AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ

ಇಂದು ನಗರದಲ್ಲಿ ಮುಸ್ಲಿಂ ಭಾಂದವರ ಮೊಹರಂ ಹಬ್ಬ ಆಚರಣೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಈ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗಗಳ ಸಂಚಾರ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ
ಸಂಚಾರ ಮಾರ್ಗದಲ್ಲಿ ಬದಲಾವಣೆ
ಗಂಗಾಧರ​ ಬ. ಸಾಬೋಜಿ
|

Updated on:Jul 06, 2025 | 8:04 AM

Share

ಬೆಂಗಳೂರು, ಜುಲೈ 06: ಇಂದು ಮುಸ್ಲಿಂ ಭಾಂದವರ ಮೊಹರಂ (Muharram) ಹಬ್ಬದ ಆಚರಣೆಯ ಹಿನ್ನಲೆ  ಮಧ್ಯಾಹ್ನ 11 ಗಂಟೆಯಿಂದ ಸಂಜೆ 05-30 ಗಂಟೆಯವರೆಗೆ ಬೆಂಗಳೂರು (bangaluru) ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಪರ್ಯಾಯ ಮಾರ್ಗಗಳು ಹೀಗಿವೆ.

ಈ ಸಂಚಾರ ಮಾರ್ಗ ಬದಲಾವಣೆ

  • ಬ್ರಿಗೇಡ್ ರಸ್ತೆ ಮತ್ತು ರಿಚ್ಮಂಡ್ ರಸ್ತೆಯ ಮೂಲಕ ಹೊಸೂರು ರಸ್ತೆ ಕಡೆಗೆ ವೆಲ್ಲಾರಾ ಜಂಕ್ಷನ್ (ಶೂಲೆ ವೃತ್ತ) ಮುಖಾಂತರ ಸವಾರರು ತೆರಳಬಹುದಾಗಿದೆ.

ಬೆಂಗಳೂರು ನಗರ ಸಂಚಾರ ಪೊಲೀಸ್​ ಟ್ವೀಟ್​

  • ಓಲ್ಡ್ ಪಿ.ಎಸ್ ಜಂಕ್ಷನ್ ಎಡ ತಿರುವು ಪಡೆದು ವುಡ್ ಸ್ಟ್ರೀಟ್, ಟೇಟ್​ ಲೇನ್​, ರಿಚ್ಮಂಡ್​ ರಸ್ತೆಯ ಮೂಲಕ ರಿಚ್ಮಂಡ್​ ಜಂಕ್ಷನ್, ಶಾಂತಿನಗರ ಜಂಕ್ಷನ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಜಂಕ್ಷನ್, ಸಿಎಂಪಿ ಜಂಕ್ಷನ್ ಮೂಲಕ ಹೊಸೂರು ರಸ್ತೆ ಕಡೆಗೆ ಸಂಚರಿಸುವುದು.

ಇದನ್ನೂ ಓದಿ: ಸ್ಟಿಕ್ಕರ್ ಅಂಟಿಸಲು ಕೊಟ್ಯಂತರ ರೂ ಖರ್ಚು: ಸಮೀಕ್ಷೆಯ ಖರ್ಚು ವೆಚ್ಚಗಳ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ

  • ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಆನೇಪಾಳ್ಯ ಜಂಕ್ಷನ್ ಬಳಿ ಸಿಮೆಂಟ್ರಿ ಕ್ರಾಸ್​​ನಲ್ಲಿ ಎಡ ತಿರುವು ಪಡೆದು ಬರ್ಲಿ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ವೃತ್ತ, ಶಾಂತಿನಗರ ಕಡೆಗೆ ಹಾಗೂ ರೀನಿಯಸ್​ ಸ್ಟ್ರೀಟ್ ಮೂಲಕ ರಿಚ್ಮಂಡ್​ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು.

ಇದನ್ನೂ ಓದಿ: ಬೆಸ್ಕಾಂ ಟೆಂಪರರಿ ಕನೆಕ್ಷನ್ ಪಡೆದವರ ಬವಣೆ: ಸರ್ಕಾರ ತೋರಬೇಕಿದೆ ಕರುಣೆ..!

  • ಹೊಸೂರು ರಸ್ತೆ ಕಡೆಯಿಂದ ಬರುವ ಭಾರಿ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ದಯ್ಯ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು. ಈ ಮೇಲ್ಕಂಡಂತೆ ಮಾಡಲಾದ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Sun, 6 July 25

Follow Us
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ