AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸರ ವಶಕ್ಕೆ ಮತ್ತೋರ್ವ ಶಂಕಿತ ಉಗ್ರ

ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ಕೋಣೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ಶಂಕಿತ ಉಗ್ರನೂ ವಾಸ್ತವ್ಯ ಹೂಡಿದ್ದ.

ಬೆಂಗಳೂರಿನಲ್ಲಿ ಪೊಲೀಸರ ವಶಕ್ಕೆ ಮತ್ತೋರ್ವ ಶಂಕಿತ ಉಗ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 25, 2022 | 8:28 AM

Share

ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರ (Suspected Terrorist) ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ನಗರ ಅಪರಾಧ ದಳ (City Crime Branch – CCB) ವಿಭಾಗದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭಾನುವಾರ ರಾತ್ರಿ (ಜುಲೈ 24) 7 ಗಂಟೆ ವೇಳೆಯಲ್ಲಿ ಶಂಕಿತ ಉಗ್ರ ವಾಸವಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದರು. ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ಕೋಣೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ಶಂಕಿತ ಉಗ್ರನೂ ವಾಸ್ತವ್ಯ ಹೂಡಿದ್ದ. ಖಚಿತ ಮಾಹಿತಿ ಮೇರೆಗೆ 30ಕ್ಕೂ ಹೆಚ್ಚು ಸಿಬ್ಬಂದಿಯಿದ್ದ ಸಿಸಿಬಿ ಪೊಲೀಸರ ತಂಡವು ದಾಳಿ ನಡೆಸಿತ್ತು. ಪ್ರಕರಣ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರು ಉಗ್ರರ ಅಡಗುತಾಣವಾಗುತ್ತಿದೆಯೇ ಎನ್ನುವ ಶಂಕೆಯನ್ನೂ ಈ ಪ್ರಕರಣ ಹುಟ್ಟುಹಾಕಿದೆ. ಕಳೆದ ತಿಂಗಳಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈತ ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ತನ್ನ ಹೆಸರನ್ನೂ ತಾಲಿಕ್ ಎಂದು ಬದಲಿಸಿಕೊಂಡಿದ್ದ. ಬಿಎನ್​ಎಲ್​ ಏರ್​ ಸರ್ವಿಸ್​ನಲ್ಲಿ ಕೆಲಸ ಮಾಡುತ್ತಿದ್ದ ತಾಲಿಬ್, ಕಾಶ್ಮೀರದಿಂದ ಬೆಂಗಳೂರಿಗೆ ಬರುವಾಗ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ತನ್ನ​ ಪತ್ನಿಯನ್ನೂ ಜೊತೆಗೆ ಕರೆತಂದಿದ್ದ. ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದ.

ಶಂಕಿತ ಉಗ್ರರ ಮೇಲೆ ಹದ್ದಿನ ಕಣ್ಣು

ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನದ ನಂತರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಇಂತಹ ಶಂಕಿತರ ಮೇಲೆ ಪೊಲೀಸ್ ಇಲಾಖೆ ನಿರಂತರ ಕಣ್ಣಿಟ್ಟಿದೆ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟಿದ್ದಾರೆ. ಹಿಂದೆಯೂ ಭಟ್ಕಳ, ಶಿರಸಿಯಲ್ಲಿ ಶಂಕಿತರನ್ನು ಬಂಧಿಸಲಾಗಿತ್ತು. ಕಾಶ್ಮೀರ ಪೊಲೀಸರಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದ್ದರು.

Published On - 6:41 am, Mon, 25 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್