AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್​ಇನ್ಸ್‌ಪೆಕ್ಟರ್ ನಿಯೋಜನೆ; ಆದ್ರೆ ಆಸಾಮಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದ ಕುಟುಂಬಸ್ಥರು!

Hacker Sri Krishna: ವಿರೋಧ ಪಕ್ಷದ ಆರೋಪದ ಬೆನ್ನಲ್ಲೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸರು ಶ್ರೀಕಿಗೆ ಗನ್ ಮ್ಯಾನ್ ನೀಡಲು ಮುಂದಾಗಿದ್ದಾರೆ. ಮನೆಯವರನ್ನ ಹೆಚ್ಚು ವಿಚಾರಿಸಿದಾಗ ಶ್ರೀಕಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದು ಉತ್ತರಿಸುತ್ತಿದ್ದಾರಷ್ಟೆ.

ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್​ಇನ್ಸ್‌ಪೆಕ್ಟರ್ ನಿಯೋಜನೆ; ಆದ್ರೆ ಆಸಾಮಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದ ಕುಟುಂಬಸ್ಥರು!
ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್​ಇನ್ಸ್‌ಪೆಕ್ಟರ್ ನಿಯೋಜನೆ; ಆದ್ರೆ ಆಸಾಮಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದ ಕುಟುಂಬಸ್ಥರು!
TV9 Web
| Edited By: ಸಾಧು ಶ್ರೀನಾಥ್​|

Updated on:Nov 17, 2021 | 2:57 PM

Share

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಜಾಗತಿಕ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ಭದ್ರತೆ ಒದಗಿಸಿದ್ದಾರೆ. ಶ್ರೀಕೃಷ್ಣ ಭದ್ರತೆಗೆ ಒಬ್ಬ ಸಬ್ ಇನ್ಸ್‌ಪೆಕ್ಟರ್ ಅನ್ನು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ನಿಯೋಜನೆ ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಡೆಯಿಂದ ಶ್ರೀಕಿ ಜೀವಕ್ಕೆ ಅಪಾಯವಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಆದರೆ ಶ್ರೀಕಿಗೆ ಭದ್ರತೆ ನೀಡಲು ಖುದ್ದು ಕಮೀಷನರ್ ಕಮಲ್ ಪಂತ್ ಸೂಚನೆ ಅವರೇ ಸೂಚನೆ ನೀಡಿರುವುದರಿಂದ ಶ್ರೀಕಿ ಮನೆಯವರನ್ನ ಭದ್ರತೆಗೆ ನಿಯೋಜನೆಗೊಂಡ ಸಬ್ ಇನ್ಸ್‌ಪೆಕ್ಟರ್ ಸಂಪರ್ಕಿಸಿದ್ದಾರೆ. ಈ ವೇಳೆ ಶ್ರೀಕಿ ಎಲ್ಲಿದ್ದಾನೋ ಗೊತ್ತಿಲ್ಲ, ಮನೆಗೆ ಬರ್ತಿಲ್ಲ ಎಂದು ಅವರ ಸಹೋದರ ತಿಳಿಸಿದ್ದಾರೆ!

ಗಮನಾರ್ಹ ಸಂಗತಿಯೆಂದರೆ ಶ್ರೀಕಿ ಭದ್ರತೆಗೆ ನಿಯೋಜನೆಗೊಂಡ ಸಬ್ ಇನ್ಸ್‌ಪೆಕ್ಟರ್ ಪ್ರತಿದಿನ ಆತನ ಮನೆಗೆ ಹೋಗಿ, ಬರಿಗೈಲಿ ವಾಪಸಾಗುತ್ತಿದ್ದಾರೆ! ಶ್ರೀಕಿಗೆ ಜೀವಕ್ಕೆ ಅಪಾಯ ಇದೆ ಎಂದು ಮಾಜಿ ಸಿಎಂ ನಾಯಕ ಸಿದ್ದರಾಮಯ್ಯ ಮತ್ತು ವಕೀಲ ಸಂಕೇತ್ ಏಣಗಿ ಸಹ ಆರೋಪಿಸಿದ್ದರು.

ವಿರೋಧ ಪಕ್ಷದ ಆರೋಪದ ಬೆನ್ನಲ್ಲೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸರು ಶ್ರೀಕಿಗೆ ಗನ್ ಮ್ಯಾನ್ ನೀಡಲು ಮುಂದಾಗಿದ್ದಾರೆ. ಮನೆಯವರನ್ನ ಹೆಚ್ಚು ವಿಚಾರಿಸಿದಾಗ ಶ್ರೀಕಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದು ಉತ್ತರಿಸುತ್ತಿದ್ದಾರಷ್ಟೆ. ಆದ್ದರಿಂದ ಶ್ರೀಕಿ ಬಗ್ಗೆ ಪೊಲೀಸರು ತಮ್ಮ ಮೂಲಗಳಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

Also Read: Sriki International hacker: ಜಾಗತಿಕ ಹ್ಯಾಕರ್ ಶ್ರೀಕಿ ಅಲಿಯಾಸ್​ ಶ್ರೀ ಕೃಷ್ಣ ಜೈಲಿನಲ್ಲಿದ್ದಾಗ ಭಗವದ್ಗೀತೆ ಓದುತ್ತಿದ್ದ!

(bengaluru city police appoint sub inspector for the security of hacker sri krishna but his whereabouts not known)

Published On - 2:00 pm, Wed, 17 November 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ