AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ ಕೊರೊನಾ ಪಾಸಿಟಿವ್, ಚೇತರಿಸಿಕೊಂಡ ಸಿಎಂ ಬೊಮ್ಮಾಯಿಗೆ ನೆಗೆಟಿವ್

ಕಳೆದ ಒಂದು ವಾರದಿಂದ ಪೊಲೀಸ್ ಆಯುಕ್ತರು ಹೋಮ್ ಐಸೊಲೇಶನ್​ನಲ್ಲಿದ್ದರು. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಸಲಹೆ ಮಾಡಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ ಕೊರೊನಾ ಪಾಸಿಟಿವ್, ಚೇತರಿಸಿಕೊಂಡ ಸಿಎಂ ಬೊಮ್ಮಾಯಿಗೆ ನೆಗೆಟಿವ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:Jan 17, 2022 | 5:04 PM

Share

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ (Bengaluru City Police Commissioner) ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು (Coronavirus) ದೃಢಪಟ್ಟಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸೋಂಕಿನಿಂದ ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಕಳೆದ ಒಂದು ವಾರದಿಂದ ಪೊಲೀಸ್ ಆಯುಕ್ತರು ಹೋಮ್ ಐಸೊಲೇಶನ್​ನಲ್ಲಿದ್ದರು. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಸಲಹೆ ಮಾಡಿದ್ದಾರೆ.

ಸಿಎಂಗೆ ಆರೋಗ್ಯ ತಪಾಸಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ರಕ್ತದೊತ್ತಡ, ಶುಗರ್, ರಕ್ತ ಹೆಪ್ಪುಕಟ್ಟುವುದಕ್ಕೆ ಸಂಬಂಧಿಸಿದಂತೆ ಹಲವು ತಪಾಸಣೆಗಳನ್ನು ನಡೆಸಲಾಯಿತು. ಡಿ-ಡೈಮರ್ ಟೆಸ್ಟ್​ ಹಾಗೂ ಶ್ವಾಸಕೋಶ ಎಕ್ಸ್​ರೇ ತೆಗೆಸಲಾಯಿತು. ಇಸಿಜಿ ಹಾಗೂ ಇಕೋ ಟೆಸ್ಟ್​ ಮಾಡಿ ಹೃದಯದ ಆರೋಗ್ಯ ತಪಾಸಣೆ ಮಾಡಲಾಯಿತು. ಕೊವಿಡ್-19 ಟೆಸ್ಟ್​ಗೆ ಗಂಟಲುದ್ರವ ಸಂಗ್ರಹಿಸಸಲಾಯಿತು. ಈ ಹಿಂದೆ ನಡೆಸಿದ್ದ ಟೆಸ್ಟ್​ನಲ್ಲಿ ಮುಖ್ಯಮಂತ್ರಿಗೆ ಕೊವಿಡ್ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಹಲವು ಪರೀಕ್ಷೆಗಳಿಗೆ ಒಳಪಡಿಸಲಾಯಿತು.

ಎರಡನೇ ಬಾರಿ ತಪಾಸಣೆ ಮಾಡಿದಾಗ ಮುಖ್ಯಮಂತ್ರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯ ಗಂಟಲುದ್ರವ ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು.

ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 34 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 13 ಸಾವು ಇದನ್ನೂ ಓದಿ: Corona Review Meeting: ಕೊರೊನಾ ಪರಿಸ್ಥಿತಿ ಪರಾಮರ್ಶೆ: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

Published On - 5:03 pm, Mon, 17 January 22

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ