AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 1 ವಾರದಲ್ಲಿ 24 ವರ್ಷದ ಹಿಂದಿನ ಹಳೆ ಪ್ರಕರಣ ಸೇರಿದಂತೆ 20 ಕೇಸ್​ಗಳು ಪತ್ತೆ

ಪೊಲೀಸರು ಒಟ್ಟು 20 ಹಳೆಯ ಪ್ರಕರಣಗಳನ್ನ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ತೆ ಹಚ್ಚಿದ ಪ್ರಕರಣಗಳ ಮೇಲೂ ಪೊಲೀಸ್ ಕಮಿಷನರ್ ಬಿ ದಯಾನಂದ್ ಕಣ್ಣಿಟ್ಟಿದ್ದಾರೆ. ಇಷ್ಟು ದಿನ ಯಾಕೆ ಬಂಧನ ಮಾಡಿಲ್ಲ ಎಂಬುದರ ಬಗ್ಗೆ ಪೂರ್ವಾಪರ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: 1 ವಾರದಲ್ಲಿ 24 ವರ್ಷದ ಹಿಂದಿನ ಹಳೆ ಪ್ರಕರಣ ಸೇರಿದಂತೆ 20 ಕೇಸ್​ಗಳು ಪತ್ತೆ
ಬೆಂಗಳೂರು ನಗರ ಪೊಲೀಸ್​ ಕಮೀಷನರ್​
Jagadish PB
| Edited By: |

Updated on: Nov 05, 2023 | 8:23 AM

Share

ಬೆಂಗಳೂರು ನ.05: ಬೆಂಗಳೂರು ನಗರ ಪೊಲೀಸ್ (Bengaluru City Police) ಆಯುಕ್ತ ಬಿ.ದಯಾನಂದ್ (B Dayananda)​ ಖಡಕ್​ ಸೂಚನೆ ಬೆನ್ನೆಲ್ಲೆ ಎಚ್ಚೆತ್ತ ನಗರ ಪೊಲೀಸರು ಪತ್ತೆ ಆಗದೆ ಮೂಲೆಯಲ್ಲಿ ದೂಳು ಹಿಡಿದಿದ್ದ ಪ್ರಕರಣಗಳನ್ನು ರಿ ಓಪನ್​ ಮಾಡಲಾಗಿದೆ. ವರ್ಷಾನುಗಟ್ಟಲೇ ಪತ್ತೆಯಾಗದ ಹಳೆಯ ಪ್ರಕರಣಗಳು ಒಂದೇ ವಾರದಲ್ಲಿ 20 ಪತ್ತೆಯಾಗಿವೆ. ಈ ಎಲ್ಲ ಪ್ರಕರಣಗಳನ್ನು ಪತ್ತೆ ಹಚ್ಚಿ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 15, 20, 24 ವರ್ಷದ ಹಳೇ ಪ್ರಕರಣಗಳನ್ನು ಕೂಡ ರಿ ಓಪನ್​ ಮಾಡಲಾಗಿದೆ.

ಈ ವಾರದಲ್ಲಿ ಪತ್ತೆಯಾದ ಹಳೇ ಪ್ರಕರಣಗಳು ಹೀಗಿವೆ

ಕೇಸ್ ನಂ1: 2015ರಲ್ಲಿನ ಅತ್ಯಾಚಾರ ಪ್ರಕರಣದ ಆರೋಪಿ ಜಿಬ್ರಾನ್ ಪಾಷ್​​ನನ್ನು ಸುದ್ದುಗುಂಟೆಪಾಳ್ಯ ಠಾಣೆ ಪೊಲೀಸರು 9 ವರ್ಷಗಳ ಬಳಿಕ ಬಂಧಿಸಿದ್ದಾರೆ.

ಕೇಸ್ ನಂ 2: 2014ರಲ್ಲಿನ ಪೋಕ್ಸೋ ಪ್ರಕರಣದ ಎ2 ಜಯಲಕ್ಷಿ ಎಂಬಾಕೆಯನ್ನು ಒಂಬತ್ತು ವರ್ಷಗಳ ಬಳಿಕ ಸದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಕೇಸ್​ ನಂ 3: 2018ರ ಆರ್​ಟಿ ನಗರದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಜಾವೀದ್​ನನ್ನು ಆರ್ ಟಿ ನಗರ ಠಾಣೆ ಪೊಲೀಸರು ಐದು ವರ್ಷಗಳ ಬಳಿಕ ಬಂಧಿಸಿದ್ದಾರೆ.

ಕೇಸ್ ನಂ 4: ತಿಲಕ್ ನಗರದ ಮನೆಗಳ್ಳತನದ ಆರೋಪಿ ಜಬಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕಳೆದ 24 ವರ್ಷಗಳಿಂದ ತಲೆ ಮರೆಸಿಕೊಂಡಿದ್ದನು.

ಕೇಸ್ ನಂ 5: 2018 ರಿಂದ ತಲೆಮರೆಸಿಕೊಂಡಿದ್ದ ಸೈಯದ್ ಮಜಾಫಿರ್ ಅಹಮದ್​​ನನ್ನು ಆಡುಗೋಡಿ ಪೊಲೀಸ್ ಠಾಣೆ ಪೊಲೀಸರು ಐದು ವರ್ಷಗಳಿಂದ ಬಳಿಕ ಬಂಧಿಸಿದ್ದಾರೆ.

ಕೇಸ್ ನಂ 6: ಭಾರತಿ ನಗರದ ಕುಟುಂಬ ಕಲಹ ಪ್ರಕರಣದ ಆರೋಪಿ ಅಶೋಕ್ 2005 ರಿಂದಲೂ ತಲೆಮರೆಸಿಕೊಂಡಿದ್ದು, ಇದೀಗ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

ಕೇಸ್ ನಂ 7: ರಾಮ ಮೂರ್ತಿನಗರದ ಹಲ್ಲೆ ಪ್ರಕರಣದ ಆರೋಪಿ ಮುನಿಯಪ್ಪ 2012 ರಿಂದ ತಲೆಮರೆಸಿಕೊಂಡಿದ್ದು ಇದೀಗ ಪೊಲೀಸರು ಬಂಧಿಸಿದ್ದಾರೆ.

ಕೇಸ್ ನಂ 8: ಹೆಣ್ಣೂರಿನ ಡಕಾಯಿತಿ ಪ್ರಕರಣದ ಆರೋಪಿ ಫಜಿವುಲ್ಲಾ ಎಂಬ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ಸುಮಾರು ಏಳು ವರ್ಷಗಳಿಂದ ನಾಪತ್ತೆಯಾಗಿದ್ದನು.

ಕೇಸ್ ನಂ 9: ರಾಜಗೋಪಾಲ ನಗರ ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. 2007 ರಿಂದಲೂ ಆರೋಪಿ ತಲೆಮರೆಸಿಕೊಂಡಿದ್ದನು.

ಕೇಸ್ ನಂ 10: 2010 ರಿಂದ ತಲೆಮರೆಸಿಕೊಂಡಿದ್ದ ಮನೆಗಳ್ಳತನ ಪ್ರಕರಣದ ಆರೋಪಿ ಜಾನ್​ನನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಹೀಗೆ ಒಟ್ಟು 20 ಹಳೆಯ ಪ್ರಕರಣಗಳನ್ನ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ತೆ ಹಚ್ಚಿದ ಪ್ರಕರಣಗಳ ಮೇಲೂ ಪೊಲೀಸ್ ಕಮಿಷನರ್ ಬಿ ದಯಾನಂದ್ ಕಣ್ಣಿಟ್ಟಿದ್ದಾರೆ. ಇಷ್ಟು ದಿನ ಯಾಕೆ ಬಂಧನ ಮಾಡಿಲ್ಲ ಎಂಬುದರ ಬಗ್ಗೆ ಪೂರ್ವಾಪರ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?