AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut ಈ ವಾರಾಂತ್ಯದಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಯಾವ ದಿನ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕೆಪಿಟಿಸಿಎಲ್ ಶುಕ್ರವಾರ ಈ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಬೆಸ್ಕಾಂ ಶನಿವಾರ ಮತ್ತು ಭಾನುವಾರ ಒಂದೆರಡು ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದೆ.

Bengaluru Power Cut ಈ ವಾರಾಂತ್ಯದಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಯಾವ ದಿನ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 07, 2022 | 10:29 AM

Share

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ಮಾಹಿತಿಯ ಪ್ರಕಾರ, ಬೆಂಗಳೂರು ನಗರದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು, ಅಂದರೆ ಅಕ್ಟೋಬರ್ 7, 8 ಮತ್ತು 9 ರಂದು ಕೆಲವು ವಿದ್ಯುತ್ ಕಡಿತ (Power cuts) ಉಂಟಾಗಲಿದೆ. ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಗಳಿಗೆ 11 ಕಿಲೋವೋಲ್ಟ್ (ಕೆವಿ) , ಫೀಡರ್ ನಿರ್ವಹಣೆ ಕೆಲಸಗಳು, ಜಂಗಲ್ ಕಟಿಂಗ್, ಹೆಚ್ಚುವರಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಒದಗಿಸುವುದು, ತ್ರೈಮಾಸಿಕ ನಿರ್ವಹಣಾ ಕೆಲಸ ಮತ್ತು ಅಸ್ತಿತ್ವದಲ್ಲಿರುವ ಉಪಕರಣಗಳ ಸ್ಥಿತಿಯನ್ನು ಪರಿಶೀಲಿಸುವುದು ಇತ್ಯಾದಿ ಕೆಲಸವನ್ನು ವಿದ್ಯುತ್ ಮಂಡಳಿ ಮಾಡಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕೆಪಿಟಿಸಿಎಲ್ ಶುಕ್ರವಾರ ಈ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಬೆಸ್ಕಾಂ ಶನಿವಾರ ಮತ್ತು ಭಾನುವಾರ ಒಂದೆರಡು ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದೆ. ವಾರಾಂತ್ಯದಲ್ಲಿ ಹೆಚ್ಚಿನ ಕೆಲಸಗಳನ್ನು ನಿಗದಿಪಡಿಸಲಾಗಿದೆ.

ಈ ಕಡಿತ ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಸಂಭವಿಸಬಹುದು. ಎಲ್ಲೆಲ್ಲಿ ವಿದ್ಯುತ್ ಕಡಿತ?

ಅಕ್ಟೋಬರ್ 7, ಶುಕ್ರವಾರ

ಬೆಸ್ಕಾಂ ವಿಭಾಗ- ರಾಮನಗರ ಮತ್ತು ಕುಣಿಗಲ್ ಕೆಟಿಪಿಸಿಎಲ್ ವಿಭಾಗ- ಕೆ.ಬಿ ಕ್ರಾಸ್ ಮತ್ತು ದಾವಣಗೆರೆ ಕೂಟಗಲ್ಲು ಮತ್ತು ಕುಣಮುಂಡ್ನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, 66/11 ಕೆವಿ ಬೇವೂರು ಲೈನ್, 66/11 ಕೆವಿ ದಶಾವರ, 66/11 ಕೆವಿ ಸಂಕಲಗೆರೆ, 66 ಕೆವಿ ಸೌರ ವಿದ್ಯುತ್ ಸ್ಥಾವರ, ಚೌಡನಕುಪ್ಪೆ, ತಾವರೆಕೆರೆ ಜಿಲ್ಲಾಪಂಚಾಯತ್ ಗ್ರಾಮ, ಕಾಡಜ್ಜಿ, ಬೇತೂರು ಬಸವನಾಳು, ನಾಗರಕಟ್ಟೆ ಮತ್ತಿತರ ಗ್ರಾಮಗಳು, ಸವಳಂಗ, ಕೊಡ್ತಾಳು, ಚಿನ್ನಿಕಟ್ಟೆ, ಮಾದಾಪುರ, ಜಯನಗರ, ಕ್ಯಾತಿನಕೊಪ್ಪ, ಮುಸೇನಾಳ್, ಮಾಚಿಗೊಂಡನಹಳ್ಳಿ.

ಅಕ್ಟೋಬರ್ 8, ಶನಿವಾರ

ಬಿಡದಿ ಉಪವಿಭಾಗದಡಿ ಕಾಮಗಾರಿ ನಡೆಯುವುದರಿಂದ ಬೆಸ್ಕಾಂ ವಿಭಾಗದ ರಾಮನಗರದಲ್ಲಿ ವಿದ್ಯುತ್ ಇರುವುದಿಲ್ಲ. ಇನ್ನುಳಿದಂತೆ ಬಿಲ್ಲೆಕೆಂಪನಹಳ್ಳಿ, ಮಾರುತಿನಗರ, ಬೀಮೇನಹಳ್ಳಿ, ನಿಂಗಯ್ಯನದೊಡ್ಡಿ, ರಂಗೇಗೌಡನದೊಡ್ಡಿ, ಲಕ್ಷ್ಮೀಸಾಗರದಲ್ಲಿ ವಿದ್ಯುತ್ ಕಡಿತ ಆಗಲಿದೆ.

ಅಕ್ಟೋಬರ್ 9, ಭಾನುವಾರ

ಬಿಡದಿ ಉಪವಿಭಾಗ ಕಾಮಗಾರಿ ನಡೆಸುವುದರಿಂದ ಬೆಸ್ಕಾಂ ವಿಭಾಗದಡಿಯಲ್ಲಿ ರಾಮನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೆಐಎಡಿಬಿ 1ನೇ ಹಂತದ ಕೈಗಾರಿಕಾ ಪ್ರದೇಶದಲ್ಲೂ ವಿದ್ಯುತ್ ಇರುವುದಿಲ್ಲ.

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ