AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ

ಇಂದು ನಗರದಲ್ಲಿ ಮುಸ್ಲಿಂ ಭಾಂದವರ ಮೊಹರಂ ಹಬ್ಬ ಆಚರಣೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಈ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗಗಳ ಸಂಚಾರ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ
ಸಂಚಾರ ಮಾರ್ಗದಲ್ಲಿ ಬದಲಾವಣೆ
ಗಂಗಾಧರ​ ಬ. ಸಾಬೋಜಿ
|

Updated on:Jul 06, 2025 | 8:04 AM

Share

ಬೆಂಗಳೂರು, ಜುಲೈ 06: ಇಂದು ಮುಸ್ಲಿಂ ಭಾಂದವರ ಮೊಹರಂ (Muharram) ಹಬ್ಬದ ಆಚರಣೆಯ ಹಿನ್ನಲೆ  ಮಧ್ಯಾಹ್ನ 11 ಗಂಟೆಯಿಂದ ಸಂಜೆ 05-30 ಗಂಟೆಯವರೆಗೆ ಬೆಂಗಳೂರು (bangaluru) ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಪರ್ಯಾಯ ಮಾರ್ಗಗಳು ಹೀಗಿವೆ.

ಈ ಸಂಚಾರ ಮಾರ್ಗ ಬದಲಾವಣೆ

  • ಬ್ರಿಗೇಡ್ ರಸ್ತೆ ಮತ್ತು ರಿಚ್ಮಂಡ್ ರಸ್ತೆಯ ಮೂಲಕ ಹೊಸೂರು ರಸ್ತೆ ಕಡೆಗೆ ವೆಲ್ಲಾರಾ ಜಂಕ್ಷನ್ (ಶೂಲೆ ವೃತ್ತ) ಮುಖಾಂತರ ಸವಾರರು ತೆರಳಬಹುದಾಗಿದೆ.

ಬೆಂಗಳೂರು ನಗರ ಸಂಚಾರ ಪೊಲೀಸ್​ ಟ್ವೀಟ್​

  • ಓಲ್ಡ್ ಪಿ.ಎಸ್ ಜಂಕ್ಷನ್ ಎಡ ತಿರುವು ಪಡೆದು ವುಡ್ ಸ್ಟ್ರೀಟ್, ಟೇಟ್​ ಲೇನ್​, ರಿಚ್ಮಂಡ್​ ರಸ್ತೆಯ ಮೂಲಕ ರಿಚ್ಮಂಡ್​ ಜಂಕ್ಷನ್, ಶಾಂತಿನಗರ ಜಂಕ್ಷನ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಜಂಕ್ಷನ್, ಸಿಎಂಪಿ ಜಂಕ್ಷನ್ ಮೂಲಕ ಹೊಸೂರು ರಸ್ತೆ ಕಡೆಗೆ ಸಂಚರಿಸುವುದು.

ಇದನ್ನೂ ಓದಿ: ಸ್ಟಿಕ್ಕರ್ ಅಂಟಿಸಲು ಕೊಟ್ಯಂತರ ರೂ ಖರ್ಚು: ಸಮೀಕ್ಷೆಯ ಖರ್ಚು ವೆಚ್ಚಗಳ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ

  • ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಆನೇಪಾಳ್ಯ ಜಂಕ್ಷನ್ ಬಳಿ ಸಿಮೆಂಟ್ರಿ ಕ್ರಾಸ್​​ನಲ್ಲಿ ಎಡ ತಿರುವು ಪಡೆದು ಬರ್ಲಿ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ವೃತ್ತ, ಶಾಂತಿನಗರ ಕಡೆಗೆ ಹಾಗೂ ರೀನಿಯಸ್​ ಸ್ಟ್ರೀಟ್ ಮೂಲಕ ರಿಚ್ಮಂಡ್​ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು.

ಇದನ್ನೂ ಓದಿ: ಬೆಸ್ಕಾಂ ಟೆಂಪರರಿ ಕನೆಕ್ಷನ್ ಪಡೆದವರ ಬವಣೆ: ಸರ್ಕಾರ ತೋರಬೇಕಿದೆ ಕರುಣೆ..!

  • ಹೊಸೂರು ರಸ್ತೆ ಕಡೆಯಿಂದ ಬರುವ ಭಾರಿ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ದಯ್ಯ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು. ಈ ಮೇಲ್ಕಂಡಂತೆ ಮಾಡಲಾದ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Sun, 6 July 25

‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು