AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut ಈ ವಾರಾಂತ್ಯದಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಯಾವ ದಿನ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕೆಪಿಟಿಸಿಎಲ್ ಶುಕ್ರವಾರ ಈ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಬೆಸ್ಕಾಂ ಶನಿವಾರ ಮತ್ತು ಭಾನುವಾರ ಒಂದೆರಡು ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದೆ.

Bengaluru Power Cut ಈ ವಾರಾಂತ್ಯದಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಯಾವ ದಿನ?
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 07, 2022 | 10:29 AM

Share

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ಮಾಹಿತಿಯ ಪ್ರಕಾರ, ಬೆಂಗಳೂರು ನಗರದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು, ಅಂದರೆ ಅಕ್ಟೋಬರ್ 7, 8 ಮತ್ತು 9 ರಂದು ಕೆಲವು ವಿದ್ಯುತ್ ಕಡಿತ (Power cuts) ಉಂಟಾಗಲಿದೆ. ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಗಳಿಗೆ 11 ಕಿಲೋವೋಲ್ಟ್ (ಕೆವಿ) , ಫೀಡರ್ ನಿರ್ವಹಣೆ ಕೆಲಸಗಳು, ಜಂಗಲ್ ಕಟಿಂಗ್, ಹೆಚ್ಚುವರಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಒದಗಿಸುವುದು, ತ್ರೈಮಾಸಿಕ ನಿರ್ವಹಣಾ ಕೆಲಸ ಮತ್ತು ಅಸ್ತಿತ್ವದಲ್ಲಿರುವ ಉಪಕರಣಗಳ ಸ್ಥಿತಿಯನ್ನು ಪರಿಶೀಲಿಸುವುದು ಇತ್ಯಾದಿ ಕೆಲಸವನ್ನು ವಿದ್ಯುತ್ ಮಂಡಳಿ ಮಾಡಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕೆಪಿಟಿಸಿಎಲ್ ಶುಕ್ರವಾರ ಈ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಬೆಸ್ಕಾಂ ಶನಿವಾರ ಮತ್ತು ಭಾನುವಾರ ಒಂದೆರಡು ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದೆ. ವಾರಾಂತ್ಯದಲ್ಲಿ ಹೆಚ್ಚಿನ ಕೆಲಸಗಳನ್ನು ನಿಗದಿಪಡಿಸಲಾಗಿದೆ.

ಈ ಕಡಿತ ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಸಂಭವಿಸಬಹುದು. ಎಲ್ಲೆಲ್ಲಿ ವಿದ್ಯುತ್ ಕಡಿತ?

ಅಕ್ಟೋಬರ್ 7, ಶುಕ್ರವಾರ

ಬೆಸ್ಕಾಂ ವಿಭಾಗ- ರಾಮನಗರ ಮತ್ತು ಕುಣಿಗಲ್ ಕೆಟಿಪಿಸಿಎಲ್ ವಿಭಾಗ- ಕೆ.ಬಿ ಕ್ರಾಸ್ ಮತ್ತು ದಾವಣಗೆರೆ ಕೂಟಗಲ್ಲು ಮತ್ತು ಕುಣಮುಂಡ್ನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, 66/11 ಕೆವಿ ಬೇವೂರು ಲೈನ್, 66/11 ಕೆವಿ ದಶಾವರ, 66/11 ಕೆವಿ ಸಂಕಲಗೆರೆ, 66 ಕೆವಿ ಸೌರ ವಿದ್ಯುತ್ ಸ್ಥಾವರ, ಚೌಡನಕುಪ್ಪೆ, ತಾವರೆಕೆರೆ ಜಿಲ್ಲಾಪಂಚಾಯತ್ ಗ್ರಾಮ, ಕಾಡಜ್ಜಿ, ಬೇತೂರು ಬಸವನಾಳು, ನಾಗರಕಟ್ಟೆ ಮತ್ತಿತರ ಗ್ರಾಮಗಳು, ಸವಳಂಗ, ಕೊಡ್ತಾಳು, ಚಿನ್ನಿಕಟ್ಟೆ, ಮಾದಾಪುರ, ಜಯನಗರ, ಕ್ಯಾತಿನಕೊಪ್ಪ, ಮುಸೇನಾಳ್, ಮಾಚಿಗೊಂಡನಹಳ್ಳಿ.

ಅಕ್ಟೋಬರ್ 8, ಶನಿವಾರ

ಬಿಡದಿ ಉಪವಿಭಾಗದಡಿ ಕಾಮಗಾರಿ ನಡೆಯುವುದರಿಂದ ಬೆಸ್ಕಾಂ ವಿಭಾಗದ ರಾಮನಗರದಲ್ಲಿ ವಿದ್ಯುತ್ ಇರುವುದಿಲ್ಲ. ಇನ್ನುಳಿದಂತೆ ಬಿಲ್ಲೆಕೆಂಪನಹಳ್ಳಿ, ಮಾರುತಿನಗರ, ಬೀಮೇನಹಳ್ಳಿ, ನಿಂಗಯ್ಯನದೊಡ್ಡಿ, ರಂಗೇಗೌಡನದೊಡ್ಡಿ, ಲಕ್ಷ್ಮೀಸಾಗರದಲ್ಲಿ ವಿದ್ಯುತ್ ಕಡಿತ ಆಗಲಿದೆ.

ಅಕ್ಟೋಬರ್ 9, ಭಾನುವಾರ

ಬಿಡದಿ ಉಪವಿಭಾಗ ಕಾಮಗಾರಿ ನಡೆಸುವುದರಿಂದ ಬೆಸ್ಕಾಂ ವಿಭಾಗದಡಿಯಲ್ಲಿ ರಾಮನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೆಐಎಡಿಬಿ 1ನೇ ಹಂತದ ಕೈಗಾರಿಕಾ ಪ್ರದೇಶದಲ್ಲೂ ವಿದ್ಯುತ್ ಇರುವುದಿಲ್ಲ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ