AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ: ಊರುಗಳತ್ತ ಮುಖ ಮಾಡಿದ ಸಿಟಿ ಜನ: ಬೆಂಗಳೂರಿನಾದ್ಯಂತ ಫುಲ್​ ಟ್ರಾಫಿಕ್ ಜಾಮ್

ನಾಳೆ ಈದ್ ಮಿಲಾದ್, ನಾಡಿದ್ದು ಕರ್ನಾಟಕ ಬಂದ್​ಗೆ ಕರೆ ಮತ್ತು ಕೆಲವು ಖಾಸಗಿ ಕಂಪನಿಗಳಿಗೆ ಶನಿವಾರ, ಭಾನುವಾರ ಸೇರಿದಂತೆ ಸಾಲು ಸಾಲು ರಜೆಗಳಿರುವುದರಿಂದ ಸಿಟಿ ಜನ ತಮ್ಮ ತಮ್ಮ ಊರುಗಳತ್ತ ಮುಖಮಾಡುತ್ತಿದ್ದಾರೆ. ಹಿಗಾಗಿ ಬೆಂಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತಾಗಿದೆ.

ರಾಚಪ್ಪಾಜಿ ನಾಯ್ಕ್
| Edited By: |

Updated on:Sep 27, 2023 | 9:07 PM

Share

ಬೆಂಗಳೂರು, ಸೆಪ್ಟೆಂಬರ್​ 27: ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋರಾಟಗಾರ ವಾಟಾಳ್​ ನಾಜರಾಜ್​ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಸೆಪ್ಟೆಂಬರ್​ 29 ರಂದು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಜೊತೆಗೆ ಸೆ. 28 ರಂದು ಈದ್ ಮಿಲಾದ್​​ ಮತ್ತು ಅಕ್ಟೋಬರ್​​ 2 ಗಾಂಧಿ ಜಯಂತಿ ಹಿನ್ನೆಲೆ ಸಾಲು ಸಾಲು ರಜೆ (holidays) ಗಳಿರುವುದರಿಂದ ಸಿಟಿ ಜನ ತಮ್ಮ ತಮ್ಮ ಊರುಗಳತ್ತ ಮುಖಮಾಡುತ್ತಿದ್ದಾರೆ. ಬೆಂಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತಾಗಿದೆ.

ನಾಳೆ ಈದ್ ಮಿಲಾದ್ ರಜೆ, ನಾಡಿದ್ದು ಕರ್ನಾಟಕ ಬಂದ್​ಗೆ ಕರೆ ಮತ್ತು ಕೆಲವು ಖಾಸಗಿ ಕಂಪನಿಗಳಿಗೆ ಶನಿವಾರ ರಜೆ, ಭಾನುವಾರ ಮಾಮೂಲಿ ರಜೆಗಳಿದ್ದು, ಒಮ್ಮೆಲೆ ನೂರಾರು ಜನ ರಸ್ತೆಗೆ ಬಂದಿದ್ದರಿಂದ ಕಾರ್ಪೊರೇಷನ್ ವೃತ್ತದಿಂದ ಮೆಜೆಸ್ಟಿಕ್ ಮಾರ್ಗದಲ್ಲಿ ಫುಲ್​ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಬೆಂಗಳೂರಿನ ಪ್ರತಿ ರಸ್ತೆಯಲ್ಲೂ ಸಂಚಾರ ಮಂದಗತಿಯಲ್ಲಿ ಸಾಗಿದೆ.

ಸಾರ್ವಜನಿಕರಿಗೆ ವಾಟಾಳ್ ನಾಗರಾಜ್​ ಮನವಿ

ಕರ್ನಾಟಕ ಬಂದ್​ಗೆ ಎಲ್ಲರೂ ಸಹಕಾರ ನೀಡಬೇಕು. ಹೋಟೆಲ್​, ಶಾಪಿಂಗ್ ಮಾಲ್​ಗಳು, ಅಂಗಡಿಗಳು ಬಂದ್​​​ ಮಾಡಬೇಕು ಎಂದು ತೆರೆದ ವಾಹನದಲ್ಲಿ ಬೀದಿ ಬೀದಿಗೆ ತೆರಳಿ ಲೌಡ್​ ಸ್ಪೀಕರ್​ ಮೂಲಕ ಜನರಿಗೆ ಹೋರಾಟಗಾರ ವಾಟಾಳ್ ನಾಗರಾಜ್​ ಇಂದು​ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಾವೇರಿ‌ ಹೋರಾಟಕ್ಕಿಳಿದ ಪ್ರತಿಭಟನಾಕಾರರಿಗೆ ಶಾಕ್: ಕಕಜವೇ ರಾಜ್ಯಾಧ್ಯಕ್ಷ ರಮೇಶ್ ಗೌಡ ವಿರುದ್ಧ ಎಫ್​ಐಆರ್

ಈ ಬಂದ್ ಒಂದು ಜಿಲ್ಲೆಗೆ ಮಾತ್ರ ಸೀಮಿತಲ್ಲ, ಕರ್ನಾಟಕದಾದ್ಯಂತ ಬಂದ್​ ನಡೆಯಲಿದೆ. ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದೆ ಎಂದಿದ್ದಾರೆ.

ಕರ್ನಾಟಕ ಬಂದ್​ ದಿನ ಏನೇನಿರಲ್ಲ?

  • ಓಲಾ ಮತ್ತು ಉಬರ್ ಸೇವೆಗಳು
  • ಆಟೋರಿಕ್ಷಾಗಳು
  • ಕಾರ್ಮಿಕ ಆಧಾರಿತ ಕೆಲಸಗಳು
  • ಟ್ರಕ್ ಸಾರಿಗೆ
  • ಮಾರುಕಟ್ಟೆಗಳು
  • ಬೀದಿ ವ್ಯಾಪಾರಿಗಳು
  • ಹೋಟೆಲ್‌ಗಳು
  • ಚಿತ್ರಮಂದಿರಗಳು
  • ಮಾಲ್‌ಗಳು
  • ಖಾಸಗಿ ಬಸ್ಸುಗಳು
  • ಬೇಕರಿಗಳು

ಕರ್ನಾಟಕ ಬಂದ್ ದಿನ ಏನೇನಿರುತ್ತವೆ?

  • ಆಸ್ಪತ್ರೆ
  • ಔಷಧಾಲಯಗಳು
  • ಆಂಬ್ಯುಲೆನ್ಸ್ ಸೇವೆಗಳು
  • ಮೆಟ್ರೋ ಸೇವೆ
  • ಹಾಲಿನ ಪಾರ್ಲರ್‌ಗಳು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 pm, Wed, 27 September 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ