AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ: ಊರುಗಳತ್ತ ಮುಖ ಮಾಡಿದ ಸಿಟಿ ಜನ: ಬೆಂಗಳೂರಿನಾದ್ಯಂತ ಫುಲ್​ ಟ್ರಾಫಿಕ್ ಜಾಮ್

ನಾಳೆ ಈದ್ ಮಿಲಾದ್, ನಾಡಿದ್ದು ಕರ್ನಾಟಕ ಬಂದ್​ಗೆ ಕರೆ ಮತ್ತು ಕೆಲವು ಖಾಸಗಿ ಕಂಪನಿಗಳಿಗೆ ಶನಿವಾರ, ಭಾನುವಾರ ಸೇರಿದಂತೆ ಸಾಲು ಸಾಲು ರಜೆಗಳಿರುವುದರಿಂದ ಸಿಟಿ ಜನ ತಮ್ಮ ತಮ್ಮ ಊರುಗಳತ್ತ ಮುಖಮಾಡುತ್ತಿದ್ದಾರೆ. ಹಿಗಾಗಿ ಬೆಂಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತಾಗಿದೆ.

ರಾಚಪ್ಪಾಜಿ ನಾಯ್ಕ್
| Edited By: |

Updated on:Sep 27, 2023 | 9:07 PM

Share

ಬೆಂಗಳೂರು, ಸೆಪ್ಟೆಂಬರ್​ 27: ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋರಾಟಗಾರ ವಾಟಾಳ್​ ನಾಜರಾಜ್​ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಸೆಪ್ಟೆಂಬರ್​ 29 ರಂದು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಜೊತೆಗೆ ಸೆ. 28 ರಂದು ಈದ್ ಮಿಲಾದ್​​ ಮತ್ತು ಅಕ್ಟೋಬರ್​​ 2 ಗಾಂಧಿ ಜಯಂತಿ ಹಿನ್ನೆಲೆ ಸಾಲು ಸಾಲು ರಜೆ (holidays) ಗಳಿರುವುದರಿಂದ ಸಿಟಿ ಜನ ತಮ್ಮ ತಮ್ಮ ಊರುಗಳತ್ತ ಮುಖಮಾಡುತ್ತಿದ್ದಾರೆ. ಬೆಂಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತಾಗಿದೆ.

ನಾಳೆ ಈದ್ ಮಿಲಾದ್ ರಜೆ, ನಾಡಿದ್ದು ಕರ್ನಾಟಕ ಬಂದ್​ಗೆ ಕರೆ ಮತ್ತು ಕೆಲವು ಖಾಸಗಿ ಕಂಪನಿಗಳಿಗೆ ಶನಿವಾರ ರಜೆ, ಭಾನುವಾರ ಮಾಮೂಲಿ ರಜೆಗಳಿದ್ದು, ಒಮ್ಮೆಲೆ ನೂರಾರು ಜನ ರಸ್ತೆಗೆ ಬಂದಿದ್ದರಿಂದ ಕಾರ್ಪೊರೇಷನ್ ವೃತ್ತದಿಂದ ಮೆಜೆಸ್ಟಿಕ್ ಮಾರ್ಗದಲ್ಲಿ ಫುಲ್​ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಬೆಂಗಳೂರಿನ ಪ್ರತಿ ರಸ್ತೆಯಲ್ಲೂ ಸಂಚಾರ ಮಂದಗತಿಯಲ್ಲಿ ಸಾಗಿದೆ.

ಸಾರ್ವಜನಿಕರಿಗೆ ವಾಟಾಳ್ ನಾಗರಾಜ್​ ಮನವಿ

ಕರ್ನಾಟಕ ಬಂದ್​ಗೆ ಎಲ್ಲರೂ ಸಹಕಾರ ನೀಡಬೇಕು. ಹೋಟೆಲ್​, ಶಾಪಿಂಗ್ ಮಾಲ್​ಗಳು, ಅಂಗಡಿಗಳು ಬಂದ್​​​ ಮಾಡಬೇಕು ಎಂದು ತೆರೆದ ವಾಹನದಲ್ಲಿ ಬೀದಿ ಬೀದಿಗೆ ತೆರಳಿ ಲೌಡ್​ ಸ್ಪೀಕರ್​ ಮೂಲಕ ಜನರಿಗೆ ಹೋರಾಟಗಾರ ವಾಟಾಳ್ ನಾಗರಾಜ್​ ಇಂದು​ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಾವೇರಿ‌ ಹೋರಾಟಕ್ಕಿಳಿದ ಪ್ರತಿಭಟನಾಕಾರರಿಗೆ ಶಾಕ್: ಕಕಜವೇ ರಾಜ್ಯಾಧ್ಯಕ್ಷ ರಮೇಶ್ ಗೌಡ ವಿರುದ್ಧ ಎಫ್​ಐಆರ್

ಈ ಬಂದ್ ಒಂದು ಜಿಲ್ಲೆಗೆ ಮಾತ್ರ ಸೀಮಿತಲ್ಲ, ಕರ್ನಾಟಕದಾದ್ಯಂತ ಬಂದ್​ ನಡೆಯಲಿದೆ. ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದೆ ಎಂದಿದ್ದಾರೆ.

ಕರ್ನಾಟಕ ಬಂದ್​ ದಿನ ಏನೇನಿರಲ್ಲ?

  • ಓಲಾ ಮತ್ತು ಉಬರ್ ಸೇವೆಗಳು
  • ಆಟೋರಿಕ್ಷಾಗಳು
  • ಕಾರ್ಮಿಕ ಆಧಾರಿತ ಕೆಲಸಗಳು
  • ಟ್ರಕ್ ಸಾರಿಗೆ
  • ಮಾರುಕಟ್ಟೆಗಳು
  • ಬೀದಿ ವ್ಯಾಪಾರಿಗಳು
  • ಹೋಟೆಲ್‌ಗಳು
  • ಚಿತ್ರಮಂದಿರಗಳು
  • ಮಾಲ್‌ಗಳು
  • ಖಾಸಗಿ ಬಸ್ಸುಗಳು
  • ಬೇಕರಿಗಳು

ಕರ್ನಾಟಕ ಬಂದ್ ದಿನ ಏನೇನಿರುತ್ತವೆ?

  • ಆಸ್ಪತ್ರೆ
  • ಔಷಧಾಲಯಗಳು
  • ಆಂಬ್ಯುಲೆನ್ಸ್ ಸೇವೆಗಳು
  • ಮೆಟ್ರೋ ಸೇವೆ
  • ಹಾಲಿನ ಪಾರ್ಲರ್‌ಗಳು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 pm, Wed, 27 September 23

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?