AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ: ಊರುಗಳತ್ತ ಮುಖ ಮಾಡಿದ ಸಿಟಿ ಜನ: ಬೆಂಗಳೂರಿನಾದ್ಯಂತ ಫುಲ್​ ಟ್ರಾಫಿಕ್ ಜಾಮ್

ನಾಳೆ ಈದ್ ಮಿಲಾದ್, ನಾಡಿದ್ದು ಕರ್ನಾಟಕ ಬಂದ್​ಗೆ ಕರೆ ಮತ್ತು ಕೆಲವು ಖಾಸಗಿ ಕಂಪನಿಗಳಿಗೆ ಶನಿವಾರ, ಭಾನುವಾರ ಸೇರಿದಂತೆ ಸಾಲು ಸಾಲು ರಜೆಗಳಿರುವುದರಿಂದ ಸಿಟಿ ಜನ ತಮ್ಮ ತಮ್ಮ ಊರುಗಳತ್ತ ಮುಖಮಾಡುತ್ತಿದ್ದಾರೆ. ಹಿಗಾಗಿ ಬೆಂಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತಾಗಿದೆ.

ರಾಚಪ್ಪಾಜಿ ನಾಯ್ಕ್
| Edited By: |

Updated on:Sep 27, 2023 | 9:07 PM

Share

ಬೆಂಗಳೂರು, ಸೆಪ್ಟೆಂಬರ್​ 27: ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋರಾಟಗಾರ ವಾಟಾಳ್​ ನಾಜರಾಜ್​ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಸೆಪ್ಟೆಂಬರ್​ 29 ರಂದು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಜೊತೆಗೆ ಸೆ. 28 ರಂದು ಈದ್ ಮಿಲಾದ್​​ ಮತ್ತು ಅಕ್ಟೋಬರ್​​ 2 ಗಾಂಧಿ ಜಯಂತಿ ಹಿನ್ನೆಲೆ ಸಾಲು ಸಾಲು ರಜೆ (holidays) ಗಳಿರುವುದರಿಂದ ಸಿಟಿ ಜನ ತಮ್ಮ ತಮ್ಮ ಊರುಗಳತ್ತ ಮುಖಮಾಡುತ್ತಿದ್ದಾರೆ. ಬೆಂಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತಾಗಿದೆ.

ನಾಳೆ ಈದ್ ಮಿಲಾದ್ ರಜೆ, ನಾಡಿದ್ದು ಕರ್ನಾಟಕ ಬಂದ್​ಗೆ ಕರೆ ಮತ್ತು ಕೆಲವು ಖಾಸಗಿ ಕಂಪನಿಗಳಿಗೆ ಶನಿವಾರ ರಜೆ, ಭಾನುವಾರ ಮಾಮೂಲಿ ರಜೆಗಳಿದ್ದು, ಒಮ್ಮೆಲೆ ನೂರಾರು ಜನ ರಸ್ತೆಗೆ ಬಂದಿದ್ದರಿಂದ ಕಾರ್ಪೊರೇಷನ್ ವೃತ್ತದಿಂದ ಮೆಜೆಸ್ಟಿಕ್ ಮಾರ್ಗದಲ್ಲಿ ಫುಲ್​ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಬೆಂಗಳೂರಿನ ಪ್ರತಿ ರಸ್ತೆಯಲ್ಲೂ ಸಂಚಾರ ಮಂದಗತಿಯಲ್ಲಿ ಸಾಗಿದೆ.

ಸಾರ್ವಜನಿಕರಿಗೆ ವಾಟಾಳ್ ನಾಗರಾಜ್​ ಮನವಿ

ಕರ್ನಾಟಕ ಬಂದ್​ಗೆ ಎಲ್ಲರೂ ಸಹಕಾರ ನೀಡಬೇಕು. ಹೋಟೆಲ್​, ಶಾಪಿಂಗ್ ಮಾಲ್​ಗಳು, ಅಂಗಡಿಗಳು ಬಂದ್​​​ ಮಾಡಬೇಕು ಎಂದು ತೆರೆದ ವಾಹನದಲ್ಲಿ ಬೀದಿ ಬೀದಿಗೆ ತೆರಳಿ ಲೌಡ್​ ಸ್ಪೀಕರ್​ ಮೂಲಕ ಜನರಿಗೆ ಹೋರಾಟಗಾರ ವಾಟಾಳ್ ನಾಗರಾಜ್​ ಇಂದು​ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಾವೇರಿ‌ ಹೋರಾಟಕ್ಕಿಳಿದ ಪ್ರತಿಭಟನಾಕಾರರಿಗೆ ಶಾಕ್: ಕಕಜವೇ ರಾಜ್ಯಾಧ್ಯಕ್ಷ ರಮೇಶ್ ಗೌಡ ವಿರುದ್ಧ ಎಫ್​ಐಆರ್

ಈ ಬಂದ್ ಒಂದು ಜಿಲ್ಲೆಗೆ ಮಾತ್ರ ಸೀಮಿತಲ್ಲ, ಕರ್ನಾಟಕದಾದ್ಯಂತ ಬಂದ್​ ನಡೆಯಲಿದೆ. ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದೆ ಎಂದಿದ್ದಾರೆ.

ಕರ್ನಾಟಕ ಬಂದ್​ ದಿನ ಏನೇನಿರಲ್ಲ?

  • ಓಲಾ ಮತ್ತು ಉಬರ್ ಸೇವೆಗಳು
  • ಆಟೋರಿಕ್ಷಾಗಳು
  • ಕಾರ್ಮಿಕ ಆಧಾರಿತ ಕೆಲಸಗಳು
  • ಟ್ರಕ್ ಸಾರಿಗೆ
  • ಮಾರುಕಟ್ಟೆಗಳು
  • ಬೀದಿ ವ್ಯಾಪಾರಿಗಳು
  • ಹೋಟೆಲ್‌ಗಳು
  • ಚಿತ್ರಮಂದಿರಗಳು
  • ಮಾಲ್‌ಗಳು
  • ಖಾಸಗಿ ಬಸ್ಸುಗಳು
  • ಬೇಕರಿಗಳು

ಕರ್ನಾಟಕ ಬಂದ್ ದಿನ ಏನೇನಿರುತ್ತವೆ?

  • ಆಸ್ಪತ್ರೆ
  • ಔಷಧಾಲಯಗಳು
  • ಆಂಬ್ಯುಲೆನ್ಸ್ ಸೇವೆಗಳು
  • ಮೆಟ್ರೋ ಸೇವೆ
  • ಹಾಲಿನ ಪಾರ್ಲರ್‌ಗಳು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 pm, Wed, 27 September 23

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ