AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ

ಇಂದು ನಗರದಲ್ಲಿ ಮುಸ್ಲಿಂ ಭಾಂದವರ ಮೊಹರಂ ಹಬ್ಬ ಆಚರಣೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಈ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗಗಳ ಸಂಚಾರ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ
ಸಂಚಾರ ಮಾರ್ಗದಲ್ಲಿ ಬದಲಾವಣೆ
ಗಂಗಾಧರ​ ಬ. ಸಾಬೋಜಿ
|

Updated on:Jul 06, 2025 | 8:04 AM

Share

ಬೆಂಗಳೂರು, ಜುಲೈ 06: ಇಂದು ಮುಸ್ಲಿಂ ಭಾಂದವರ ಮೊಹರಂ (Muharram) ಹಬ್ಬದ ಆಚರಣೆಯ ಹಿನ್ನಲೆ  ಮಧ್ಯಾಹ್ನ 11 ಗಂಟೆಯಿಂದ ಸಂಜೆ 05-30 ಗಂಟೆಯವರೆಗೆ ಬೆಂಗಳೂರು (bangaluru) ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಪರ್ಯಾಯ ಮಾರ್ಗಗಳು ಹೀಗಿವೆ.

ಈ ಸಂಚಾರ ಮಾರ್ಗ ಬದಲಾವಣೆ

  • ಬ್ರಿಗೇಡ್ ರಸ್ತೆ ಮತ್ತು ರಿಚ್ಮಂಡ್ ರಸ್ತೆಯ ಮೂಲಕ ಹೊಸೂರು ರಸ್ತೆ ಕಡೆಗೆ ವೆಲ್ಲಾರಾ ಜಂಕ್ಷನ್ (ಶೂಲೆ ವೃತ್ತ) ಮುಖಾಂತರ ಸವಾರರು ತೆರಳಬಹುದಾಗಿದೆ.

ಬೆಂಗಳೂರು ನಗರ ಸಂಚಾರ ಪೊಲೀಸ್​ ಟ್ವೀಟ್​

  • ಓಲ್ಡ್ ಪಿ.ಎಸ್ ಜಂಕ್ಷನ್ ಎಡ ತಿರುವು ಪಡೆದು ವುಡ್ ಸ್ಟ್ರೀಟ್, ಟೇಟ್​ ಲೇನ್​, ರಿಚ್ಮಂಡ್​ ರಸ್ತೆಯ ಮೂಲಕ ರಿಚ್ಮಂಡ್​ ಜಂಕ್ಷನ್, ಶಾಂತಿನಗರ ಜಂಕ್ಷನ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಜಂಕ್ಷನ್, ಸಿಎಂಪಿ ಜಂಕ್ಷನ್ ಮೂಲಕ ಹೊಸೂರು ರಸ್ತೆ ಕಡೆಗೆ ಸಂಚರಿಸುವುದು.

ಇದನ್ನೂ ಓದಿ: ಸ್ಟಿಕ್ಕರ್ ಅಂಟಿಸಲು ಕೊಟ್ಯಂತರ ರೂ ಖರ್ಚು: ಸಮೀಕ್ಷೆಯ ಖರ್ಚು ವೆಚ್ಚಗಳ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ

  • ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಆನೇಪಾಳ್ಯ ಜಂಕ್ಷನ್ ಬಳಿ ಸಿಮೆಂಟ್ರಿ ಕ್ರಾಸ್​​ನಲ್ಲಿ ಎಡ ತಿರುವು ಪಡೆದು ಬರ್ಲಿ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ವೃತ್ತ, ಶಾಂತಿನಗರ ಕಡೆಗೆ ಹಾಗೂ ರೀನಿಯಸ್​ ಸ್ಟ್ರೀಟ್ ಮೂಲಕ ರಿಚ್ಮಂಡ್​ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು.

ಇದನ್ನೂ ಓದಿ: ಬೆಸ್ಕಾಂ ಟೆಂಪರರಿ ಕನೆಕ್ಷನ್ ಪಡೆದವರ ಬವಣೆ: ಸರ್ಕಾರ ತೋರಬೇಕಿದೆ ಕರುಣೆ..!

  • ಹೊಸೂರು ರಸ್ತೆ ಕಡೆಯಿಂದ ಬರುವ ಭಾರಿ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ದಯ್ಯ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು. ಈ ಮೇಲ್ಕಂಡಂತೆ ಮಾಡಲಾದ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Sun, 6 July 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?