AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ

ಇಂದು ನಗರದಲ್ಲಿ ಮುಸ್ಲಿಂ ಭಾಂದವರ ಮೊಹರಂ ಹಬ್ಬ ಆಚರಣೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಈ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗಗಳ ಸಂಚಾರ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ
ಸಂಚಾರ ಮಾರ್ಗದಲ್ಲಿ ಬದಲಾವಣೆ
ಗಂಗಾಧರ​ ಬ. ಸಾಬೋಜಿ
|

Updated on:Jul 06, 2025 | 8:04 AM

Share

ಬೆಂಗಳೂರು, ಜುಲೈ 06: ಇಂದು ಮುಸ್ಲಿಂ ಭಾಂದವರ ಮೊಹರಂ (Muharram) ಹಬ್ಬದ ಆಚರಣೆಯ ಹಿನ್ನಲೆ  ಮಧ್ಯಾಹ್ನ 11 ಗಂಟೆಯಿಂದ ಸಂಜೆ 05-30 ಗಂಟೆಯವರೆಗೆ ಬೆಂಗಳೂರು (bangaluru) ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಪರ್ಯಾಯ ಮಾರ್ಗಗಳು ಹೀಗಿವೆ.

ಈ ಸಂಚಾರ ಮಾರ್ಗ ಬದಲಾವಣೆ

  • ಬ್ರಿಗೇಡ್ ರಸ್ತೆ ಮತ್ತು ರಿಚ್ಮಂಡ್ ರಸ್ತೆಯ ಮೂಲಕ ಹೊಸೂರು ರಸ್ತೆ ಕಡೆಗೆ ವೆಲ್ಲಾರಾ ಜಂಕ್ಷನ್ (ಶೂಲೆ ವೃತ್ತ) ಮುಖಾಂತರ ಸವಾರರು ತೆರಳಬಹುದಾಗಿದೆ.

ಬೆಂಗಳೂರು ನಗರ ಸಂಚಾರ ಪೊಲೀಸ್​ ಟ್ವೀಟ್​

  • ಓಲ್ಡ್ ಪಿ.ಎಸ್ ಜಂಕ್ಷನ್ ಎಡ ತಿರುವು ಪಡೆದು ವುಡ್ ಸ್ಟ್ರೀಟ್, ಟೇಟ್​ ಲೇನ್​, ರಿಚ್ಮಂಡ್​ ರಸ್ತೆಯ ಮೂಲಕ ರಿಚ್ಮಂಡ್​ ಜಂಕ್ಷನ್, ಶಾಂತಿನಗರ ಜಂಕ್ಷನ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಜಂಕ್ಷನ್, ಸಿಎಂಪಿ ಜಂಕ್ಷನ್ ಮೂಲಕ ಹೊಸೂರು ರಸ್ತೆ ಕಡೆಗೆ ಸಂಚರಿಸುವುದು.

ಇದನ್ನೂ ಓದಿ: ಸ್ಟಿಕ್ಕರ್ ಅಂಟಿಸಲು ಕೊಟ್ಯಂತರ ರೂ ಖರ್ಚು: ಸಮೀಕ್ಷೆಯ ಖರ್ಚು ವೆಚ್ಚಗಳ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ

  • ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಆನೇಪಾಳ್ಯ ಜಂಕ್ಷನ್ ಬಳಿ ಸಿಮೆಂಟ್ರಿ ಕ್ರಾಸ್​​ನಲ್ಲಿ ಎಡ ತಿರುವು ಪಡೆದು ಬರ್ಲಿ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ವೃತ್ತ, ಶಾಂತಿನಗರ ಕಡೆಗೆ ಹಾಗೂ ರೀನಿಯಸ್​ ಸ್ಟ್ರೀಟ್ ಮೂಲಕ ರಿಚ್ಮಂಡ್​ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು.

ಇದನ್ನೂ ಓದಿ: ಬೆಸ್ಕಾಂ ಟೆಂಪರರಿ ಕನೆಕ್ಷನ್ ಪಡೆದವರ ಬವಣೆ: ಸರ್ಕಾರ ತೋರಬೇಕಿದೆ ಕರುಣೆ..!

  • ಹೊಸೂರು ರಸ್ತೆ ಕಡೆಯಿಂದ ಬರುವ ಭಾರಿ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ದಯ್ಯ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು. ಈ ಮೇಲ್ಕಂಡಂತೆ ಮಾಡಲಾದ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Sun, 6 July 25

Follow Us
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?