದ ದೂರಿನ ಸುರಿಮಳೆ; ಬೇಸಿಗೆ ನೆಪ ಹೇಳಿದ ಕೆಎಂಎಪ್

ಬುಧವಾರ ಮತ್ತು ಗುರುವಾರ ಬೆಂಗಳೂರಿನಲ್ಲಿ ಸಪ್ಲೈ ಆದ ನಂದಿನಿ ಹಾಲಿನ ಬ್ಲೂ ಪ್ಯಾಕೆಟ್​ನ ಹಾಲು ಬಹುತೇಕ ಕೆಟ್ಟಿದ್ದು ಹಾಲು ಒಡೆದಿದೆ ಎಂದು ಅನೇಕ ಮಂದಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ.

ಒಡೆದ ಹಾಲಿನ ಬಗ್ಗೆ ಬೆಂಗಳೂರಿಗರಿಂದ ದೂರಿನ ಸುರಿಮಳೆ; ಬೇಸಿಗೆ ನೆಪ ಹೇಳಿದ ಕೆಎಂಎಪ್
kmf
ಆಯೇಷಾ ಬಾನು
|

Updated on:Mar 07, 2023 | 7:14 AM

Share

ಬೆಂಗಳೂರು: ಮುಂಜಾನೆ ಎದ್ದ ತಕ್ಷಣ ಕಾಫಿ, ಟೀ ಕುಡಿಯಲು ಇಷ್ಟಪಡುವ ಅನೇಕ ಮಂದಿ ಬೆಳ್ಳಂ ಬೆಳಗ್ಗೆ ಕೆಎಂಎಫ್( Karnataka Milk Federation)​ ವಿರುದ್ಧ ಗರಂ ಆಗಿದ್ದಾರೆ. ಏಕೆಂದರೆ ಬುಧವಾರ ಮತ್ತು ಗುರುವಾರ ಬೆಂಗಳೂರಿನಲ್ಲಿ ಸಪ್ಲೈ ಆದ ನಂದಿನಿ ಹಾಲಿನ(Nandini Milk) ಬ್ಲೂ ಪ್ಯಾಕೆಟ್​ನ ಹಾಲು ಬಹುತೇಕ ಕೆಟ್ಟಿದ್ದು ಈಗ ತಂದ ಹಾಲು ಒಡೆದಿದೆ ಎಂದು ಅನೇಕ ಮಂದಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ. ಇದಕ್ಕೆ ಉತ್ತರಿಸಿರುವ ಕೆಎಂಎಫ್​ ಬೇಸಿಗೆಯ ಕಾರಣ ಹೇಳಿ ಜಾರಿಕೊಂಡಿದೆ.

ಬೆಂಗಳೂರು ಸೇರಿದಂತೆ ಅನೇಕ ಕಡೆ ನಂದಿನಿ ಹಾಲು ಬಳಕೆದಾರರು ಇದೇ ರೀತಿಯ ಅನುಭವಗಳನ್ನು ಪಡೆದಿದ್ದಾರೆ. ಆದ್ರೆ ಇದರಲ್ಲಿ ಅಚ್ಚರಿಯ ವಿಷಯವೆಂದರೆ ಒಡೆದ ಹಾಲಿನ ಅನುಭವ ಪಡೆದ ಬಹುತೇಕ ನಂದಿನಿ ಹಾಲು ಬಳಕೆದಾರರು ಯಲಹಂಕದ ಕೆಎಂಎಫ್‌ನ ಮದರ್ ಡೈರಿಯ ಡೀಲರ್‌ಗಳಿಂದ ಹಾಲನ್ನು ಖರೀದಿಸಿದವರೇ ಆಗಿದ್ದಾರೆ. ಗ್ರಾಹಕರು ಬೆಳಗ್ಗೆ 6 ಗಂಟೆಗೆಯೇ ಹಾಲಿನ ಡೀಲರ್‌ಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮುಲ್​ನೊಂದಿಗೆ, KMF ನಂದಿನಿಯನ್ನು ವಿಲೀನಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಮಾಧುಸ್ವಾಮಿ

ಹೆಸರು ಹೇಳಲು ಇಚ್ಛಿಸದ ಹಾಲಿನ ವ್ಯಾಪಾರಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ಅಂಗಡಿ ತೆರೆದು ಒಂದು ಗಂಟೆಯೊಳಗೆ ಒಡೆದ ಹಾಲಿನ ಬಗ್ಗೆ 10ಕ್ಕೂ ಹೆಚ್ಚು ಗ್ರಾಹಕರು ನನಗೆ ದೂರು ನೀಡಿದ್ದಾರೆ. ಹಾಗೂ ಗ್ರಾಹಕರು ಹಾಲಿನ ಮೊತ್ತ ಹಿಂತಿರುಗಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದ್ರೆ ಈ ವರೆಗೂ ಕೆಎಂಎಫ್ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಗ್ರಾಹಕರಿಗೆ ಹಾಲನ್ನು ತಂಪಾಗಿಡಲು ಬರಲ್ಲ, ಅದುಕ್ಕೆ ಒಡೆದಿದೆ -ಕೆಎಂಎಫ್

ಬೇಸಿಗೆ ಶುರುವಾದ್ದರಿಂದ, ಹಾಲನ್ನು ಸಂಸ್ಕರಿಸುವಲ್ಲಿ ಗ್ರಾಹಕರಿಗೆ ಸಮಸ್ಯೆಗಳು ಎದುರಾಗಿರಬಹುದು. ನಾವು ಗ್ರಾಹಕರಲ್ಲಿ ಜಾಗೃತಿ ಮೂಡಿಸುತ್ತೇವೆ. 20 ಲಕ್ಷ ಲೀಟರ್ ಹಾಲನ್ನು ಬೆಂಗಳೂರಿಗೆ ಸರಬರಾಜು ಮಾಡಲಾಗಿದೆ. ಈ ಪೈಕಿ 10-5 ಲೀಟರ್ ಮಾತ್ರ ಹಾಳಾಗಿರಬಹುದು. ಆದರೆ ಹಾಳಾದ ಹಾಲಿನ ಬಗ್ಗೆ ಯಾವುದೇ ದೂರುಗಳು ಬಂದಿರುವ ಬಗ್ಗೆ ನಮಗೆ ತಿಳಿದಿಲ್ಲ ಎಂದು ಕೆಎಂಎಫ್​ ಅಧಿಕಾರಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:10 am, Tue, 7 March 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?