AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್​ಇನ್ಸ್‌ಪೆಕ್ಟರ್ ನಿಯೋಜನೆ; ಆದ್ರೆ ಆಸಾಮಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದ ಕುಟುಂಬಸ್ಥರು!

Hacker Sri Krishna: ವಿರೋಧ ಪಕ್ಷದ ಆರೋಪದ ಬೆನ್ನಲ್ಲೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸರು ಶ್ರೀಕಿಗೆ ಗನ್ ಮ್ಯಾನ್ ನೀಡಲು ಮುಂದಾಗಿದ್ದಾರೆ. ಮನೆಯವರನ್ನ ಹೆಚ್ಚು ವಿಚಾರಿಸಿದಾಗ ಶ್ರೀಕಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದು ಉತ್ತರಿಸುತ್ತಿದ್ದಾರಷ್ಟೆ.

ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್​ಇನ್ಸ್‌ಪೆಕ್ಟರ್ ನಿಯೋಜನೆ; ಆದ್ರೆ ಆಸಾಮಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದ ಕುಟುಂಬಸ್ಥರು!
ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್​ಇನ್ಸ್‌ಪೆಕ್ಟರ್ ನಿಯೋಜನೆ; ಆದ್ರೆ ಆಸಾಮಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದ ಕುಟುಂಬಸ್ಥರು!
TV9 Web
| Updated By: ಸಾಧು ಶ್ರೀನಾಥ್​|

Updated on:Nov 17, 2021 | 2:57 PM

Share

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಜಾಗತಿಕ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ಭದ್ರತೆ ಒದಗಿಸಿದ್ದಾರೆ. ಶ್ರೀಕೃಷ್ಣ ಭದ್ರತೆಗೆ ಒಬ್ಬ ಸಬ್ ಇನ್ಸ್‌ಪೆಕ್ಟರ್ ಅನ್ನು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ನಿಯೋಜನೆ ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಡೆಯಿಂದ ಶ್ರೀಕಿ ಜೀವಕ್ಕೆ ಅಪಾಯವಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಆದರೆ ಶ್ರೀಕಿಗೆ ಭದ್ರತೆ ನೀಡಲು ಖುದ್ದು ಕಮೀಷನರ್ ಕಮಲ್ ಪಂತ್ ಸೂಚನೆ ಅವರೇ ಸೂಚನೆ ನೀಡಿರುವುದರಿಂದ ಶ್ರೀಕಿ ಮನೆಯವರನ್ನ ಭದ್ರತೆಗೆ ನಿಯೋಜನೆಗೊಂಡ ಸಬ್ ಇನ್ಸ್‌ಪೆಕ್ಟರ್ ಸಂಪರ್ಕಿಸಿದ್ದಾರೆ. ಈ ವೇಳೆ ಶ್ರೀಕಿ ಎಲ್ಲಿದ್ದಾನೋ ಗೊತ್ತಿಲ್ಲ, ಮನೆಗೆ ಬರ್ತಿಲ್ಲ ಎಂದು ಅವರ ಸಹೋದರ ತಿಳಿಸಿದ್ದಾರೆ!

ಗಮನಾರ್ಹ ಸಂಗತಿಯೆಂದರೆ ಶ್ರೀಕಿ ಭದ್ರತೆಗೆ ನಿಯೋಜನೆಗೊಂಡ ಸಬ್ ಇನ್ಸ್‌ಪೆಕ್ಟರ್ ಪ್ರತಿದಿನ ಆತನ ಮನೆಗೆ ಹೋಗಿ, ಬರಿಗೈಲಿ ವಾಪಸಾಗುತ್ತಿದ್ದಾರೆ! ಶ್ರೀಕಿಗೆ ಜೀವಕ್ಕೆ ಅಪಾಯ ಇದೆ ಎಂದು ಮಾಜಿ ಸಿಎಂ ನಾಯಕ ಸಿದ್ದರಾಮಯ್ಯ ಮತ್ತು ವಕೀಲ ಸಂಕೇತ್ ಏಣಗಿ ಸಹ ಆರೋಪಿಸಿದ್ದರು.

ವಿರೋಧ ಪಕ್ಷದ ಆರೋಪದ ಬೆನ್ನಲ್ಲೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸರು ಶ್ರೀಕಿಗೆ ಗನ್ ಮ್ಯಾನ್ ನೀಡಲು ಮುಂದಾಗಿದ್ದಾರೆ. ಮನೆಯವರನ್ನ ಹೆಚ್ಚು ವಿಚಾರಿಸಿದಾಗ ಶ್ರೀಕಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದು ಉತ್ತರಿಸುತ್ತಿದ್ದಾರಷ್ಟೆ. ಆದ್ದರಿಂದ ಶ್ರೀಕಿ ಬಗ್ಗೆ ಪೊಲೀಸರು ತಮ್ಮ ಮೂಲಗಳಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

Also Read: Sriki International hacker: ಜಾಗತಿಕ ಹ್ಯಾಕರ್ ಶ್ರೀಕಿ ಅಲಿಯಾಸ್​ ಶ್ರೀ ಕೃಷ್ಣ ಜೈಲಿನಲ್ಲಿದ್ದಾಗ ಭಗವದ್ಗೀತೆ ಓದುತ್ತಿದ್ದ!

(bengaluru city police appoint sub inspector for the security of hacker sri krishna but his whereabouts not known)

Published On - 2:00 pm, Wed, 17 November 21

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ